ಶ್ರೀರಾಮಸೇನೆ, ಬಜರಂಗದಳದಿಂದ ದೇಶದ ಸೈನಿಕರ ಯಶಸ್ಸಿಗಾಗಿ ಮಹಾಯಾಗ!

Published : Apr 29, 2025, 11:17 AM ISTUpdated : Apr 29, 2025, 11:37 AM IST
ಶ್ರೀರಾಮಸೇನೆ, ಬಜರಂಗದಳದಿಂದ ದೇಶದ ಸೈನಿಕರ ಯಶಸ್ಸಿಗಾಗಿ ಮಹಾಯಾಗ!

ಸಾರಾಂಶ

ಭಾರತ-ಪಾಕಿಸ್ತಾನ ಗಡಿಯಲ್ಲಿ ಉಗ್ರರ ದಾಳಿಗಳು ಮತ್ತು ಕದನ ವಿರಾಮ ಉಲ್ಲಂಘನೆಯಿಂದ ಉದ್ವಿಗ್ನ ವಾತಾವರಣ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಭಾರತೀಯ ಸೈನಿಕರ ಶೌರ್ಯ, ಶಕ್ತಿ, ಮತ್ತು ಯಶಸ್ಸಿಗಾಗಿ ಬೆಂಗಳೂರಿನ ರಾಜಾಜಿನಗರದ ರಾಮಮಂದಿರದ ಬಿಬಿಎಂಪಿ ಮೈದಾನದಲ್ಲಿ ಶ್ರೀರಾಮ ಸೇನೆಯ ನೇತೃತ್ವದಲ್ಲಿ ವಿಶೇಷ ಮಹಾಯಾಗ ಮತ್ತು ಶೋಭಾಯಾತ್ರೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಹಿಂದೂಪರ ಕಾರ್ಯಕರ್ತರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಮತ್ತು ಇತರ ಹಿಂದೂ ಮುಖಂಡರು ಭಾಗವಹಿಸಿದರು.

ಬೆಂಗಳೂರು, (ಏ.25): ಭಾರತ-ಪಾಕಿಸ್ತಾನ ಗಡಿಯಲ್ಲಿ ಉಗ್ರರ ದಾಳಿಗಳು ಮತ್ತು ಕದನ ವಿರಾಮ ಉಲ್ಲಂಘನೆಯಿಂದ ಉದ್ವಿಗ್ನ ವಾತಾವರಣ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಭಾರತೀಯ ಸೈನಿಕರ ಶೌರ್ಯ, ಶಕ್ತಿ, ಮತ್ತು ಯಶಸ್ಸಿಗಾಗಿ ಬೆಂಗಳೂರಿನ ರಾಜಾಜಿನಗರದ ರಾಮಮಂದಿರದ ಬಿಬಿಎಂಪಿ ಮೈದಾನದಲ್ಲಿ ಶ್ರೀರಾಮ ಸೇನೆಯ ನೇತೃತ್ವದಲ್ಲಿ ವಿಶೇಷ ಮಹಾಯಾಗ ಮತ್ತು ಶೋಭಾಯಾತ್ರೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಹಿಂದೂಪರ ಕಾರ್ಯಕರ್ತರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಮತ್ತು ಇತರ ಹಿಂದೂ ಮುಖಂಡರು ಭಾಗವಹಿಸಿದರು.

ರಾಮ ಭದ್ರಕಯಾಗ, ಸಂಕಲ್ಪಯಾಗ ಮತ್ತು ಪರಶುರಾಮ ಕೊಡಲಿ ಪೂಜೆ
ಯುದ್ಧದ ಸನ್ನಿವೇಶದಲ್ಲಿ ಭಾರತೀಯ ಸೈನಿಕರಿಗೆ ಧೈರ್ಯ ಮತ್ತು ಶಕ್ತಿ ತುಂಬುವ ಸಲುವಾಗಿ ರಾಮ ಭದ್ರಕಯಾಗ, ಸಂಕಲ್ಪಯಾಗ, ಮತ್ತು ಭಗವಾನ್ ಪರಶುರಾಮನ ಕೊಡಲಿಯೊಂದಿಗೆ ವಿಶೇಷ ಪೂಜೆಯನ್ನು ಹಿಂದೂ ಸಂಘಟನೆಗಳು ಆಯೋಜಿಸಿದ್ದವು. ರಾಜಾಜಿನಗರದ ರಾಮಮಂದಿರದ ಬಿಬಿಎಂಪಿ ಮೈದಾನದಲ್ಲಿ ನಡೆದ ಈ ಯಾಗದಲ್ಲಿ ಸೈನಿಕರ ಶ್ರೇಯಸ್ಸಿಗಾಗಿ ವಿಶೇಷ ಹವನ ಮತ್ತು ಮಂತ್ರ ಪಠಣ ನಡೆಯಿತು.

ಇದನ್ನೂ ಓದಿ: 'ಭಯೋತ್ಪಾದನೆಗೆ ಧರ್ಮ ಇಲ್ಲ' ಎಂದವರಿಗೆ ಚಪ್ಪಲಿಯಲ್ಲಿ ಹೊಡಿಬೇಕು: ಮುತಾಲಿಕ್ ಆಕ್ರೋಶ

ಪರಶುರಾಮ ಕೊಡಲಿಯೊಂದಿಗೆ ವಿಶ್ವವಿಜಯ ಶೋಭಾಯಾತ್ರೆ
ಕಾರ್ಯಕ್ರಮದ ಮತ್ತೊಂದು ವಿಶೇಷ ಆಕರ್ಷಣೆಯಾಗಿದ್ದು, ರಾಮಮಂದಿರದಿಂದ ಆರಂಭವಾದ ಭವ್ಯ ಶೋಭಾಯಾತ್ರೆ. ಶ್ರೀರಾಮ ಸೇನೆಯ ಕಾರ್ಯಕರ್ತರು ಮತ್ತು ಹಿಂದೂಪರ ಹೋರಾಟಗಾರರು ಕೈಯಲ್ಲಿ ಪರಶುರಾಮನ ಕೊಡಲಿಗಳು ಮತ್ತು ಕೊಳ್ಳಿಗಳನ್ನು ಹಿಡಿದು, 15 ಅಡಿ ಎತ್ತರದ ಭಗವಾನ್ ಪರಶುರಾಮನ ಮೂರ್ತಿಯೊಂದಿಗೆ ಶೋಭಾಯಾತ್ರೆಯಲ್ಲಿ ಭಾಗವಹಿಸಿದರು. ಈ ಶೋಭಾಯಾತ್ರೆಯಲ್ಲಿ ಪೇಜಾವರ ಶ್ರೀಗಳು, ಪ್ರಮೋದ್ ಮುತಾಲಿಕ್, ಗಂಗಾಧರ್ ಕುಲಕರ್ಣಿ, ರಾಮಾನಾನಂದ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಧಾರ್ಮಿಕ ಸಭೆ: ಸೈನಿಕರಿಗೆ ಸಂಕಲ್ಪದ ಬೆಂಬಲ
ಶೋಭಾಯಾತ್ರೆಯ ನಂತರ, ರಾಮಮಂದಿರದ ಬಳಿಯ ಬಿಬಿಎಂಪಿ ಮೈದಾನದಲ್ಲಿ ಧಾರ್ಮಿಕ ಸಭೆ ಆಯೋಜನೆಗೊಂಡಿತು. ಸಭೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, 'ನಮ್ಮ ಸೈನಿಕರು ದೇಶದ ಗೌರವ ಮತ್ತು ಸುರಕ್ಷತೆಗಾಗಿ ಹೋರಾಡುತ್ತಿದ್ದಾರೆ. ಈ ಯಾಗ ಮತ್ತು ಪೂಜೆಯ ಮೂಲಕ ನಾವು ಅವರಿಗೆ ಆಧ್ಯಾತ್ಮಿಕ ಶಕ್ತಿಯನ್ನು ತುಂಬುತ್ತಿದ್ದೇವೆ' ಎಂದು ಹೇಳಿದರು. ಪ್ರಮೋದ್ ಮುತಾಲಿಕ್ ಮಾತನಾಡಿ, ಪಾಕಿಸ್ತಾನದ ಉಗ್ರರ ದಾಳಿಗಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಸೈನಿಕರನ್ನು ಬೆಂಬಲಿಸೋಣ' ಎಂದು ಕರೆ ನೀಡಿದರು.

ಇದನ್ನೂ ಓದಿ: 'ಇಂದು ಕಾಶ್ಮೀರದಲ್ಲಿ, ನಾಳೆ ನಮ್ಮ ಮೇಲೆ..' ಮಂತ್ರಾಲಯ ಶ್ರೀಗಳು ಹಿಂದೂಗಳಿಗೆ ಎಚ್ಚರದಿಂದರಬೇಕು ಎಂದಿದ್ದೇಕೆ?
 ಗಡಿಯಲ್ಲಿ ಉದ್ವಿಗ್ನತೆ
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಸತತ ಕದನ ವಿರಾಮ ಉಲ್ಲಂಘನೆ ಮತ್ತು ಉಗ್ರರ ದಾಳಿಗಳು ನಡೆಯುತ್ತಿವೆ. ಏಪ್ರಿಲ್ 28-29ರ ರಾತ್ರಿ, ಕುಪ್ವಾರ, ಬಾರಾಮುಲ್ಲಾ, ಮತ್ತು ಅಖ್ನೂರ್ ವಲಯಗಳಲ್ಲಿ ಪಾಕ್ ಸೈನ್ಯದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಸೇನೆಯಿಂದ ತಕ್ಕ ಉತ್ತರ ನೀಡಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ