
ಸಕಲೇಶಪುರ[ಡಿ.29]: ಮಗನೊಬ್ಬ ಹೆತ್ತ ತಾಯಿಯ ಕೈ ಕತ್ತರಿಸಿದ ಹೃದಯ ವಿದ್ರಾವಕ ದುರ್ಘಟನೆ ಹಾಸನ ಜಿಲ್ಲೆ ಸಕಲೇಸಪುರ ತಾಲೂಕಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಶುಕ್ರವಾರ ಸಂತೆ ಸಮೀಪದ ಯಡೆವರ ಹಳ್ಳಿಯ ಲಲಿತಮ್ಮ (58) ಅವರ ಕೈಯನ್ನು ಪುತ್ರ ದಿಲೀಪ ಮಚ್ಚಿನಿಂದ ಕತ್ತರಿಸಿದ್ದಾನೆ. ಎರಡನೇ ಮದುವೆಗೆ ತಾಯಿ ಒಪ್ಪಿಗೆ ನೀಡುತ್ತಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ. ಸಕಲೇಶಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹಾಸನದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಆರೋಪಿಯನ್ನು ಶುಕ್ರವಾರ ಸಂತೆ ಸಮೀಪ ಪೊಲೀಸರು ಬಂಧಿಸಿದ್ದು, ಯಸಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ