
ಬೆಂಗಳೂರು (ಡಿ.17) : ವಕೀಲರ ಸುರಕ್ಷತೆಗಾಗಿ ರಾಜ್ಯದ ಹಿರಿಯ ವಕೀಲರ ಸಮಿತಿ ರಚಿಸಿದ್ದ ವಕೀಲರ ಸುರಕ್ಷತಾ ಕಾಯಿದೆ ಕರಡು ಮಸೂದೆಯನ್ನು ಸೋಮವಾರದಿಂದ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲೇ ಮಂಡಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲೇ ಕರಡು ಮಸೂದೆಯನ್ನು ಮಂಡಿಸಬೇಕು. ನ್ಯಾಯವನ್ನು ಎತ್ತಿ ಹಿಡಿಯುವ ಪವಿತ್ರ ವೃತ್ತಿಯ ವಕೀಲರು ನಿರ್ಭೀತಿಯಿಂದ ಕಾರ್ಯ ನಿರ್ವಹಿಸುವ ವಾತಾವರಣ ಕಲ್ಪಿಸುವುದು ಸರ್ಕಾರದ ಕರ್ತವ್ಯ. ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಹೇಳಿದ್ದಾರೆ.
ವಕೀಲರು ಸಮಾಜ ವಿರೋಧಿ ಶಕ್ತಿಗಳಿಂದ ಹಲ್ಲೆ, ಬೆದರಿಕೆ ಮತ್ತು ಒತ್ತಡಗಳನ್ನು ಎದುರಿಸುತ್ತಿರುವ ಘಟನೆಗಳು ಸತತವಾಗಿ ನಡೆಯುತ್ತಿವೆ. ಹೀಗಿದ್ದರೂ ಸರ್ಕಾರ ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ವಕೀಲರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರ ಕೂಡಲೇ ವಕೀಲರ ಸುರಕ್ಷತಾ ಕಾಯಿದೆ ಕರಡು ಮಸೂದೆಯನ್ನು ಮಂಡಿಸಬೇಕು ಎಂದು ಆಗ್ರಹಿಸಿದರು.
ವಕೀಲರು ಲಾಭ ನಿರೀಕ್ಷಿಸದೇ ನೊಂದವರಿಗೆ ನ್ಯಾಯ ಕೊಡಿಸಲಿ: ನ್ಯಾ.ಕೃಷ್ಣಾ ದೀಕ್ಷಿತ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ