ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ?

Published : Oct 17, 2018, 11:31 AM IST
ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ?

ಸಾರಾಂಶ

ಪೌರಾಡಳಿತ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿ ತುಕಾರಾಮ ಕಲ್ಯಾಣಕರ ಅವರು ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.  

ಬೆಳಗಾವಿ: ಸಚಿವ ಸಂಪುಟದ ಸಭೆಗಳಿಗೆ ಸತತವಾಗಿ ಗೈರಾಗುತ್ತಿರುವ ಪೌರಾಡಳಿತ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ. ಅ.10 ರಂದು ಸಿಬ್ಬಂದಿ ಮತ್ತು ಆಡಳಿತ  ಸುಧಾರಣೆ ಇಲಾಖೆಗೆ ಪತ್ರ ಬರೆದಿರುವ ಮುಖ್ಯ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿ ತುಕಾರಾಮ ಕಲ್ಯಾಣಕರ ಅವರು ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಸಿಎಂ ಕಚೇರಿ, ರಮೇಶ್ ಜಾರಕಿಹೊಳಿ ಅವರಿಗೆ ನೋಟಿಸ್ ನೀಡಲು ಸರ್ಕಾರ ಮುಂದಾಗಿದೆ ಎಂಬ ಅರ್ಥಬರುವ ವರದಿ ಸತ್ಯಕ್ಕೆ ದೂರ ವಾದುದು. ಮುಖ್ಯಕಾರ್ಯದರ್ಶಿಯವರ ಕಚೇರಿಗೆ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಯನ್ನು ಸ್ವೀಕರಿಸಲಾಗಿದೆಯೇ ಹೊರತು ಕ್ರಮ ಜರುಗಿಸಿಲ್ಲವೆಂದು ಹೇಳಿದೆ. 

ಸಚಿವ ಸಂಪುಟದ ಸಭೆಗಳಿಗೆ ಸತತ ಗೈರಾಗುತ್ತಿರುವ ರಮೇಶ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅ.8 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಒತ್ತಾಯಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಸರ್ಕಾರಿ ಆಂಗ್ಲ ಶಾಲೇಲಿ ಕಲಿತ 30,000 ಮಕ್ಕಳು ಅತಂತ್ರ! ಬಿಇಒ, ಡಿಡಿಪಿಐ ಯಾರಿಂದಲೂ ಸ್ಪಷ್ಟ ಉತ್ತರವಿಲ್ಲ! ಯಾರನ್ನು ಕೇಳುವುದು?
₹2000 ಹಣ, ಉಚಿತ ವಿದ್ಯುತ್‌ ಪಡೆಯುತ್ತಿರುವವರೇ ಗಮನಿಸಿ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ!