
ತುಮಕೂರು : ಲಕ್ಷಾಂತರ ಭಕ್ತರ, ಶಿವಶರಣರ ಕಣ್ಣೀರ ಪ್ರಾರ್ಥನೆ ಕೊನೆಗೂ ಫಲಿಸಲೇ ಇಲ್ಲ. ವಯೋಸಹಜ ಅನಾರೋಗ್ಯ ದಿಂದ ಬಳಲುತ್ತಿದ್ದ ತ್ರಿವಿಧ ದಾಸೋಹಿ, ಶತಮಾನದ ಸಂತ, ದೇಶದ ಅತ್ಯಂತ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿ(111) ಭವದ ಬದುಕಿಗೆ ವಿದಾಯ ಹೇಳಿ ಶಿವನೆಡೆಗೆ ನಡೆದೇ ಬಿಟ್ಟರು.
ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಬೆಂಗಳೂರು -ತುಮಕೂರು ಹೆದ್ದಾರಿಯ ಟೋಲ್ ಗಳಲ್ಲಿ ವಾಹನಗಳಿಗೆ ಮಂಗಳವಾರ ಉಚಿತ ಪ್ರವೇಶ ಕಲ್ಪಿಸಿದೆ.
ಶ್ರೀಗಳ ದರ್ಶನಕ್ಕಾಗಿ ರಾಜ್ಯದ ನಾನಾ ಭಾಗಗಳಿಂದ ಭಕ್ತಾದಿಗಳು ಮಠದತ್ತ ಪ್ರಯಾಣ ಬೆಳೆಸಿದ್ದಾರೆ. ಹಾಗಾಗಿ ಎನ್ ಎಚ್ಎಐ ಬೆಂಗಳೂರಿನಿಂದ ಕ್ಯಾತ ಸಂದ್ರದವರೆಗೆ ಟೋಲ್ಗಳಲ್ಲಿ ವಾಹನ ಗಳಿಗೆ ಉಚಿತ ಪ್ರವೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ