ಯಾದಗಿರಿ: ಮಕ್ಕಳನ್ನ ಅಂಗನವಾಡಿ ಕೇಂದ್ರದಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!

Published : Aug 02, 2025, 12:21 PM IST
Yadgir news

ಸಾರಾಂಶ

ಯಾದಗಿರಿ ಜಿಲ್ಲೆಯ ಬುದೂರ್ ಗ್ರಾಮದ ಅಂಗನವಾಡಿಯಲ್ಲಿ ಮಕ್ಕಳನ್ನು ಲಾಕ್ ಮಾಡಿ ಸಹಾಯಕಿ ಜಮೀನಿಗೆ ಹೋದ ಘಟನೆ. ಗ್ರಾಮಸ್ಥರಿಂದ ಆಕ್ರೋಶ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ.

ಯಾದಗಿರಿ (ಆ.2): ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದೂರ್ ಗ್ರಾಮದ ಕೇಂದ್ರ-1 ಅಂಗನವಾಡಿಯಲ್ಲಿ ನಿನ್ನೆ (ಜುಲೈ 31, 2025) ನಡೆದ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಅಂಗನವಾಡಿ ಸಹಾಯಕಿ ಸಾವಿತ್ರಮ್ಮ, ಮಕ್ಕಳನ್ನು ಕೇಂದ್ರದೊಳಗೆ ಬೀಗ ಹಾಕಿ ಜಮೀನು ಕೆಲಸಕ್ಕೆ ಹೋಗಿರುವ ಅಮಾನವೀಯ ಕೃತ್ಯವು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಯ ವಿವರ: ಅಂಗನವಾಡಿಯ ಮುಖ್ಯ ಸಹಾಯಕಿ ಮಾಸಿಕ ಸಭೆಗಾಗಿ ಬೇರೊಂದು ಗ್ರಾಮಕ್ಕೆ ತೆರಳಿದ್ದ ವೇಳೆ, ಸಹಾಯಕಿ ಸಾವಿತ್ರಮ್ಮ ಮಕ್ಕಳನ್ನು ಕೊಠಡಿಯಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋಗಿದ್ದಾರೆ. ಲಾಕ್ ಆಗಿರುವ ಕೊಠಡಿಯಲ್ಲಿ ಸಿಲುಕಿದ ಮಕ್ಕಳು ಭಯದಿಂದ ಅಳಲು ಆರಂಭಿಸಿದ್ದಾರೆ. ಮಕ್ಕಳ ಅಳುವಿನ ಶಬ್ದ ಕೇಳಿದ ಸ್ಥಳೀಯರು ಬಂದು ನೋಡಿದರೆ ಅಂಗನವಾಡಿ ಲಾಕ್ ಆಗಿದೆ, ಒಳಗಡೆ ಮಕ್ಕಳಿದ್ದಾರೆ. ತಕ್ಷಣ ಮುಖ್ಯ ಸಹಾಯಕಿಗೆ ವಿಷಯ ತಿಳಿಸಿದ್ದಾರೆ. ಮುಖ್ಯ ಸಹಾಯಕಿ ಸ್ಥಳಕ್ಕೆ ಆಗಮಿಸಿ ಬಾಗಿಲು ತೆರೆದಿದ್ದಾರೆ.

ಗ್ರಾಮಸ್ಥರು ತಪ್ಪಿತಸ್ಥ ಸಹಾಯಕಿ ಸಾವಿತ್ರಮ್ಮ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಘಟನೆಯಿಂದಾಗಿ ಮಕ್ಕಳ ಸುರಕ್ಷತೆ ಕುರಿತಂತೆ ಗಂಭೀರ ಪ್ರಶ್ನೆಗಳು ಎದ್ದಿವೆ. ಮುಂದಿನ ಕ್ರಮಗಳೇನು? ಸಂಬಂಧಪಟ್ಟ ಇಲಾಖೆಯಿಂದ ಈ ಘಟನೆಗೆ ಸಂಬಂಧ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುತ್ತಾ ಕಾದು ನೋಡಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌