ಪಿಎಸ್ಐ ನೇಮಕಾತಿ ಹಗರಣ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟದ ನಿರ್ಧಾರ

Published : Mar 15, 2024, 06:43 AM IST
ಪಿಎಸ್ಐ ನೇಮಕಾತಿ ಹಗರಣ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟದ ನಿರ್ಧಾರ

ಸಾರಾಂಶ

ಪಿಎಸ್ಐ ನೇಮಕ ಹಗರಣದ ಸಂಬಂಧ ನ್ಯಾ.ಬಿ.ವೀರಪ್ಪ ಆಯೋಗವು ಸಲ್ಲಿಸಿರುವ ವರದಿ ಆಧಾರದ ಮೇಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 

ಬೆಂಗಳೂರು (ಮಾ.15): ಪಿಎಸ್ಐ ನೇಮಕ ಹಗರಣದ ಸಂಬಂಧ ನ್ಯಾ.ಬಿ.ವೀರಪ್ಪ ಆಯೋಗವು ಸಲ್ಲಿಸಿರುವ ವರದಿ ಆಧಾರದ ಮೇಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ, ನ್ಯಾ.ವೀರಪ್ಪ ಆಯೋಗದ ವರದಿಯಲ್ಲಿ ನೇಮಕಾತಿ ಹಗರಣದಲ್ಲಿ ಸರ್ಕಾರದವರಿಂದ ಹಿಡಿದು ಮಧ್ಯವರ್ತಿಗಳವರೆಗೆ 113 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. 

ಇನ್ನೂ ಹೆಚ್ಚು ಮಂದಿಯ ವಿಚಾರಣೆ ನಡೆಸುವ ಸಲುವಾಗಿ ಸಮನ್ಸ್‌ ನೀಡಲಾಗಿತ್ತು. ಆದರೆ ಬಹುತೇಕರು ಬಂದು ಆಯೋಗದ ಮುಂದೆ ಉತ್ತರ ನೀಡಿಲ್ಲ. ಯಾರನ್ನಾದರೂ ಕರೆಸಿ ವಿಚಾರಣೆ ನಡೆಸಲು ಆಯೋಗಕ್ಕೆ ಸೂಕ್ತ ಅಧಿಕಾರ ಇಲ್ಲ. ಹೀಗಾಗಿ ಅಂತಹವರನ್ನು ವಿಚಾರಣೆ ನಡೆಸಲು ಎಸ್‌ಐಟಿ ರಚನೆ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಿದ್ದರು. ಹೀಗಾಗಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಏನಿದು ಪ್ರಕರಣ?: ಹಿಂದಿನ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, 545 ಪಿಎಸ್‌ಐಗಳ ನೇಮಕಾತಿಗಾಗಿ ಪಿಎಸ್‌ಐ ಪರೀಕ್ಷೆಯನ್ನು ಅಕ್ಟೋಬರ್ 3, 2021ರಂದು ನಡೆಸಲಾಗಿತ್ತು. 92 ಕೇಂದ್ರಗಳಲ್ಲಿ 54,289 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶ ಪ್ರಕಟವಾದ ನಂತರ, ಪರೀಕ್ಷೆಯಲ್ಲಿ ಅಕ್ರಮಗಳು ನಡೆದ ಆರೋಪ ಬಂದಿತು. ಹೀಗಾಗಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತು. ಸಿಐಡಿ 52 ಅಭ್ಯರ್ಥಿಗಳು ಸೇರಿದಂತೆ 113 ಜನರನ್ನು ಬಂಧಿಸಿದೆ. ಪೊಲೀಸ್ ನೇಮಕಾತಿ ಸೆಲ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನೂ ಸಿಐಡಿ ಬಂಧಿಸಿತ್ತು.

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿರುವಾಗ ಎಸ್‌ಐಟಿ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿಐಡಿ ಅವರು 17 ಕೇಸು ದಾಖಲಿಸಿಕೊಂಡು 113 ಮಂದಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಈ ಪೈಕಿ ಕೆಲವರು ಜಾಮೀನು ಪಡೆದಿದ್ದಾರೆ. ಸಿಐಡಿ ತನಿಖೆಯನ್ನು ನಾವು ಹಿಂಪಡೆಯುವುದಿಲ್ಲ. ಆಯೋಗದ ಶಿಫಾರಸಿನ ಮೇರೆಗೆ ಎಲ್ಲಾ ಕೋನಗಳಲ್ಲೂ ತನಿಖೆ ನಡೆಸಲು ಅನುವಾಗುವಂತೆ ಹೆಚ್ಚು ಶಕ್ತಿ ಇರುವ ಎಸ್‌ಐಟಿ ರಚನೆ ಸೂಕ್ತ ತೀರ್ಮಾನ ಎಂದು ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. ನ್ಯಾ.ವೀರಪ್ಪ ಅವರ ಆಯೋಗದ ವರದಿಯಲ್ಲಿ ಹಿಂದಿನ ಸರ್ಕಾರದ ಸಚಿವರ ಪ್ರಸ್ತಾಪ ಇದೆಯೇ ಎಂಬ ಪ್ರಶ್ನೆಗೆ, ನಾನು ವರದಿಯನ್ನು ಗಮನಿಸಿದ್ದೇನೆ. ಆದರೆ ನನಗೆ ಅಂತಹ ಯಾವುದೇ ಹೆಸರು ಕಂಡು ಬರಲಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ