ಭಾರತಮಾತೆಯನ್ನು ಬಿಜೆಪಿ ಗುತ್ತಿಗೆ ಪಡೆದಿದ್ಯಾ?: ಸಿದ್ದು

Published : Mar 08, 2020, 08:18 AM IST
ಭಾರತಮಾತೆಯನ್ನು ಬಿಜೆಪಿ ಗುತ್ತಿಗೆ ಪಡೆದಿದ್ಯಾ?: ಸಿದ್ದು

ಸಾರಾಂಶ

ಭಾರತಮಾತೆಯನ್ನು ಬಿಜೆಪಿ ಗುತ್ತಿಗೆ ಪಡೆದಿದ್ಯಾ?: ಸಿದ್ದು| ಚಿಕ್ಕಮಗಳೂರಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ| ದಾರಿ ತಪ್ಪಿಸುವ ಬಿಜೆಪಿಯಿಂದ ಎಚ್ಚರಿಕೆಯಿಂದಿರಿ

ಚಿಕ್ಕಮಗಳೂರು[ಮಾ.08]: ‘ಬಿಜೆಪಿಯವರೇ, ನೀವು ಭಾರತಮಾತೆಯನ್ನು ಗುತ್ತಿಗೆ ತೆಗೆದುಕೊಂಡಿದ್ದೀರಾ?’

-ಇದು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳಿರುವ ಪ್ರಶ್ನೆ.

ಸಂವಿಧಾನ ರಕ್ಷಣಾ ಹೋರಾಟ ಸಮಿತಿ, ಜಾತ್ಯತೀತ ರಾಜಕೀಯ ಪಕ್ಷಗಳು ಮತ್ತು ಪ್ರಗತಿಪರ ಸಂಘಟನೆಗಳು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ನಾವು ಸಹ ಭಾರತ ಮಾತೆಯ ಮಕ್ಕಳೇ ಆದರೆ ಸಂವಿಧಾನವನ್ನು ಮಾತ್ರ ತಿರುಚುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ದೇಶದಲ್ಲಿ ಧ್ವನಿ ಇಲ್ಲದ ವರ್ಗವನ್ನು ಬಿಜೆಪಿಯ ಪೂರ್ವಿಕರು ಸೃಷ್ಟಿಮಾಡಿದ್ದಾರೆ. ಈಗ ಸಂವಿಧಾನವನ್ನು ತಿರುಚಲು ಹೊರಟ್ಟಿದ್ದಾರೆ. ಇಂತಹವರಿಗೆ ನಾಚಿಕೆಯಾಗಬೇಕು. ಭಾರತಮಾತೆ ಅನ್ನುತ್ತೀರಾ, ಇದೇನಾ ಕಲಿತಿದ್ದು, ನಾವು ಸಹ ಭಾರತೀಯ ಮಕ್ಕಳೇ ಎಂದರು.

ಸಿಎಎ ಸಂವಿಧಾನ ವಿರೋಧಿ: ಸಿಎಎ, 10 ಬಾರಿ ತಿದ್ದುಪಡಿಯಾಗಿದೆ. ಆದರೆ, ಈಗ ಈ ಕಾಯ್ದೆಯಲ್ಲಿ ಧರ್ಮವನ್ನು ಸೇರಿಸುವ ಕೆಲಸ ಬಿಜೆಪಿ ಮಾಡಿದೆ. ಇದಕ್ಕೆ ನಮ್ಮ ವಿರೋಧ ಇದೆ. ಈ ಕಾಯ್ದೆ ಜಾರಿಗೆ ಬಂದರೆ ಬರೀ ಮುಸ್ಲಿಮರಿಗೆ ಮಾತ್ರ ತೊಂದರೆ ಆಗುವುದಿಲ್ಲ, ಅಲೆಮಾರಿಗಳಿಗೆ, ಕೂಲಿ ಕಾರ್ಮಿಕರಿಗೆ, ಬಡವರಿಗೆ ಹೀಗೆ ಎಲ್ಲ ವರ್ಗದ ಜನರಿಗೆ ಇದರಿಂದ ತೊಂದರೆಯಾಗಲಿದೆ. ಇದೊಂದು ಸಂವಿಧಾನ ವಿರೋಧ ನಿಲುವು ಎಂದು ಟೀಕಿಸಿದರು.

ದೇಶದ 30 ರಾಜ್ಯಗಳ ಪೈಕಿ ಬಿಹಾರ ಸೇರಿದಂತೆ ಈಗಾಗಲೇ 10 ರಾಜ್ಯಗಳು ಹೊಸದಾಗಿ ಜಾರಿಗೆ ತರಲು ಹೊರಟಿರುವ ಸಿಎಎ, ಎನ್‌ಆರ್‌ಸಿ ತಮ್ಮ ರಾಜ್ಯಗಳಲ್ಲಿ ಅನುಷ್ಠಾನಗೊಳಿಸುವುದಿಲ್ಲ ಎಂದು ಹೇಳಿವೆ ಎಂದು ಸಿದ್ದರಾಮಯ್ಯ ಅವರು, ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ ಆಚರಣೆಗೆ ತರಲು ಸಾಧ್ಯವಿಲ್ಲ. ಇದರ ಬಗ್ಗೆ ಜನರು ಆತಂಕ ಪಡಬಾರದು, ಹಾಗೆಂದು ಮೈಮರೆತು ಕುಳಿತುಕೊಳ್ಳಬಾರದು. ದಾರಿ ತಪ್ಪಿಸುವ ಬಿಜೆಪಿ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್