ಸೂಕ್ತ ಸ್ಥಳವನ್ನೇ ನೀಡುತ್ತೇವೆ : ಜಮೀರ್‌ಗೆ ಹೇಳಿದ ಸಚಿವ ಸೋಮಣ್ಣ

Kannadaprabha News   | Asianet News
Published : Feb 02, 2021, 08:33 AM IST
ಸೂಕ್ತ ಸ್ಥಳವನ್ನೇ ನೀಡುತ್ತೇವೆ : ಜಮೀರ್‌ಗೆ ಹೇಳಿದ ಸಚಿವ ಸೋಮಣ್ಣ

ಸಾರಾಂಶ

ಕರ್ನಾಟಕ ವಸತಿ ಸಚಿವ ವಿ ಸೋಮಣ್ಣ ಸೂಕ್ತ ಸ್ಥಳವನ್ನೇ ಕಲ್ಪಿಸಿಕೊಡುವುದಾಗಿ ಹೇಳಿದ್ದಾರೆ. ಕೈ ಮುಖಡಮ ಜಮೀರ್‌ ಅಹಮದ್‌ಗೆ ಈ ಹೇಳಿಕೆ ನೀಡಿದರು. 

ವಿಧಾನಸಭೆ (ಫೆ.02):  ಘೋಷಿತ ಕೊಳಚೆ ಪ್ರದೇಶದಲ್ಲಿ ನೆಲೆಸಿರುವವರಿಗೆ ಶೀಘ್ರದಲ್ಲೇ ಹಕ್ಕುಪತ್ರ ವಿತರಣೆಗೆ ಕ್ರಮಕೈಗೊಳ್ಳಲಾಗುವುದು ಹಾಗೂ ಪ್ರತಿಯೊಬ್ಬರಿಗೆ ಸೂರು ಕಲ್ಪಿಸಬೇಕು ಎಂಬ ಆಶಯದೊಂದಿಗೆ ಮುಂದಿನ 8-10 ದಿನದಲ್ಲಿ ಯಾವ ರೀತಿ ವಸತಿ ನೀಡಬೇಕು ಎಂಬ ಕುರಿತು ಸ್ಪಷ್ಟಚಿತ್ರಣ ಸಿದ್ಧ​ಪ​ಡಿ​ಸ​ಲಾ​ಗು​ವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಸೋಮವಾರ ಕಾಂಗ್ರೆಸ್‌ ಸದಸ್ಯ ಜಮೀರ್‌ ಅಹಮ್ಮದ್‌ ಖಾನ್‌ ಪ್ರಶ್ನೆಗೆ ಉತ್ತರ ನೀಡಿದ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ 600 ಚದರ ಅಡಿ, ನಗರಸಭೆ ವ್ಯಾಪ್ತಿಯಲ್ಲಿ 600 ಚದರ ಅಡಿ, ಪುರಸಭೆ, ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ 1200 ಚದರ ಅಡಿ ಮೀರದಂತೆ ನೆಲೆಸಿರುವವರಿಗೆ ಹಕ್ಕು ಪತ್ರ ವಿತರಿಸ​ಲಾ​ಗು​ವುದು. ಆರು ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸುವ ಚಿಂತನೆ ಇದೆ. ಎಲ್ಲರಿಗೂ ಸೂರು ಕಲ್ಪಿಸಬೇಕೆಂಬ ಆಶಯದೊಂದಿಗೆ ಕಾರ್ಯ ನಿರ್ವಹಿಸಲಾಗುತ್ತಿದೆ. ಫಲಾನುಭವಿಗಳಿಂದ ಯಾವ ರೀತಿಯಾಗಿ ಹಣ ಸಂಗ್ರಹಿಸಬೇಕು ಮತ್ತು ಯಾವ ರೀತಿ ವಸತಿ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯಲಾಗುತ್ತಿದೆ. ಮುಂದಿನ 8-10 ದಿನಗಳÜಲ್ಲಿ ಈ ಬಗ್ಗೆ ಸ್ಪಷ್ಟರೂಪುರೇಷೆ ತಯಾರಿಸಲಾಗುವುದು ಎಂದರು.

ಸಾಮಾನ್ಯ ಜನರಿಗೆ ಸಂತಸದ ಸುದ್ದಿ ನೀಡಿದ ಸರ್ಕಾರ..! ..

ಪುರಸಭೆ ಮತ್ತು ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ 1,200 ಚದರ ಅಡಿಯಲ್ಲಿರುವ ನಿವೇಶನ ನೋಂದಣಿಗೆ ಸಾಮಾನ್ಯ ವರ್ಗದವರಿಗೆ .3 ಸಾವಿರ, ಎಸ್‌ಸಿ, ಎಸ್‌ಟಿ ವರ್ಗದವರಿಗೆ .1200, ನಗರಸಭೆ ವ್ಯಾಪ್ತಿಯಲ್ಲಿನ 600 ಚದರ ಅಡಿ ನಿವೇಶನಕ್ಕೆ ಸಾಮಾನ್ಯ ವರ್ಗದವರಿಗೆ .4 ಸಾವಿರ, ಎಸ್‌ಸಿ/ಎಸ್‌ಟಿ ವರ್ಗದವರಿಗೆ .2 ಸಾವಿರ ನಿಗದಿ ಮಾಡಲಾಗಿದೆ. ಬಿಬಿಎಂಪಿ ಮತ್ತು ನಗರ ಪಾಲಿಕೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳ ನಿವೇಶನದ ನೋಂದಣಿಗೆ ಸಾಮಾನ್ಯ ವರ್ಗದವರಿಗೆ .10 ಸಾವಿರ, ಎಸ್‌ಸಿ/ಎಸ್‌ಟಿ ವರ್ಗದವರಿಗೆ 5 ಸಾವಿರ ರು. ನಿಗದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ
ಅಧಿವೇಶನದಲ್ಲಿ ನಾವು ರಾಜ್ಯದ ರೈತರಿಗೋಸ್ಕರ ಹೋರಾಡುತ್ತೇವೆ: ಆರ್‌.ಅಶೋಕ್‌