ಕರ್ನಾಟಕ ಬಂದ್‌ನಿಂದ ಆರ್ಥಿಕ ನಷ್ಟವಾದರೆ ಆಯೋಜಕರೇ ಹೊಣೆ: ಹೈಕೋರ್ಟ್‌

Kannadaprabha News   | Asianet News
Published : Dec 05, 2020, 09:48 AM ISTUpdated : Dec 05, 2020, 02:05 PM IST
ಕರ್ನಾಟಕ ಬಂದ್‌ನಿಂದ ಆರ್ಥಿಕ ನಷ್ಟವಾದರೆ  ಆಯೋಜಕರೇ ಹೊಣೆ: ಹೈಕೋರ್ಟ್‌

ಸಾರಾಂಶ

ಬಂದ್‌ ವೇಳೆ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಮಾರ್ಗಸೂಚಿ ಉಲ್ಲಂಘಿಸಿದರೆ, ತಪ್ಪಿತಸ್ಥರಿಂದ ಪೊಲೀಸರು ದಂಡ ಸಂಗ್ರಹಿಸಬೇಕು ಎಂದು ಹೈಕೋರ್ಟ್ ಹೇಳಿದೆ. 

ಬೆಂಗಳೂರು (ಡಿ. 05): ಕರ್ನಾಟಕ ಬಂದ್‌ ವೇಳೆ ಬೀದಿ ಬದಿ ವ್ಯಾಪಾರಿಗಳಿಗೆ ಆಗುವ ನಷ್ಟಸೇರಿದಂತೆ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ ಎಂದು ಹೈಕೋರ್ಟ್‌ ಶುಕ್ರವಾರ ಸ್ಪಷ್ಟಪಡಿಸಿದೆ.

"

ರಾಜ್ಯದಲ್ಲಿ ಕೋವಿಡ್‌-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಲೆಟ್ಸ್‌ ಕಿಟ್ಸ್ ಫೌಂಡೇಶನ್‌ ಮತ್ತು ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನಾಯಮೂರ್ತಿ ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ಈ ಸ್ಪಷ್ಟನೆ ನೀಡಿದೆ.

ರಾಜಕೀಯ ಪಕ್ಷಗಳ ಕಾರ್ಯಕ್ರಮ ಹಾಗೂ ರಾರ‍ಯಲಿಗಳಲ್ಲಿ ಆಗುತ್ತಿರುವ ಕೋವಿಡ್‌-ಮಾರ್ಗಸೂಚಿಗಳ ಉಲ್ಲಂಘನೆಯನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳಲ್ಲಿ ವಾಟಾಳ್‌ ಪಕ್ಷ ಸೇರಿದಂತೆ ರಾಜ್ಯದಲ್ಲಿ ಮಾನ್ಯತೆ ಪಡೆದಿರುವ ಇತರೆ ಅನೇಕ ರಾಜಕೀಯ ಪಕ್ಷಗಳು ಪ್ರತಿವಾದಿಯಾಗಿವೆ.

ಇಂದು ಕರ್ನಾಟಕ ಬಂದ್; ರಾಜಧಾನಿಯಲ್ಲಿ ಹೀಗಿದೆ ಬಂದ್ ಎಫೆಕ್ಟ್!

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದು, ಬಂದ್‌ನಿಂದ ಸರ್ಕಾರದ ಖಜಾನೆಗೆ ಆರ್ಥಿಕ ನಷ್ಟಉಂಟಾಗುವ ಮತ್ತು ಕೋವಿಡ್‌ ಮಾರ್ಗಸೂಚಿಗಳು ಉಲ್ಲಂಘನೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸುಪ್ರೀಂ ಕೋರ್ಟ್‌ ಆದೇಶ ಪ್ರಕಾರ ಬಂದ್‌ ವೇಳೆ ಉಂಟಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಅವರೇ ಹೊಣೆ ಎಂದು ಸ್ಪಷ್ಟಪಡಿಸಿತು.

ಅಲ್ಲದೇ, ಬಂದ್‌ ವೇಳೆ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಮಾರ್ಗಸೂಚಿ ಉಲ್ಲಂಘಿಸಿದರೆ, ತಪ್ಪಿತಸ್ಥರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ಈ ನಿರ್ದೇಶನಗಳ ಪಾಲಿಸಿದ ಬಗ್ಗೆ ವರದಿಯನ್ನು ಡಿ.17ಕ್ಕೆ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್‌, ವಾಟಾಳ್‌ ಪಕ್ಷ ಸೇರಿದಂತೆ ಇತರೆ ರಾಜಕೀಯ ಪಕ್ಷಗಳಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ