ಮಾರ್ಚ್​​ 21 ರಿಂದ SSLC ಪರೀಕ್ಷೆ; ಸ್ಮಾರ್ಟ್​ ವಾಚ್​, ಮೊಬೈಲ್​ ನಿಷೇಧ..!

Published : Mar 18, 2019, 05:13 PM IST
ಮಾರ್ಚ್​​ 21 ರಿಂದ SSLC ಪರೀಕ್ಷೆ; ಸ್ಮಾರ್ಟ್​ ವಾಚ್​, ಮೊಬೈಲ್​ ನಿಷೇಧ..!

ಸಾರಾಂಶ

ಮಾರ್ಚ್​​ 21 ರಿಂದ SSLC ಪರೀಕ್ಷೆಗಳು ಆರಂಭವಾಗಲಿವೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ರಾಜ್ಯ  ಪ್ರೌಢ ಶಿಕ್ಷಣ ಮಂಡಳಿ ಮಾಡಿಕೊಂಡಿದೆ. ಈ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇಷ್ಟು..? ಈ ಬಾರಿ ಏನೆಲ್ಲ ಬದಲಾವಣೆ ಇರಲಿದೆ..? ಇಲ್ಲಿದೆ ಸಮಗ್ರ ಮಾಹಿತಿ

ಬೆಂಗಳೂರು,(ಮಾ.18): ಮಾರ್ಚ್​ 21 ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗಲಿದೆ.  ಈ ಹಿನ್ನೆಲೆಯಲ್ಲಿ ಪರೀಕ್ಷಾ ಸಿದ್ಧತೆಗಳ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಾಫರ್ ಹಾಗೂ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕಿ ವಿ‌ ಸುಮಂಗಲಾ‌ ಸುದ್ದಿಗೋಷ್ಠಿಯಲ್ಲಿ ಸಮಗ್ರ ಮಾಹಿತಿ ನೀಡಿದರು.

ಮಾರ್ಚ್​ 21 ರಿಂದ ಏಪ್ರಿಲ್​ 4 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ. ಒಟ್ಟು 8,41,666 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಾಯಿತರಾಗಿರುತ್ತಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

 2,847 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. 4,651 ವಿಕಲ ಚೇತನ‌ ಮಕ್ಕಳು ನೋಂದಾವಣಿ ಆಗಿದ್ದಾರೆ. 1451 ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಗೆ ಭಾಷಾ ವಿನಾಯತಿ ನೀಡಲಾಗಿದೆ. 

480 ಅರ್ಹ ವಿದ್ಯಾರ್ಥಿಗಳಿಗೆ ಗಣಿತ ಹಾಗೂ ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯಾ ವಿಷಯ ಬರೆಯುವ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಹಾಜರಾತಿ ಕೊರತೆಯಿಂದಾಗಿ 10,572 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶ ಇಲ್ಲ. 2,847 ಪರೀಕ್ಷಾ ಕೇಂದ್ರಗಳಿದ್ದು, ಅವುಗಳಲ್ಲೂ 1,057 ಕ್ಲಸ್ಟರ್ ಸಹಿತ ಹಾಗೂ 1698 ಕ್ಲಸ್ಟರ್ ಕೇಂದ್ರಗಳಿದ್ದು, ಖಾಸಗಿ ಅಭ್ಯರ್ಥಿಗಳಿಗಾಗಿ ಜಿಲ್ಲಾ‌ ಕೇಂದ್ರಗಳಲ್ಲಿ 92 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 

ಏಪ್ರಿಲ್ 10 ರಿಂದ ಮೌಲ್ಯ ‌ಮಾಪನ‌ ಆರಂಭವಾಗಲಿದ್ದು, 34 ಶೈಕ್ಷಣಿಕ ಜಿಲ್ಲೆಗಳ 230 ಮೌಲ್ಯ ‌ಮಾಪನ‌ ಕೇಂದ್ರದಲ್ಲಿ ಮೌಲ್ಯ ಮಾಪನ ನಡೆಯಲಿದೆ ಎಂದರು.

46 ಸೂಕ್ಷ್ಮ ಹಾಗೂ 7 ಅತಿಸೂಕ್ಷ್ಮ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಜಾಗೃತ ದಳ ಒಳಗೊಂಡಂತೆ ತಾಲೂಕು ಜಿಲ್ಲಾ ಹಂತಗಳಲ್ಲಿ ವಿಚಕ್ಷಣ ದಳ ಕಾರ್ಯ ನಿರ್ವಹಿಸಲಿದೆ. 

ಜಿಲ್ಲಾ ಡಯಟ್ ಪ್ರಾಶುಂಪಾಲರನ್ನು ಆಯಾ ಜಿಲ್ಲೆ‌ ಪರೀಕ್ಷಾ ಕಾರ್ಯದ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಸ್ಮಾರ್ಟ್ ವಾಚ್, ‌ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ.

200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಜೆರಾಕ್ಸ್ ಅಂಗಡಿಯನ್ನು ಮುಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ