ಎಸ್‌.ಎಂ. ಕೃಷ್ಣರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಶಾಸಕ ದಿನೇಶ್ ಗೂಳಿಗೌಡ, ಸ್ಟಾರ್ ಚಂದ್ರು ಮನವಿ

Published : Oct 30, 2024, 06:07 PM ISTUpdated : Oct 30, 2024, 06:08 PM IST
ಎಸ್‌.ಎಂ. ಕೃಷ್ಣರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಶಾಸಕ ದಿನೇಶ್ ಗೂಳಿಗೌಡ, ಸ್ಟಾರ್ ಚಂದ್ರು ಮನವಿ

ಸಾರಾಂಶ

ಎಸ್‌.ಎಂ. ಕೃಷ್ಣ ರವರು ನಾಡಿಗೆ ಸಲ್ಲಿಸಿದ ಕೀರ್ತಿಯನ್ನು ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವ ಮೂಲಕ ಅವರಿಗೆ ಕರ್ನಾಟಕಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಬೇಕಿದೆ ಎಂದ ಶಾಸಕ ದಿನೇಶ್ ಗೂಳಿಗೌಡ ಹಾಗೂ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಸ್ಟಾರ್ ಚಂದ್ರು (ವೆಂಕಟರಮಣೆ ಗೌಡ) 

ಬೆಂಗಳೂರು(ಅ.30):  ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು ಎಂದು ಶಾಸಕ ದಿನೇಶ್ ಗೂಳಿಗೌಡ ಹಾಗೂ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಸ್ಟಾರ್ ಚಂದ್ರು (ವೆಂಕಟರಮಣೆ ಗೌಡ) ಸಿಎಂ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಸಚಿವರಾದ ಶಿವರಾಜ್ ತಂಗಡಗಿ, ಕಡತ ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಎಸ್‌ಎಂಕೆ ಮತ್ತೊಮ್ಮೆ ಸಿಎಂ ಆಗುವುದನ್ನು ತಪ್ಪಿಸಿದ್ದು ಎಚ್‌ಡಿಡಿ: ಸಚಿವ ಚಲುವರಾಯಸ್ವಾಮಿ

ಮನವಿ ಪತ್ರದಲ್ಲೇನಿದೆ?

ಎಸ್‌.ಎಂ. ಕೃಷ್ಣ ಅವರು ನಾಡಿನ‌ ಹಿರಿಯ ರಾಜಕೀಯ ನಾಯಕರು ನಾಲ್ಕು ಸದನಗಳನ್ನು ಪ್ರತಿನಿಧಿಸಿ ಹಲವು‌ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿ ಸರ್ವ ಹುದ್ದೆಗಳಿಗೂ ಭೂಷಣರಾಗಿ ದೇಶಕ್ಕೆ ಅದರಲ್ಲೂ ಕನ್ನಡ ನಾಡಿಗೆ ಹೆಮ್ಮೆಯ ಕಳಶ ಪ್ರಾಯರಾಗಿದ್ದಾರೆ. ಹೀಗಾಗಿ ಕರ್ನಾಟಕ ರಾಜ್ಯ ನಾಮಾಂಕಿತವಾಗಿ ಐವತ್ತು ವಸಂತಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿರುವ ಶುಭ ಸಂದರ್ಭದಲ್ಲಿ ಎಸ್‌.ಎಂ. ಕೃಷ್ಣ ಅವರಿಗೆ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ರಾಜ್ಯದ ಜನರ‌ ಪರವಾಗಿ ಗೌರವಿಸುವಂತೆ ಕೋರುತ್ತೇವೆ.

ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಯಾಗಿ ರಾಜ್ಯ ಹಾಗೂ ರಾಷ್ಟ್ರದ ಸರ್ಕಾರಗಳಲ್ಲಿ ಮಂತ್ರಿಯಾಗಿ ನಾಡಿನ ಮುಖ್ಯಮಂತ್ರಿ ಯಾಗಿ, ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅಲಂಕರಿಸಿದ ಎಸ್.ಎಂ. ಕೃಷ್ಣ ಅವರು ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದರು. ಆ ನಂತರ ಅಮೆರಿಕ ದೇಶದಲ್ಲಿ ವಿಧ್ಯಾಭ್ಯಾಸ ನಡೆಸಿ ಕಾನೂನು ಪದವಿ ಪಡೆದು ಅಪಾರ ವಿದ್ವತ್ ಪಡೆದು ತಮ್ಮ ಅಪಾರ ಜ್ಞಾನ ಭಂಡಾರದ ಮೂಲಕ ಭವಿಷ್ಯದ ಕನ್ನಡ ನಾಡಿನ ಅಭಿವೃದ್ಧಿಗೆ ಭದ್ರ ಭುನಾಧಿ ಕಲ್ಪಸಿ ಬೆಂಗಳೂರನ್ನು ಐಟಿ ಬಿಟಿ ರಾಜಧಾನಿಯಾಗಿಸಿ ನಾಡಿನ ಆರ್ಥಿಕ ಬೆಳವಣಿಗೆಗೆ ದಾರಿದೀಪವಾದವರು.

ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಸುಧಾರಣೆ ತರಲಿ: ಎಸ್‌.ಎಂ.ಕೃಷ್ಣ ಮನವಿ

ಎಸ್.ಎಂ. ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ಅವರು ನ್ಯಾಯ ಒದಗಿಸಿಕೊಟ್ಟ ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರ್ಕಾರವು ಈಚೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. 

ಎಸ್‌ ಎಂ ಕೃಷ್ಣ ರವರು ಮೈಸೂರು ವಿಶ್ವವಿದ್ಯಾನಿಲಯದ ಕೀರ್ತಿ ಕಳಶರಾಗಿದ್ದರೆ. ಇಂದು ತಾವು ರಾಜ್ಯದ ಕನ್ನಡ ನಾಡಿನ‌ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಹ ನಿಗಧಿಯಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌.ಎಂ. ಕೃಷ್ಣ ರವರು ನಾಡಿಗೆ ಸಲ್ಲಿಸಿದ ಕೀರ್ತಿಯನ್ನು ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವ ಮೂಲಕ ಅವರಿಗೆ ಕರ್ನಾಟಕಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಬೇಕಿದೆ. 
ತಾವು ಕರ್ನಾಟಕಕ್ಕೆ ಕನ್ನಡಕ್ಕೇ ಅಗ್ರ ಸ್ಥಾನವೆಂದು ಘೋಷಿಸಿದ ಕೀರ್ತಿಯೂ ತಮ್ಮದಾಗಿದೆ. ತಮ್ಮ ಅವಧಿಯಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿದರೆ ಆ ಪ್ರಶಸ್ತಿಯ ಮೌಲ್ಯವೂ ಮತ್ತಷ್ಟು ಹೆಚ್ಚಾಗಲಿದ್ದು ದಯಮಾಡಿ ನನ್ನ ಮನವಿಯನ್ನು ಪರಿಗಣಿಸುವಂತೆ ಕೋರುತ್ತೇವೆ ಎಂದು ಮನವಿ ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ