ಕಿವುಡರ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ

Published : Sep 28, 2025, 06:40 PM IST
Madhu Bangarappa

ಸಾರಾಂಶ

ಕಿವುಡರ ಕಷ್ಟಗಳು ಅರ್ಥವಾಗುತ್ತಿದೆ. ಇಲ್ಲಿ ನಾವೆಲ್ಲರೂ ಒಂದೇ. ಭೇದ-ಭಾವ ಬೇಡ, ಮಾನವೀಯತೆಯ ದೃಷ್ಟಿಯಿಂದ ಇವರ ತಲ್ಲಣಗಳನ್ನು ನಾವು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ (ಸೆ.28): ಕಿವುಡರ ಕಷ್ಟಗಳು ಅರ್ಥವಾಗುತ್ತಿದೆ. ಇಲ್ಲಿ ನಾವೆಲ್ಲರೂ ಒಂದೇ. ಭೇದ-ಭಾವ ಬೇಡ, ಮಾನವೀಯತೆಯ ದೃಷ್ಟಿಯಿಂದ ಇವರ ತಲ್ಲಣಗಳನ್ನು ನಾವು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದ್ದ ವಿಶ್ವ ಕಿವುಡರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಿವುಡರ ಸಂಕಷ್ಟಗಳನ್ನು ಹೃದಯದ ಕಿವಿಯಿಂದ ಆಲಿಸಿದ ಅವರ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದರು.

ಸರ್ಕಾರ ಇಂತಹವರ ನೆರವಿಗೆ ಬರಬೇಕಾಗಿರುವುದು ನ್ಯಾಯಬದ್ಧವಾಗಿಯೇ ಇದೆ. ಈಗ ಇವರಿಗೆ 1400 ಪಿಂಚಣಿ ಬರುತ್ತದೆ ಎಂದು ಹೇಳಿದ್ದೀರಾ. ಇದನ್ನು 5 ಸಾವಿರಕ್ಕೆ ಏರಿಸಬೇಕು ಎಂದು ಮನವಿ ಕೂಡ ಮಾಡಿದ್ದೀರಿ ಇದನ್ನು ಮುಖ್ಯಮಂತ್ರಿಗಳ ಬಳಿ ಚರ್ಚಿಸುತ್ತೇನೆ. ಅ.3ರಂದು ನೀವು ಪದಾಧಿಕಾರಿಗಳು ಬೆಂಗಳೂರಿಗೆ ಬನ್ನಿ, ನಿಮ್ಮೊಂದಿಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡೋಣ. ನಿಮ್ಮೆಲ್ಲಾ ಬೇಡಿಕೆಗಳನ್ನು ನಾನು ಖಂಡಿತಾ ಈಡೇರಿಸುತ್ತೇನೆ ಎಂದು ಹೇಳಿದರು.

ನಿಮ್ಮ ಪರವಾಗಿ ನಾನಿದ್ದೇನೆ

ಇಂದಿನ ವಿಶ್ವ ಕಿವುಡರ ದಿನಾಚರಣೆಯ ಎಲ್ಲಾ ಖರ್ಚನ್ನು ನಾನೇ ಸ್ವತಃ ಭರಿಸುತ್ತೇನೆ. ಇದು ಅನುಕಂಪವಲ್ಲ, ನನ್ನ ಪ್ರೀತಿಯ ಸೇವೆಯಷ್ಟೇ. ನಾವೆಲ್ಲರೂ ಕರ್ತವ್ಯ ಎಂದುಕೊಂಡೇ ಇಂತಹ ಕೆಲಸಗಳನ್ನು ಮಾಡಬೇಕಾಗಿದೆ. ನಿಮ್ಮ ಪರವಾಗಿ ನಾನಿದ್ದೇನೆ. ನಿಮ್ಮ ಭಾಷೆ ನನಗೆ ಅರ್ಥವಾಗಿದೆ. ನಾವು ಇದನ್ನು ಹೃದಯದಿಂದ ಮತ್ತಷ್ಟು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು. ಸಂಘದ ಗೌರವಾಧ್ಯಕ್ಷ ಕೆ.ಎಸ್.ಶಂಕರ್ ಮಾತನಾಡಿ, ರಾಜ್ಯದಲ್ಲಿ 5 ಲಕ್ಷ ಮಕ್ಕಳು ಕಿವುಡರಿದ್ದಾರೆ. ಶೋಷಣೆಗೆ ಒಳಗಾಗಿದ್ದಾರೆ.

ಎಷ್ಟೋ ಮಕ್ಕಳು ಶಾಲೆಯಲ್ಲಿ ಪಾಠ ಅರ್ಥವಾಗದೆ ಶಿಕ್ಷಣವನ್ನೇ ಮೊಟಕುಗೊಳಿಸುತ್ತಾರೆ. ಹಾಗಾಗಿ ನಮಗಿರುವ ಪಿಂಚಣಿಯನ್ನು 5 ಸಾವಿರಕ್ಕೆ ಹೆಚ್ಚಿಸಬೇಕು. ಉಚಿತ ಪ್ರಯಾಣದ ವ್ಯವಸ್ಥೆ ನೀಡಬೇಕು. ವಿವಾಹ ಪ್ರೋತ್ಸಾಹಧನ ನೀಡಬೇಕು. ಕಿವುಡರಿಗಾಗಿಯೇ ಇರುವ ಸನ್ನೆಭಾಷೆ ಶಾಲೆಗಳನ್ನು ಮತ್ತಷ್ಟು ತೆರೆಯಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಹನುಮಂತಪ್ಪ, ಉಮಾಶಂಕರ್, ದೇವರಾಜ್, ನವೀನ್‌ಕುಮಾರ್, ಸಂದೇಶ್, ಕಾಂಗ್ರೆಸ್ ಮುಖಂಡರಾದ ಜಿ.ಡಿ.ಮಂಜುನಾಥ್, ವೈ.ಎಚ್.ನಾಗರಾಜ್, ರಮೇಶ್ ಶಂಕರಘಟ್ಟ ಸೇರಿದಂತೆ ಹಲವರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!