ಈಶ್ವರಪ್ಪನಿಗೆ ಬುದ್ಧಿ ಕಮ್ಮಿ: ಏಕವಚನದಲ್ಲೇ ಸಿದ್ದು ಟೀಕೆ

Published : Dec 28, 2018, 11:04 AM IST
ಈಶ್ವರಪ್ಪನಿಗೆ ಬುದ್ಧಿ ಕಮ್ಮಿ: ಏಕವಚನದಲ್ಲೇ ಸಿದ್ದು ಟೀಕೆ

ಸಾರಾಂಶ

ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ಹರಿಹಾಯ್ದಿದ್ದಾರೆ.

ಬಾಗಲಕೋಟೆ[ಡಿ.28]: ‘ನಾನೇಕೆ ಅತೃಪ್ತಿಗೊಳ್ಳಲಿ. ನಾನೇಕೆ ಅತೃಪ್ತರ ನಾಯಕನಾಗಲಿ. ಈಶ್ವರಪ್ಪನಿಗೆ ಬುದ್ಧಿ ಕಮ್ಮಿ. ಹೀಗಾಗಿ ಏನೇನೋ ಮಾತನಾಡುತ್ತಾನೆ’ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ಹರಿಹಾಯ್ದರು. ಬಾದಾಮಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನಿಗೆ ಪೂರ್ತಿ ಅತೃಪ್ತಿ ಇರಬಹುದು. ಅತೃಪ್ತಿ ಅಧಿಕಾರದಲ್ಲಿ ಇರದವರಿಗೆ ಇರುತ್ತೆ. ಹೀಗಾಗಿ ಈಶ್ವರಪ್ಪನಿಗೆ ಇರಬಹುದು ಎಂದು ಲೇವಡಿ ಮಾಡಿದ ಅವರು, ಮೆದುಳು ಇಲ್ಲದ ಈಶ್ವರಪ್ಪನಿಗೆ ಸಹಜವಾಗಿ ಬುದ್ಧಿ ಕಮ್ಮಿ ಇದೆ ಎಂದರು.

ನನಗೆ ಅಧಿಕಾರ ಬಂದಾಗಿದೆ. ರಾಜ್ಯದಲ್ಲಿ ಸಿಎಂ ಹುದ್ದೆಗಿಂತ ದೊಡ್ಡದು ಯಾವುದಾದರೂ ಇದೆಯಾ? ನನಗೆ ಸಿಎಂ ಹುದ್ದೆ ಸಿಕ್ಕಾಗಿದೆ. ನನ್ನ ಜೀವನದಲ್ಲಿ ಯಾವತ್ತೂ ಅಧಿಕಾರದ ಹಿಂದೆ ಹೋದವನಲ್ಲ. ಐದು ವರ್ಷ ಮುಖ್ಯಮಂತ್ರಿಯಾಗಿದ್ದೇನೆ. ಅಂತಹದರಲ್ಲಿ ಯಾವ ಅತೃಪ್ತಿ ಬರಬೇಕು. ರಾಜ್ಯದಲ್ಲಿಯೂ ಈಗ ನಮ್ಮದೆ ಸರ್ಕಾರವಿದೆ ಎಂದರು. ಈ ಮೂಲಕ ತಾವು ಅಧಿಕಾರದಲ್ಲಿ ಇದ್ದಂತೆ ಎಂದು ಪರೋಕ್ಷವಾಗಿ ಟಾಂಗ್‌ ಕೊಟ್ಟರು.

ಖಾತೆ ಹಂಚಿಕೆಯಲ್ಲಿನ ಜಟಾಪಟಿ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಖಾತೆ ಹಂಚಿಕೆಯನ್ನು ಹೈ-ಕಮಾಂಡನವರು ತೀರ್ಮಾನಿಸುತ್ತಾರೆ ಎಂದಷ್ಟೇ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚುನಾವಣೆ ಆಯೋಗದ 6 ಲೋಪ ಬಳಸಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಎಸ್‌ಐಟಿ
ಮೋದಿ, ಶಾಗೇ ಹೆದರದೆ ಜೈಲಿಗೆ ಹೋಗಿದ್ದೆ, ಯಾರಿಗೂ ಜಗ್ಗಲ್ಲ: ಡಿ.ಕೆ.ಶಿವಕುಮಾರ್‌ ಎಚ್ಚರಿಕೆ