
ಶಿವಮೊಗ್ಗ (ಜು.17): ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯಕ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಶ್ರೀರಾಂಪುರ ಗ್ರಾಮದ ನಿವಾಸಿ ವಿನೋದ್ ತಮ್ಮ ತಾಯಿಯ ಹೆಸರಿನಲ್ಲಿರುವ 30×50 ಅಳತೆಯ ಜಾಗದಲ್ಲಿ ಆರ್ಸಿಸಿ ಮನೆ ನಿರ್ಮಿಸಲು ಇ-ಸ್ವತ್ತು ನೊಂದಣಿಗಾಗಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಸಲ್ಲಿಸಿದ ಬಳಿಕವೂ ಹಲವು ದಿನಗಳ ಕಾಲ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಕೆಲಸ ಮುಂದುವರಿಯದಿರುವ ಕುರಿತು ವಿಚಾರಿಸಲು ಕಾರ್ಯದರ್ಶಿ ಕುಮಾರ್ ನಾಯಕ್ರನ್ನು ಭೇಟಿಯಾದಾಗ, ಅವರು ₹3,000 ಲಂಚದ ಬೇಡಿಕೆ ಇಟ್ಟಿದ್ದರು.
ವಿನೋದ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಕುಮಾರ್ ನಾಯಕ್ ಲಂಚ ಸ್ವೀಕರಿಸುವ ವೇಳೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ಈ ಘಟನೆಯು ಗ್ರಾಮೀಣ ಆಡಳಿತದಲ್ಲಿ ಭ್ರಷ್ಟಾಚಾರದ ಆರೋಪಗಳಿಗೆ ಮತ್ತೊಂದು ಉದಾಹರಣೆಯಾಗಿದೆ.
ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸರಕಾರಿ ಕಚೇರಿಗಳಲ್ಲಿ ಲಂಚದ ಕಿರಿಕಿರಿಯಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿರುವುದರಿಂದ ಗ್ರಾಮಪಂಚಾಯ್ತಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ