
• ಅಂಶಿ ಪ್ರಸನ್ನಕುಮಾರ್
ಮೈಸೂರು (ಏ.10): ಮೈಸೂರನ್ನು ಕೇಂದ್ರ ಸ್ಥಾನವನ್ನಾಗಿ ಹೊಂದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸುಮಾರು ಒಂದು ಲಕ್ಷ ಮಂದಿಗೆ ಉನ್ನತ ಶಿಕ್ಷಣ ನೀಡುತ್ತಿದೆ. ನ್ಯಾಕ್ನಿಂದ ಎ ಪ್ಲಸ್ ಶ್ರೇಣಿ ಪಡೆದಿರುವ ಈ ವಿವಿಯು ದೇಶದಲ್ಲಿ 'ಇಗ್ನೋ' ನಂತರ ಎರಡನೇ ಸ್ಥಾನದಲ್ಲಿದೆ. ಒಂದು ಹಂತದಲ್ಲಿ ತನ್ನ ಭೌಗೋಳಿಕ ವ್ಯಾಪ್ತಿ ಮೀರಿ, ಎಲ್ಲೆಡೆ ಸಂಸ್ಥೆಗಳನ್ನು ಆರಂಭಿಸಿದೆ. ಅಲ್ಲದೆ, ದೂರಶಿಕ್ಷಣ ಅಧೀನಕ್ಕೆ ಮಂಡಳಿ ಬಾರದ ಕೋರ್ಸುಗಳನ್ನು ಆರಂಭಿಸಿದೆ ಎಂಬ ಕಾರಣಕ್ಕಾಗಿ ಮಾನ್ಯತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ದೂಡಿದ್ದ ಮುಕ್ತ ವಿವಿ ಇತ್ತೀಚೆಗೆ ಚೇತರಿಸಿಕೊಂಡಿದೆ. ಮೊದಲು 18 ಕೋರ್ಸುಗಳು ಮಾತ್ರ ಇದ್ದವು.
ಯುಜಿಸಿ- ಡಿಇಬಿ 47 ಆಫ್ಲೈನ್, 10 ಆನ್ ಲೈನ್ ಶೈಕ್ಷಣಿಕ ಕಾಠ್ಯಕ್ರಮಗಳನ್ನು ವಿವಿ ಅನುಮೋದಿಸಿದೆ. ಸರ್ಟಿಫಿಕೆಟ್, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಕೋರ್ಸುಗಳನ್ನು ನಡೆಸಲಾಗುತ್ತಿದೆ. ಎಲ್ಲಾ ಕಾಯಂ ಅಧ್ಯಾಪಕರಿಗೂ ಮಾರ್ಗದರ್ಶನ ಮಾಡಲು ಅವಕಾಶ ಇರುವುದರಿಂದ ಸಾಕಷ್ಟು ಮಂದಿ ಇಲ್ಲಿ ಪಿಎಚ್.ಡಿ ಕೂಡ ಮಾಡುತ್ತಿ ದ್ದಾರೆ. ವಿವಿಧ ಸಂಶೋಧನಾ ಸಂಸ್ಥೆಗಳಿಂದ ಅನೇಕ ಸಂಶೋಧನಾ ಅನುದಾನ ಪಡೆದಿದೆ. ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಸಮ್ಮೇಳನ, ಕಾರ್ಯಾಗಾರಗಳನ್ನು ನಡೆಸಿದೆ. ಹಲವಾರು ಕೈಗಾರಿಕಾ ಹಾಗೂ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಒಡಂಬಡಿಕೆ ಕೂಡ ಮಾಡಿಕೊಂಡಿದೆ.
ಗುಲ್ಬರ್ಗಾ ವಿಶ್ವವಿದ್ಯಾಲಯ ನಾಲ್ಕು ಹೋಳಾದ ಬಳಿಕ ಕ್ಯಾಂಪಸ್ನ 800 ಎಕರೆ ಮೇಲೆ ಈಗ ಎಲ್ಲರ ಕಣ್ಣು!
ಮುಕ್ತ ವಿವಿಗೆ 130 ಬೋಧಕರ ಹುದ್ದೆ ಮಂಜೂ ರಾಗಿದ್ದು, 77 ಮಂದಿ ಕಾಯಂ ಬೋಧಕರು ಇದ್ದಾರೆ. ಅದೇ ರೀತಿ 547 ಬೋಧಕೇತರ ಹುದ್ದೆ ಮಂಜೂರಾ ಗಿದ್ದು, ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಇಲ್ಲ. ಹೀಗಾಗಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ತಾತ್ಕಾಲಿಕ ಸಿಬ್ಬಂದಿ ನೇಮಿಸಿಕೊಳ್ಳಲಾಗಿದೆ. ಜಿಲ್ಲೆಗೊಂ ದರಂತೆ ಹಾಗೂ ಬೆಂಗಳೂರಿನಲ್ಲಿ ಹೆಚ್ಚುವರಿಯಾಗಿ ಒಟ್ಟಾರೆ 36 ಪ್ರಾದೇಶಿಕ ಕೇಂದ್ರಗಳಿವೆ. ಇದಲ್ಲದೆ 139 ಅಧ್ಯಯನ ಕೇಂದ್ರಗಳಿವೆ. ಸುಮಾರು 70 ಕೋಟಿ ರು.ಗಳಷ್ಟು ಆಂತರಿಕ ಆದಾಯ ಇದೆ. ಬೆಂಗಳೂರಿನ ಹಜ್ ಭವನದಲ್ಲಿ ಮುಕ್ತ ವಿವಿಯ ಪ್ರಾದೇಶಿಕ ಕೇಂದ್ರ ತೆರೆಯಲು 10 ಕೋಟಿ ರು. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಪ್ರಕಟಿಸಿದ್ದಾರೆ.
ಅಲ್ಲಿ ಮುಸ್ಲಿಂ, ಕ್ರೈಸ್ತ, ಸಿಖ್, ಜೈನ ಸೇರಿ ಎಲ್ಲಾ ಅಲ್ಪಸಂಖ್ಯಾತರಿಗೂ ಶಿಕ್ಷಣ ನೀಡಲಾಗುತ್ತದೆ. ಇದಲ್ಲದೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಒಳ್ಳಾರಿ ಪ್ರಾದೇಶಿಕ ಕೇಂದ್ರಕ್ಕೆ 9.5 ಕೋಟಿ ರು. ಮಂಜೂರು ಮಾಡಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಕಟ್ಟಡ ನಿರ್ಮಾಣಕ್ಕೆ 3 ಕೋಟಿ ರು. ನೀಡಿದೆ. ಮೂಲ ಸೌಕರ್ಯ ವಿಸ್ತರಣೆಗೆ, ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಸಾಮರ್ಥ್ಯ ಹೆಚ್ಚಿಸಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಚಿತವಾಗಿ 20 ಎಕರೆಗೂ ಹೆಚ್ಚು ಭೂಮಿ ಪಡೆದಿದೆ. ಬೋಧಕ ಸದಸ್ಯರ ಸಂಶೋಧನೆಗಾಗಿ ಪ್ರಾರಂಭಿಕ ಅನುದಾನ ನೀಡುತ್ತಿದೆ. ಪ್ರಾದೇಶಿಕ ಕೇಂದ್ರ ಹಾಗೂ ಕಲಿಕಾರ್ಥಿ ಸಹಾಯ ಕೇಂದ್ರಗಳ ಜಾಲ ಬಲಪಡಿಸಲಾಗಿದೆ.
ವಿಶ್ವವಿದ್ಯಾಲಯ ನಡೆದು ಬಂದ ದಾರಿ: ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ 'ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ' ಎಂಬ ಘೋಷವಾಕ್ಯದೊಂದಿಗೆ ಮೈಸೂರು ವಿಶ್ವವಿದ್ಯಾನಿಲಯದ ಅಂಚೆ ಮತ್ತು ತೆರಪಿನ ಶಿಕ್ಷಣ ಸಂಸ್ಥೆಯನ್ನು 1996 ರಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವಾಗಿ ಪರಿವರ್ತಿಸಲಾಯಿತು. ಪ್ರೊ.ಸಿ.ಅಂಜನಮೂರ್ತಿ, ಡಾ.ಎನ್.ಎಸ್.ರಾಮೇಗೌಡ, ಡಾ.ಕೆ. ಸುಧಾರಾವ್, ಡಾ.ಬಿ.ಎ. ವಿವೇಕ ರೈ, ಪ್ರೊ.ಕೆ.ಎಸ್.ರಂಗಪ್ಪ, ಡಾ.ಎಂ.ಜಿ. ಕೃಷ್ಣನ್, ಡಾ.ಡಿ.ಶಿವಲಿಂಗಯ್ಯ, ಡಾ.ಎಸ್.ವಿದ್ಯಾಶಂಕರ್ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಪ್ರೊ.ಶರಣಪ್ಪ ವಿ.ಹಲಸೆ ಕುಲಪತಿಯಾಗಿದ್ದಾರೆ. ಪ್ರೊ.ಕೆ. ಎಸ್.ರಂಗಪ್ಪ ಅವರು ಕುಲಪತಿಯಾಗಿದ್ದ ಅವಧಿಯಲ್ಲಿ ಮುಕ್ತ ವಿವಿಗೆ ನೂತನ ಆಡಳಿತ ಭವನ, ವಿಜ್ಞಾನ ಭವನ, ಘಟಿಕೋತ್ಸವ ಭವನ ನಿರ್ಮಿಸಲಾಗಿದೆ. ಪ್ರಸ್ತುತ ನೂತನ ಪರೀಕ್ಷಾ ಭವನ ಕೂಡ ಇದೆ.
ಐಐಟಿ ರೀತಿ ಆಗ ಹೊರಟ ಯುವಿಸಿಇಗಿಲ್ಲ ಕ್ಯಾಂಪಸ್: ಪ್ಲೇಸ್ಮೆಂಟ್ನಲ್ಲಿ ರಾಜ್ಯಕ್ಕೇ ನಂ.1!
ನಾನು ಅಧಿಕಾರ ವಹಿಸಿಕೊಂಡ ನಂತರ 'ನ್ಯಾಕ್' ನಿಂದ ಎ ಪ್ಲಸ್ ಮಾನ್ಯತೆ ಸಿಕ್ಕಿದೆ. ಮೊದಲು 40 ಸಾವಿರ, ನಂತರ 46 ಸಾವಿರ, ಈಗ 15 ಸಾವಿರ ಸೇರಿ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಆಂತರಿಕ ಆದಾಯವೂ ಚೆನ್ನಾಗಿದೆ. ಶೈಕ್ಷಣಿಕ ಹಾಗೂ ಸಂಶೋಧನಾ ಚಟು ವಟಿಕೆಗಳೂ ಚೆನ್ನಾಗಿ ನಡೆಯು ತ್ತಿವೆ. ಬೋಧಕ, ಬೋಧಕೇತರಿಗೆ ಬಡ್ತಿ ನೀಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕ ಹಾಗೂ ಬೋಧಕೇತರರನ್ನು ನೇಮಿಸಲಾಗಿದೆ. ಇದನ್ನು ಕಾಯಂ ನೌಕರರು ವಿರೋಧಿಸುತ್ತಾರೆ. ಇದನ್ನು ಹೊರತುಪಡಿಸಿ ಚೆನ್ನಾಗಿ ನಡೆಯುತ್ತಿದೆ. ಸದ್ಯ ದಲ್ಲೇ ವಿವಿ ಸಿಲ್ವರ್ ಜ್ಯುಬಿಲಿ ಆಯೋಜಿಸಲಾಗುವುದು.
• ಪ್ರೊ.ಶರಣಪ್ಪ ವಿ ಹಲಸೆ, ಕುಲಪತಿ, ಕರ್ನಾಟಕ ರಾಜ್ಯ ಮುಕ್ತ ವಿವಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ