ಕೆಲ ಸ್ವಾಮೀಜಿಗಳಿಂದ ರಾಜಕೀಯಕ್ಕಾಗಿ ಶ್ರೀ ರಾಮಮಂದಿರ ಬಗ್ಗೆ ಅಪಸ್ವರ: ಸಂಸದ ಪ್ರತಾಪ್ ಸಿಂಹ

Published : Jan 20, 2024, 05:23 AM IST
ಕೆಲ ಸ್ವಾಮೀಜಿಗಳಿಂದ ರಾಜಕೀಯಕ್ಕಾಗಿ ಶ್ರೀ ರಾಮಮಂದಿರ ಬಗ್ಗೆ ಅಪಸ್ವರ: ಸಂಸದ ಪ್ರತಾಪ್ ಸಿಂಹ

ಸಾರಾಂಶ

ಶಂಕರಚಾರ್ಯರ ಮಠದ ಕೆಲ ಸ್ವಾಮೀಜಿಗಳು ರಾಜಕೀಯ ಕಾರಣಕ್ಕಾಗಿ ಆಯೋಧ್ಯೆ ಶ್ರೀ ರಾಮಮಂದಿರ ವಿಚಾರದಲ್ಲಿ ಅಪಸ್ವರ ಎತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮೈಸೂರು (ಜ.19): ಶಂಕರಚಾರ್ಯರ ಮಠದ ಕೆಲ ಸ್ವಾಮೀಜಿಗಳು ರಾಜಕೀಯ ಕಾರಣಕ್ಕಾಗಿ ಆಯೋಧ್ಯೆ ಶ್ರೀ ರಾಮಮಂದಿರ ವಿಚಾರದಲ್ಲಿ ಅಪಸ್ವರ ಎತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಠದ ಕೆಲ ಸ್ವಾಮೀಜಿಗಳ ರಾಜಕೀಯ ಸಿದ್ಧಾಂತಗಳು ಜನರಿಗೆ ಗೊತ್ತಿವೆ. ಮೋದಿ ಸೋಲಿಸಲೇ ಬೇಕೆಂದು ಹೋರಾಟ ಮಾಡಿದ ಕೆಲ ಸ್ವಾಮೀಜಿಗಳೂ ಇದರಲ್ಲಿದ್ದಾರೆ. ಅವರಿಂದ ಬೇರೆ ಏನನ್ನು ನಿರೀಕ್ಷೆ ಮಾಡಲು ಸಾಧ್ಯ ಹೇಳಿ ಎಂದು ಪ್ರಶ್ನಿಸಿದರು.

ಪರಿಪೂರ್ಣವಾದ ಜ್ಞಾನ ಇಲ್ಲ: ಅಯೋಧ್ಯೆಯಲ್ಲಿ ನಿರ್ಮಿಸಿರುವ ರಾಮಮಂದಿರ ಪೂರ್ಣವಾಗಿಲ್ಲ ಎನ್ನುವವರಿಗೆ ಪರಿಪೂರ್ಣ ಜ್ಞಾನ ಇಲ್ಲ. ಯಾವ ದೇವಸ್ಥಾನಗಳೂ ಒಂದೇ ಕಾಲದಲ್ಲಿ ಪೂರ್ಣವಾಗುವುದಿಲ್ಲ. ಕಾಲದಿಂದ ಕಾಲಕ್ಕೆ ಅವು ಪೂರ್ಣಗೊಳ್ಳುತ್ತವೆ. ದೇವಸ್ಥಾನದ ಗರ್ಭಗುಡಿಯ ಪ್ರಾಣ ಪ್ರತಿಷ್ಠಾಪನೆ ಯಾವತ್ತಿಗೂ ಬಹಳ ಮುಖ್ಯ. ಉಳಿದ ಕಾಮಗಾರಿಗಳು ಬಹಳಷ್ಟು ವರ್ಷ ನಡೆಯುತ್ತವೆ. ಹಿಂದಿನ ರಾಜಮನೆತನದವರು ಕಟ್ಟಿಸಿದ ದೇವಸ್ಥಾನದ ವಿಚಾರ ಗೊತ್ತಿದ್ದರೆ ರಾಮಮಂದಿರವೂ ಅಪೂರ್ಣ ಎನಿಸುವುದಿಲ್ಲ ಎಂದು ತಿರುಗೇಟು ನೀಡಿದರು.

ಮಗನ ಹೆಗಲ ಮೇಲೆ ಬಂದೂಕಿಟ್ಟು ಡಿಕೆಶಿಗೆ ಸಿದ್ದು ಗುಂಡು: ಸಂಸದ ಪ್ರತಾಪ ಸಿಂಹ

ಓಲೈಕೆ ಮಾತು: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ವಿಚಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನದ ಆಸೆಗಾಗಿ ಸಚಿವ ಕೆ.ಎನ್.ರಾಜಣ್ಣ ಅವರು ಅಸಂಬದ್ಧ ಮಾತು ಆಡುತ್ತಿದ್ದಾರೆ. ವಾಲ್ಮೀಕಿ ಸಮುದಾಯದವರು ಶ್ರೀರಾಮನನ್ನು ಎದೆ ಗೂಡಲ್ಲಿಟ್ಟುಕೊಂಡಿರುತ್ತಾರೆ. ರಾಜಣ್ಣ ಅದೇ ಸಮುದಾಯಕ್ಕೆ ಸೇರಿದವರು. ಇಂಥವರು ಟಿಪ್ಪು ಜಯಂತಿ ಆಚರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಓಲೈಸಲು ಇಲ್ಲಸಲ್ಲದ ಮಾತು ಆಡುತ್ತಿದ್ದಾರೆ. ಇಂಥವರಿಗೆಲ್ಲ ಜನರೇ ಉತ್ತರ ಕೊಡುತ್ತಾರೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್