ಬಿಎಸ್‌ವೈ, ಕತ್ತಿ ಅತೃಪ್ತ ಆತ್ಮಗಳು: ಸಿದ್ದು ಕಿಡಿ!

Published : Dec 28, 2018, 01:13 PM IST
ಬಿಎಸ್‌ವೈ, ಕತ್ತಿ ಅತೃಪ್ತ ಆತ್ಮಗಳು: ಸಿದ್ದು ಕಿಡಿ!

ಸಾರಾಂಶ

ಬಿ.ಎಸ್‌. ಯಡಿಯೂರಪ್ಪ, ಉಮೇಶ್‌ ಕತ್ತಿ, ಕೆ.ಎಸ್‌. ಈಶ್ವರಪ್ಪ ಮುಂತಾದವರು ಅತೃಪ್ತ ಆತ್ಮಗಳಾಗಿದ್ದಾರೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಬೆಂಗಳೂರು[ಡಿ.28]: ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ನಾಯಕರ ಕನಸು ನನಸಾಗುವುದಿಲ್ಲ. ಅಧಿಕಾರವಿಲ್ಲದೆ ಹತಾಶರಾಗಿರುವ ಬಿ.ಎಸ್‌. ಯಡಿಯೂರಪ್ಪ, ಉಮೇಶ್‌ ಕತ್ತಿ, ಕೆ.ಎಸ್‌. ಈಶ್ವರಪ್ಪ ಮುಂತಾದವರು ಅತೃಪ್ತ ಆತ್ಮಗಳಾಗಿದ್ದಾರೆ. ಅತೃಪ್ತಿ, ಹತಾಶೆಯಿಂದಲೇ ಇತರರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿ ನಾಯಕರನ್ನು ಟೀಕಿಸಿರುವ ಅವರು, ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಕನಸು ನನಸಾಗುವುದಿಲ್ಲ. 24 ಗಂಟೆಯಲ್ಲಿ ಸರ್ಕಾರ ಬೀಳಲಿದೆ, ಒಂದು ವಾರದಲ್ಲಿ ಸರ್ಕಾರ ಬೀಳಲಿದೆ ಎಂಬ ಉಮೇಶ್‌ ಕತ್ತಿ ಅವರ ಮಾತನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಡಿ. ಸರ್ಕಾರದ ಅಸ್ಥಿರತೆ ಬಗ್ಗೆ ಮಾತನಾಡಿರುವ ಉಮೇಶ್‌ ಕತ್ತಿ ಅವರಿಗೆ ಬಿ.ಎಸ್‌. ಯಡಿಯೂರಪ್ಪ ಅವರೇ ಕಿವಿ ಹಿಂಡಿದ್ದಾರೆ. ಹೀಗಾಗಿ ಸರ್ಕಾರದ ಬಗ್ಗೆ ಯೋಚನೆ ಮಾಡುವುದು ಬಿಟ್ಟು ಬಿಜೆಪಿಯಲ್ಲಿರುವ ಅಸಮಾಧಾನಗಳನ್ನು ಬಗೆಹರಿಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!
BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ