ಸಮಾಜವಾದಿ ಎನ್ನುವ ಸಿದ್ದರಾಮಯ್ಯ ಮಾಡೋದೆಲ್ಲ ಸಮಾಜ ಒಡೆಯುವ ಕೆಲಸ: ಜನತಾ ಪಕ್ಷ ಆರೋಪ

Published : May 01, 2025, 06:00 AM ISTUpdated : May 01, 2025, 06:03 AM IST
ಸಮಾಜವಾದಿ ಎನ್ನುವ ಸಿದ್ದರಾಮಯ್ಯ ಮಾಡೋದೆಲ್ಲ ಸಮಾಜ ಒಡೆಯುವ ಕೆಲಸ: ಜನತಾ ಪಕ್ಷ ಆರೋಪ

ಸಾರಾಂಶ

ಸಮಾಜವಾದಿ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಜನತಾ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಆರೋಪಿಸಿದ್ದಾರೆ.

ಬೆಂಗಳೂರು (ಮೇ.1): ಸಮಾಜವಾದಿ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಜನತಾ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಆರೋಪಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಕಾಂತರಾಜ ಆಯೋಗದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವರದಿ ಮುಂದಿಟ್ಟುಕೊಂಡು ಸಮಾಜದ ಒಗ್ಗಟ್ಟು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಆಯೋಗದ ವರದಿ ಬಗ್ಗೆ ಪ್ರಬಲ ಸಮುದಾಯಗಳು ಆಕ್ಷೇಪಿಸುತ್ತಿವೆ. ಮನೆ ಮನೆ ಸರ್ವೇ ಸರಿಯಾಗಿ ನಡೆಸಿಲ್ಲ. ಹೀಗಾಗಿ, ಯಾವುದೇ ಕಾರಣಕ್ಕೂ ಈ ವರದಿ ಜಾರಿಗೆ ಸರ್ಕಾರ ಮುಂದಾಗಬಾರದು ಎಂದರು.

ಕಾಂತರಾಜ ಆಯೋಗದ ವರದಿ ಸೋರಿಕೆ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. 2015ರ ಸಮೀಕ್ಷೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪಗಳಿವೆ. ಹವಾನಿಯಂತ್ರಿತ ಕೊಠಡಿಯಲ್ಲಿ ಕೂತು ವರದಿ ತಯಾರಿಸಲಾಗಿದೆ ಎಂಬ ಆರೋಪಗಳಿವೆ. ಇಂಥ ವರದಿ ಜಾರಿ ಮಾಡಬಾರದು. ಒಂದು ವೇಳೆ ಜಾರಿಗೆ ಮುಂದಾದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಪಕ್ಷದಲ್ಲಿ ಏಕೆ ಇಟ್ಟುಕೊಂಡಿದ್ದೀರಿ?: ಕೆ.ಎಸ್.ಈಶ್ವರಪ್ಪ

ನ್ಯಾ.ನಾಗಮೋಹನ ದಾಸ್ ಅವರ ಕಾರ್ಯದ ಬಗ್ಗೆ ಅಪಾರ ಗೌರವವಿದೆ. ಆದರೆ ಸರ್ಕಾರ ಹಲವು ಆಯೋಗಗಳಿಗೆ ಅವರನ್ನು ನೇಮಿಸಿದ್ದು ಸರಿಯಲ್ಲ. ಹಲವು ಮಂದಿ ನಿವೃತ್ತ ನ್ಯಾಯಮೂರ್ತಿಗಳು ಇದ್ದಾರೆ. ಅವರ ಅನುಭವಗಳನ್ನು ಬಳಸಿಕೊಳ್ಳಬೇಕಾಗಿತ್ತು. ಈ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!