
ಬೆಂಗಳೂರು (ಜೂ. 20): ರಾಹುಗ್ರಸ್ತ ಸೂರ್ಯ ಗ್ರಹಣ ಹಿನ್ನಲೆ ಜೂ. 21 ರಂದು ಬಹುತೇಕ ದೇವಾಲಯಗಳಲ್ಲಿ ಮಧ್ಯಾಹ್ನದವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ನಿರ್ಬಂಧಿಸಲಾಗಿದೆ.
ಜೂನ್ 21 ರ ಬೆಳಿಗ್ಗೆ 10.12 ರಿಂದ 1.30 ರವರೆಗೆ ಸೂರ್ಯ ಗ್ರಹಣ ಜರುಗಲಿದೆ. ಈ ಹಿನ್ನಲೆಯಲ್ಲಿ ಬಹುತೇಕ ದೇವಾಲಯಗಳು ಶನಿವಾರ ಸಂಜೆಯಿಂದಲೇ ಬಾಗಿಲು ಮುಚ್ಚಲಿದೆ.
ಗಾಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗ್ರಹಣ ಶಾಂತಿ ಮಾಡಲಾಗುತ್ತದೆ. ದೇವಸ್ಥಾನದ ಅರ್ಚಕರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!
"
ಕೋಲಾರದ ಕುರುಡುಮಲೆ ವಿನಾಯಕ ಸ್ವಾಮಿ ದೇಗುಲ ಬಂದ್ ಆಗಲಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
"
ಬೆಂಗಳೂರಿನ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಎಂದಿನಂತೆ ಪೂಜಾ ವಿಧಿ ವಿಧಾನಗಳು ನಡೆಯಲಿವೆ.
"
ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಬೆಳಿಗ್ಗೆ 5 ರಿಂದ 9 ರವರೆಗೆ ಸೂರ್ಯಶಾಂತಿ ಹೋಮ ಮಾಡಲಾಗುತ್ತದೆ. 9 ರಿಂದ 2 ರವರೆಗೆ ದೇವಸ್ಥಾನ ಮುಚ್ಚಲಾಗಿರುತ್ತದೆ.
"
ವಿಶ್ವ ವಿಖ್ಯಾತ ಕೋಟಿ ಲಿಂಗೇಶ್ವರ ದೇವಾಲಯ ಬಂದ್ ಆಗಲಿದೆ. ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ