
ತುಮಕೂರು : ‘ನಡೆದಾಡುವ ದೇವರು’ ಸಿದ್ಧಗಂಗೆಯ ಡಾ. ಶಿವಕುಮಾರ ಶ್ರೀಗಳ ಆರೋಗ್ಯದಲ್ಲಿ ಗುರುವಾರ ರಾತ್ರಿ ದಿಢೀರ್ ಚೇತರಿಕೆ ಕಂಡು ಬಂದಿದ್ದು, ಭಕ್ತರು ಹಾಗೂ ವೈದ್ಯರಲ್ಲಿ ಹೊಸ ಭರವಸೆ ಮೂಡಿಸಿದೆ.
ಪೂಜೆ ಮುಗಿಸಿ ಹಳೇ ಮಠದಿಂದ ಕಿರಿಯ ಶ್ರೀಗಳು ಹೊರಬರುವಾಗ ಲವಲವಿಕೆ ಕಂಡು ಬಂದಿದೆ. ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಾಣಿಸಿದೆ. ಕಿರಿಯ ಶ್ರೀಗಳ ಸಹಾಯದಿಂದ ಸ್ವಾಮೀಜಿ ಇಷ್ಟಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ.
ಐಸಿಯು ಕೊಠಡಿಯಲ್ಲಿಯೇ ಶಿವಕುಮಾರ ಸ್ವಾಮೀಜಿ ಇಷ್ಟಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ.
ಶ್ರೀಗಳ ದೇಹದಲ್ಲಿ ಪ್ರೋಟಿನ್ ಅಂಶದಲ್ಲಿ ಏರಿಕೆ ಕಂಡು ಬಂದಿದೆ. ಅಲ್ಲದೇ ಶುಕ್ರವಾರ ಮುಂಜಾನೆ ದ್ರವರೂಪದಲ್ಲಿ ಇಡ್ಲಿ ಸೇವನೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ