
ಬೆಂಗಳೂರು (ಡಿ.6): ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು, ಕಾಲೇಜು ಶಿಕ್ಷಣ ತಿದ್ದುಪಡಿ ನಿಯಮಗಳ ವಿಧೇಯಕ್ಕೆ ರಾಜ್ಯ ಸಂಪುಟ ಅನುಮೋದನೆ ನೀಡಿದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತರಿಗೆ ಈ ವಿಧೇಯಕ ಅನುಕೂಲ ಮಾಡಿಕೊಡಲಿದೆ. ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನು ಮುಂದೆ ಕಡ್ಡಾಯವಾಗಿ 2/3 ಮೆಜಾರಿಟಿ ಅಲ್ಪಸಂಖ್ಯಾತರಿಗೆ ನಿಗದಿಯಾಗಿರಲಿದೆ. ಆದರೆ, ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಲ್ಲಿ ನಿಗದಿತ ವಿದ್ಯಾರ್ಥಿಗಳ ಪ್ರವೇಶಾತಿಗೆ ಷರತ್ತು ಇರೋದಿಲ್ಲ. ಕಡಿಮೆ ಅಲ್ಪಸಂಖ್ಯಾತರ ವಿಧ್ಯಾರ್ಥಿಗಳು ಇದ್ದರೂ ಆ ಕಾಲೇಜಿನ ಮಾನ್ಯತೆ ಮುಂದುವರಿಕೆ ಮಾಡಲಾಗುತ್ತದೆ.ಕಾಲೇಜುಗಳ ಮ್ಯಾನೇಜ್ಮೆಂಟ್ಗಳಲ್ಲಿ ಮಾತ್ರ 2/3 ಮೆಜಾರಿಟಿ ಅಲ್ಪಸಂಖ್ಯಾತರಿಗೆ ನಿಗದಿಯಾಗಿರಲಿದೆ.
ರಾಜ್ಯದ ರೈತರಿಗೆ ಹೊಸ ಟ್ಯಾಕ್ಸ್; ಖನಿಜ ಹೊಂದಿರುವ ಭೂಮಿಗೆ ಇನ್ನು ತೆರಿಗೆ
ಈ ಹಿಂದೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮೈನಾರಿಟಿ ವಿಧ್ಯಾರ್ಥಿಗಳ ಪ್ರವೇಶಾತಿ ನಿಗದಿಯಾಗಿತ್ತು. ಪ್ರಾಥಮಿಕ ಶಾಲೆಗಳಲ್ಲಿ ಶೇಕಡಾ 25 ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇರಬೇಕಿತ್ತು. ಪ್ರೌಢಶಾಲೆಯಲ್ಲಿ ಶೇಕಡಾ 50 ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಇರಬೇಕಿತ್ತು. ನೂತನ ವಿಧೇಯಕ ಪ್ರಕಾರ ಇನ್ನುಂದೆ ಇಂತಹ ಕಂಡೀಷನ್ ಇರೋದಿಲ್ಲ. ಆದರೆ ಮ್ಯಾನೆಜ್ಮೆಂಟ್ ಅಲ್ಪಸಂಖ್ಯಾತರರಿಗೆ ಸಿಗುವಂತೆ ಮಾಡಲು ಹೊಸ ವಿಧೇಯಕ ದಲ್ಲಿ ಅವಕಾಶ ಮಾಡಿಕೊಡಲಾಗಿದೆ. ವಕ್ಫ್ ವಿವಾದದ ಕಾರಣಕ್ಕಾಗಿ ಕಳೆದ ಮೂರು ಸಂಪುಟ ಸಭೆಯಲ್ಲಿ ವಿಧೇಯಕದ ವಿಚಾರ ಮುಂದೂಡಿಕೆಯಾಗಿತ್ತು/ ಉಪಚುನಾವಣೆ ಬಳಿಕ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ನಿಷ್ಕ್ರಿಯ ಅಕೌಂಟ್ಗಳನ್ನು ಸಕ್ರಿಯಗೊಳಿಸಲು ಎಸ್ಬಿಐನಿಂದ ರಾಷ್ಟ್ರವ್ಯಾಪಿ ಅಭಿಯಾನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ