
ಮೈಸೂರು (ಫೆ.20): ಮುಡಾ ಹಗರಣ ಪ್ರಕರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ನಾನು ಮಾಡಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರ ಇಲ್ಲವೆಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ. ಹಾಗಾದರೆ ನಾನು ಕಸ ಕೊಟ್ಟಿದ್ದೀನಾ ಎಂದು ಪ್ರಶ್ನಿಸಿದರು.
ಲೋಕಾಯುಕ್ತ ಅಧಿಕಾರಿಗಳು ನನಗೆ ಮಾತ್ರ ಮೋಸ ಮಾಡಿಲ್ಲ. ದೇಶದ ನ್ಯಾಯಾಲಯಕ್ಕೇ ಮೋಸ ಮಾಡಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇನೆ. ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಸಂಪೂರ್ಣವಾಗಿ ನೋಡಿದ ಬಳಿಕ ಮುಂದೇನು ಮಾಡಬೇಕೆಂದು ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ: ಸಿಎಂ ಪತ್ನಿ, ಭಾಮೈದಗೆ ಲೋಕಾಯುಕ್ತ ಕ್ಲೀನ್ಚಿಟ್, 'ಮುಡಾ'ದಲ್ಲಿ ಶುದ್ಧರಾಮಯ್ಯ! ಇಂದು ಕೋರ್ಟ್ಗೆ ವರದಿ, ಮುಂದೇನು?
ನಾನು ನೀಡಿರುವ ಸಾಕ್ಷ್ಯಾಧಾರಗಳು ತನಿಖೆಗೆ ಯೋಗ್ಯವಾಗಿಲ್ಲ ಎಂದಿರುವ ಲೋಕಾಯುಕ್ತ ಅಧಿಕಾರಿಗೆ ತನಿಖಾಧಿಕಾರಿಯಾಗಿ ತನಿಖೆ ನಡೆಸುವ ಯೋಗ್ಯತೆಯೇ ಇಲ್ಲ. ಲೋಕಾಯುಕ್ತ ನೋಟಿಸ್ ನೀಡಿರುವುದರಿಂದ ನಾನು ಎದೆಗುಂದುವುದಿಲ್ಲ. ನನ್ನ ಹೋರಾಟ ಹತ್ತಿಕ್ಕುವುದಕ್ಕಿಂತ ಆರೋಪಿಗಳ ರಕ್ಷಣೆ ಮಾಡುವುದೇ ಲೋಕಾಯುಕ್ತ ಅಧಿಕಾರಿಗಳ ಉದ್ದೇಶವಾಗಿದೆ. ನನ್ನ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ನಾನು ಕಾನೂನು ಹೋರಾಟವನ್ನು ಮುಂದುವರೆಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ