ಡೇಂಜರ್ ಡಿಸೆಂಬರ್: ಅಡಿಕೆ ತೋಟದಲ್ಲಿ ವಿದ್ಯುತ್ ಶಾಕ್, ಕೂಲಿ ಕಾರ್ಮಿಕ ಬಲಿ! ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದೌಡು

Published : Dec 26, 2025, 05:40 PM IST
Shivamogga Laborer Electrocuted While Harvesting Areca Nut Minister Visits

ಸಾರಾಂಶ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಅಡಿಕೆ ಕೊಯ್ಯಲು ಬಳಸುತ್ತಿದ್ದ ದೋಟಿ ವಿದ್ಯುತ್ ತಂತಿಗೆ ತಗುಲಿದ್ದೇ ದುರಂತಕ್ಕೆ ಕಾರಣವಾಗಿದ್ದು, ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗ (ಡಿ.26): ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಂಡ್ರಳ್ಳಿಯಲ್ಲಿ ನಡೆದಿದೆ.

ದೋಟಿಗೆ ತಗುಲಿದ ವಿದ್ಯುತ್: ಸ್ಥಳದಲ್ಲೇ ಕಾರ್ಮಿಕನ ದುರ್ಮರಣ

ಮಂಡ್ರಳ್ಳಿ ಗ್ರಾಮದ ಉಡುಪ ಎಂಬುವವರ ಅಡಿಕೆ ತೋಟದಲ್ಲಿ ಇಂದು ಕೆಲಸ ನಡೆಯುತ್ತಿತ್ತು. ಕೂಲಿ ಕಾರ್ಮಿಕ ಪುಟ್ಟಸ್ವಾಮಿ (48) ಅವರು ಅಡಿಕೆ ಗೊನೆ ಕೊಯ್ಯುತ್ತಿದ್ದಾಗ, ಅವರು ಬಳಸುತ್ತಿದ್ದ ದೋಟಿ (ಕೋಲು) ಆಕಸ್ಮಿಕವಾಗಿ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ತಕ್ಷಣವೇ ದೋಟಿಯ ಮೂಲಕ ವಿದ್ಯುತ್ ಪ್ರವಹಿಸಿ ಪುಟ್ಟಸ್ವಾಮಿ ಅವರು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ಮತ್ತೊಬ್ಬನ ಸ್ಥಿತಿ ಗಂಭೀರ; ಮೆಗ್ಗಾನ್ ಆಸ್ಪತ್ರೆಗೆ ರವಾನೆ

ಇದೇ ವೇಳೆ ತೋಟದಲ್ಲಿದ್ದ ಮತ್ತೊಬ್ಬ ವ್ಯಕ್ತಿಗೂ ವಿದ್ಯುತ್ ಶಾಕ್ ತಗುಲಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಗಾಯಾಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶವಗಾರಕ್ಕೆ ಸಚಿವ ಮಧು ಬಂಗಾರಪ್ಪಭೇಟಿ

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಹೊಸನಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದರು. ಮೃತ ಪುಟ್ಟಸ್ವಾಮಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಪರಿಹಾರಕ್ಕೆ ಸೂಚನೆ ಹಾಗೂ ಚಿಕಿತ್ಸೆಗೆ ತುರ್ತು ಕ್ರಮ

ಅವಘಡದ ಬಗ್ಗೆ ಅತೀವ ಸಂಕಟ ವ್ಯಕ್ತಪಡಿಸಿದ ಸಚಿವ ಮಧು ಬಂಗಾರಪ್ಪ, ಮೃತ ಕಾರ್ಮಿಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಅಲ್ಲದೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿಗೆ ಉತ್ತಮ ವೈದ್ಯಕೀಯ ಸೇವೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹತ್ರ ದುಡ್ಡಿಲ್ಲ ಎಂದ ಶಾಸಕ; 'ಜಾಗ ಕೊಡ್ರಪ್ಪ ಸಾಕು, ಪ್ರಾಜೆಕ್ಟ್ ನಾನು ಮಾಡ್ತೀನಿ' ಕೇಂದ್ರ ಸಚಿವ ಸೋಮಣ್ಣ ಖಡಕ್ ಕೌಂಟರ್!
ಬೆಂಗಳೂರು ಏರ್‌ಪೋರ್ಟ್‌ ಪಿಕ್-ಅಪ್ ನಿಯಮ ಸಡಿಲಿಕೆ: ಫ್ರೀ ಪಾರ್ಕಿಂಗ್ 15 ನಿಮಿಷಕ್ಕೆ ವಿಸ್ತರಣೆ!