
ಬೆಂಗಳೂರು(ಜೂ.20): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಂತೆ ನೆರೆ ಹೊರೆಯ ರಾಜ್ಯಗಳ ಮದ್ಯದ ಬೆಲೆಯನ್ನು ಪರಿಗಣಿಸಿ ದರ ಪರಿಷ್ಕರಿಸಲು ಅಬಕಾರಿ ಇಲಾಖೆಯು ಕರಡು ಅಧಿಸೂಚನೆ ಪ್ರಕಟಿಸಿದ್ದು, ಜು.1 ರಿಂದ ಪರಿಷ್ಕೃತ ದರ ಜಾರಿಯಾಗಲಿವೆ. ಇದರನ್ವಯ ಅಗ್ಗದ ಕೆಲ ಮದ್ಯಗಳು ದುಬಾರಿಯಾಗ ಲಿದ್ದರೆ, ದುಬಾರಿ ಮದ್ಯಗಳು ಸ್ವಲ್ಪ ಅಗ್ಗವಾಗಲಿವೆ.
ನೆರೆಯ ರಾಜ್ಯಗಳಲ್ಲಿ ಕಡಿಮೆ ಬೆಲೆಯ ಮದ್ಯಗಳ ಮೊದಲ ಕೆಲ ಸ್ಲ್ಯಾಬ್ಗಳ ದರ ಹೆಚ್ಚಳವಾಗಿದೆ. ಆದರೆ ಕರ್ನಾಟಕದಲ್ಲಿ ಬೆಲೆ ಕಡಿಮೆ ಇದೆ.
'ಎಣ್ಣೆ' ಪ್ರಿಯರಿಗೆ ಕಾದಿದೆ ಆಘಾತ: ಮದ್ಯದ ಬೆಲೆ ಶೀಘ್ರ ದುಬಾರಿ?
ಇನ್ನು ದುಬಾರಿ ಮದ್ಯಗಳ ಬೆಲೆ ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಹೆಚ್ಚಾಗಿದೆ. ಆದ್ದರಿಂದ ನೆರೆ ರಾಜ್ಯಗಳ ಮದ್ಯದ ದರವನ್ನು ಪರಿಗಣಿಸಿ 'ಸಮತೋಲನ' ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿತ್ತು. ಅದರಂತೆ ಇದೀಗ ಜು.1 ರಿಂದ ಪರಿಷ್ಕೃತ ದರಗಳು ಅನ್ವಯವಾಗಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ