ದಸರಾ ಅಂಬಾರಿ ಹೊತ್ತಿದ್ದ ಆನೆಗೆ ಗುಂಡು ಹೊಡೆದವನ ಬಂಧನ!

Published : Dec 17, 2022, 09:01 AM ISTUpdated : Dec 17, 2022, 09:04 AM IST
ದಸರಾ ಅಂಬಾರಿ ಹೊತ್ತಿದ್ದ ಆನೆಗೆ ಗುಂಡು ಹೊಡೆದವನ ಬಂಧನ!

ಸಾರಾಂಶ

ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಯನ್ನು 14 ಬಾರಿ ಅಂಬಾರಿಯಲ್ಲಿ ಹೊತ್ತು ತಿರುಗಾಡಿದ್ದ ಬಲರಾಮ ಆನೆಗೆ ಗುಂಡು ಹೊಡೆದಿದ್ದ ಜಮೀನಿನ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.  

ಮೈಸೂರು (ಡಿ. 17): ಮೈಸೂರಿನ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ 14 ಬಾರಿ ದೇವಿ ಚಾಮುಂಡೇಶ್ವರಿಯನ್ನು ಹೊತ್ತಿದ್ದ ಬಲರಾಮನಿಗೆ ಗುಂಡು ಹಾಕಿದ್ದ ಜಮೀನಿನ ಮಾಲೀಕನ್ನು ಪೊಲೀಸರು ಬಂದಿದ್ದಾರೆ.  ಆನೆಗೆ ಗುರುವಾರ ರಾತ್ರಿ ಜಮೀನಿನ ಮಾಲೀಕ ಸುರೇಶ್ ಎಂಬಾತ ಗುಂಡು ಹಾರಿಸಿದ್ದ. ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಆತನನ್ನು ಬಂಧಿಸಿದ್ದಾರೆ.  ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿನ ಮಾಲೀಕನಾಗಿರುವ ಸುರೇಶ್‌, ತಮ್ಮ ಜಮೀನಿಗೆ ಆನೆ ಬಂದಿದ್ದರಿಂದ ಸಿಟ್ಟಾಗಿದ್ದ. ಆತನಿಗೆ ಇದು ಮೈಸೂರಿನ ದಸರಾ ಆನೆ ಎನ್ನುವುದು ಗೊತ್ತಿರಲಿಲ್ಲ. ಬಂದೂಕಿನಿಂದ ಆತ ಹಾರಿಸಿದ್ದ ಗುಂಡು, ಬಲರಾಮನ ತೊಡೆಗೆ ಹೊಕ್ಕಿತ್ತು. ಆ ಬಳಿಕ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಪ್ರಸ್ತುತ ಬಲರಾಮ‌ ಚೇತರಿಸಿಕೊಂಡಿದ್ದಾನೆ. 

ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರ ಗಾಯ: ದಸರಾ ಆನೆ ಗೋಪಾಲಸ್ವಾಮಿ ಸಾವು

ಇನ್ನೊಂದೆಡೆ ಜಮೀನಿನ ಮಾಲೀಕ ವನ್ಯ ಜೀವಿ ಕಾಯ್ದೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ,‌ ಸಿಂಗಲ್ ಬ್ಯಾರಲ್ ಬಂದೂಕು, ಕಾರ್ಟ್ರಿಜ್ ವಶಪಡಿಸಿಕೊಳ್ಳಲಾಗಿದೆ.  ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಈ ಬಾರಿಯ ದಸರೆಗೆ 28.74 ಕೋಟಿ ರು. ವೆಚ್ಚ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!