ಕಲ್ಯಾಣ ಕರ್ನಾಟಕಕ್ಕೆ ಬಂಪರ್‌ ಕೊಡುಗೆ: ಪ್ರತ್ಯೇಕ ಸಚಿವಾಲಯ, 11,700 ಕೋಟಿ ಯೋಜನೆ..!

Published : Sep 18, 2024, 07:17 AM ISTUpdated : Sep 18, 2024, 07:22 AM IST
ಕಲ್ಯಾಣ ಕರ್ನಾಟಕಕ್ಕೆ ಬಂಪರ್‌ ಕೊಡುಗೆ:  ಪ್ರತ್ಯೇಕ ಸಚಿವಾಲಯ, 11,700 ಕೋಟಿ ಯೋಜನೆ..!

ಸಾರಾಂಶ

ಕಲ್ಯಾಣ ಕರ್ನಾಟಕ ವಿಮೋಚನೆಯ ದಿನವಾದ ಸೆ.17ರಂದೇ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯು ಕಲ್ಯಾಣ ಕರ್ನಾಟಕ ಏಳು ಜಿಲ್ಲೆಗಳ ವ್ಯಾಪ್ತಿಯ ಒಟ್ಟು 11,770 ಕೋಟಿ ರು. ವೆಚ್ಚದ ಯೋಜನೆಗಳಿಗೆ ಅನುಮೋದನೆ ನೀಡಿದೆ.   

ಶೇಷಮೂರ್ತಿ ಅವಧಾನಿ 

ಕಲಬುರಗಿ(ಸೆ.18): ಕಲಬುರಗಿಯಲ್ಲಿ ಹತ್ತು ವರ್ಷಗಳ ಬಳಿಕ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೇರಿ ಸ್ಥಾಪನೆ ಸೇರಿ ಈ ಭಾಗದ ಹಲವು ಮಹತ್ವದ ಯೋಜನೆಗಳಿಗೆ ಭರ್ಜರಿ ಅನುದಾನದ ಮೂಲಕ ಘೋಷಿಸಲಾಗಿದೆ. 

ಬಂಪರ್‌ ಕೊಡುಗೆ ಕಲ್ಯಾಣ ಕರ್ನಾಟಕ ವಿಮೋಚನೆಯ ದಿನವಾದ ಸೆ.17ರಂದೇ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯು ಕಲ್ಯಾಣ ಕರ್ನಾಟಕ ಏಳು ಜಿಲ್ಲೆಗಳ ವ್ಯಾಪ್ತಿಯ ಒಟ್ಟು 11,770 ಕೋಟಿ ರು. ವೆಚ್ಚದ ಯೋಜನೆಗಳಿಗೆ ಅನುಮೋದನೆ ನೀಡಿದೆ. 

ಸ್ಮಾರ್ಟ್‌ ಸಿಟಿ ಮಾದರಿಯಲ್ಲಿ ಕಲಬುರಗಿ ಅಭಿವೃದ್ಧಿಗೆ 1,685 ಕೋಟಿ: ಸಿದ್ದರಾಮಯ್ಯ

ಕಲಬುರಗಿಯಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕದ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಂಡು ಬೆಳಗ್ಗೆ ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ ಅವರು ನಂತರ ಇಲ್ಲಿನ ವಿಕಾಸಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ ನಡೆಸಿದರು. ಅಪರಾಹ್ನ 3.30ಯಿಂದ ಸುದೀರ್ಘ ಸಂಪುಟ ಸಭೆಯಲ್ಲಿ ಒಟ್ಟು 56 ವಿಷಯಗಳನ್ನು ಚರ್ಚಿಸಲಾಯಿತು. ಇವುಗಳಲ್ಲಿ 46 ವಿಷಯ ಗಳು ಕಲ್ಯಾಣ ಕರ್ನಾಟಕದ ಭಾಗದ 7 ಜಿಲ್ಲೆಗಳ ಸರ್ವತೋಮುಖ ಅಭಿವೃದಿಗೆ ಸಂಬಂಧಪಟ್ಟ ವಿಷಯಗಳು ಎಂಬುದು ವಿಶೇಷ.

ಕಲ್ಯಾಣದ ಅಭಿವೃದ್ಧಿಗೆ ವೇಗ ನೀಡಲು ಪ್ರತ್ಯೇಕ ಸಚಿವಾಲಯ ರಚನೆಯಾಗಬೇಕು ಎಂಬ ಬೇಡಿಕೆಗೆ ಈ ಬಾರಿ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶೀಘ್ರ ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ಸಚಿವಾಲಯ ಸಾಪನೆ ಸಂಬಂಧಿಸಿದ ರೂಪರೇಷೆ ಸಿದ್ಧಪಡಿಸುವ ಬಗ್ಗೆ ಸಂಪುಟ ದಲ್ಲಿ ತೀರ್ಮಾನಿಸಲಾಗಿದೆ. 

ಸಂವಿಧಾನದ ಕಲಂ 371ಜೆ ಜಾರಿಯಾಗಿರುವ ಕಲ್ಯಾಣ ನಾಡಿನ 7 ಜಿಲ್ಲೆಗಳ ಪ್ರಗತಿಗೆ ಕೆಕೆಆರ್‌ಡಿಬಿಗೆ ರಾಜ್ಯ ಸರ್ಕಾರ ನೀಡುತ್ತಿರುವ 5 ಸಾವಿರ ಕೋಟ ರು. ಮೊತ್ತದಷ್ಟೇ ಹಣವನ್ನು ಕೇಂದ್ರ ಸರ್ಕಾರವೂ ನೀಡಬೇಕೆಂಬ ನಿರ್ಣಯವನ್ನೂ ಇದೇ ವೇಳೆ ಕೈಗೊಳ್ಳಲಾಯಿತು. ಸಂಪುಟ ಸಭೆಯಲ್ಲಿ ಸಂವಿಧಾನದ ವಿಶೇಷ ರಕ್ಷಣೆ ಈ ಭಾಗಕ್ಕೆ ದೊರಕಿದ ಬಳಿಕ ಇಲ್ಲಿಯವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರುಪಾಯಿಯನ್ನೂ ಕೊಟ್ಟಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಕೂಡ ರಾಜ್ಯ ಸರ್ಕಾರ ಕೊಟ್ಟಷ್ಟೆ ಪ್ರಮಾಣ (5,000 ಕೋಟಿ ರು.)ದ ಅನುದಾನ ಕೊಡಬೇಕು ಎನ್ನುವ ಆಗ್ರಹಕ್ಕೆ ಒಮ್ಮತ ವ್ಯಕ್ತವಾಯಿತು. ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೆ.12 ಕಲ್ಯಾಣದ ನಾಡಿನ ಜನರಿಗೆ ಐತಿಹಾಸಿಕ ದಿನ. ಈ ದಿನವೇ ಐತಿಹಾಸಿಕ ಸಂಪುಟ ಸಭೆ ನಡೆಸುವ ಮೂಲಕ ನಮ್ಮ ಸರ್ಕಾರ ಕಲ್ಯಾಣದ ಪ್ರಗತಿಗೆ ಬದ್ದವಾಗಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನಾರಾಯಣಪುರ ಬಸವ ಸಾಗರ ಜಲಾಶಯದಿಂದ ನೀರು ತರುವ 7.200 ಕೋಟಿ ರು. ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆ ಯೋಜನೆ. ಇದರಲ್ಲಿ ಕೇಂದ್ರ ತನ್ನ ಪಾಲಿನ ಮೊತ್ತವಾದ 3,600 ಕೋಟಿ ರು. ನೀಡಬೇಕಿದೆ ಎಂದರು. ಸಚಿವ ಸಂಪುಟ ಸಭೆಯಲ್ಲಿ ಬೀದರ್‌ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಹಾಗೂ ಬೀದರ್‌ಮತ್ತು ಕಲಬುರಗಿಯ ಹಳ್ಳಿಗಳಿಗೆ ಕುಡಿಯುವ ನೀರೊದಗಿಸುವ 7200 ಕೋಟಿ ರು. ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು. ಖಾಲಿ ಹುದ್ದೆ ಭರ್ತಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿಯಿರುವ 17,439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾ ನಿಸಿರುವುದಾಗಿ ಇದೇ ವೇಳೆ ಮುಖ್ಯಮಂತ್ರಿ ತಿಳಿಸಿ ದರು. ಬೀದರ್‌ನ ಬಸವ ಕಲ್ಯಾಣದ ಅನುಭವ ಮಂಟಪದಿಂದ ಕೊಪ್ಪಳದ ಅಂಜನಾದ್ರಿ ಬೆಟ್ಟದ ವರೆಗೂ ಸಿಗುವ ಪ್ರವಾಸಿ ತಾಣಗಳ ಪೋಷಣೆ, ಸಂರಕ್ಷಣೆ, ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ ಎಂದೂ ಅವರು ಮಾಹಿತಿ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಕುರಿತು ಕ್ಯಾಬಿನೆಟ್‌ನ ಪ್ರಮುಖ ನಿರ್ಧಾರಗಳು 

* ಬೀದರ್‌ ಹಾಗೂ ರಾಯಚೂರು ನಗರ ಸಭೆಗಳನ್ನು ಮಹಾನಗರ ಪಾಲಿಕೆಗಳನ್ನಾಗಿ ಮೇಲ್ಬರ್ಗೇರಿಸಲು ನಿರ್ಧಾರ 
* ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರ, 31 ಸಮುದಾಯ ಆರೋಗ್ಯ ಕೇಂದ್ರ ಆರಂಭ 
* 9 ತಾಲೂಕು ಆಸ್ಪತ್ರೆಗಳ ಮೇಲ್ದರ್ಜೆ, 2 ತಾಲೂಕು ಆಸ್ಪತ್ರೆ ಜಿಲ್ಲಾಸ್ಪತ್ರೆಗಳಾಗಿ ಮೇಲ್ದರ್ಜೆ, ಇದಕ್ಕಾಗಿ 890 ಕೋಟಿ ರು. ವೆಚ್ಚ 
* ಕಲಬುರಗಿ ವಿವಿ ಆವರಣದಲ್ಲಿ ಜಿಟಿಟಿಸಿ ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕೆಕೆಆರ್‌ಡಿಐ ಅನುದಾನದಿಂದ ಮೊದಲನೇ ಹಂತದಲ್ಲಿ 53.25 ಕೋಟಿ ರು. ವೆಚ್ಚದಲ್ಲಿ ಸ್ಥಾಪನೆ 
* ಮಳಖೇಡ ಕೋಟೆ ಅಭಿವೃದ್ಧಿಗೆ 34 ಕೋಟಿ ರು, ಶಹಾಪೂರದ ಶಿರವಾಳ ದೇಗುಲಗಳ ಅಭಿವೃದ್ಧಿಗೆ 75 ಕೋಟಿ ರು. ಯಾದಗಿರಿ ಕೋಟೆ ಅಭಿವೃದ್ಧಿಗೆ 95 ಕೋಟಿ ರು. ಯೋಜನೆ 
* ಬೀದರ್- ಕಲಬುರಗಿಯ ಜನ ವಸತಿ ಪ್ರದೇಶಕ್ಕೆ 7200 ಕೋಟಿ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆ 
* ಹಟ್ಟಿ ಚಿನ್ನದ ದಣಿ ಸಿಬ್ಬಂದಿಗೆ ವಸತಿ ಯೋಜನೆಗೆ ಅನುಮೋದನೆ

ಕಲ್ಯಾಣ ಕರ್ನಾಟಕದಲ್ಲಿ ಮೂಲಸೌಕರ್ಯದ್ದೇ ಸಮಸ್ಯೆ: ಅಜಯ್‌ ಸಿಂಗ್‌

ಇದು ಐತಿಹಾಸಿಕ ದಿನ 

ಸೆ.17 ಕಲ್ಯಾಣದ ನಾಡಿನ ಜನರಿಗೆ ಐತಿಹಾಸಿಕ ದಿನ. ಈ ದಿನವೇ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸುವ ಮೂಲಕ ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕದ ಪ್ರಗತಿಗೆ ಬದ್ಧವಾಗಿದೆ ಎಂಬುದನ್ನು ಸಾಬೀತುಪಡಿಸಿದೆ. ಬೀದರ್‌ನ ಬಸವ ಕಲ್ಯಾಣದ ಅನುಭವ ಮಂಟಪದಿಂದ ಕೊಪ್ಪಳದ ಅಂಜನಾದ್ರಿ ಬೆಟ್ಟದವರೆಗೂ ಸಿಗುವ ಪ್ರವಾಸಿ ತಾಣಗಳ ಅಭಿವೃದ್ಧಿಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ರಾಜ್ಯಾದ್ಯಂತ ಇರುವ ಮಿನಿ ವಿಧಾನಸೌಧ ಇನ್ನು ಪ್ರಜಾಸೌಧ ರಾಜ್ಯಾದ್ಯಂತ ಇರುವ ತಾಲೂಕು ಆಡಳಿತ ಸೌಧ ಹಾಗೂ ಮಿನಿ ವಿಧಾನಸೌಧಗಳಿಗೆ ಪ್ರಜಾಸೌಧ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ, ವಕ್ಸ್ ಬೋರ್ಡ್‌ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸಾಪನೆಗೂ ನಿರ್ಧರಿಸಲಾಗಿದೆ. ಕಲ್ಯಾಣ ಕರ್ನಾಟಕ ಹೊರತುಪಡಿಸಿ ಇತರೆ ಜಿಲ್ಲೆಗಳ ಹಲವು ಯೋಜನೆಗಳಿಗೆ ಅನುಮೋದಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್