
ಮೈಸೂರು: ಒಳ್ಳೆಯ ಮುಹೂರ್ತ ನೋಡಿ ನಾನು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಅರಣ್ಯ ಸಚಿವ ಆರ್.ಶಂಕರ್ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲೇ ಶಾಸಕರಾಗಿದ್ದೂ ಅಲ್ಲದೆ, ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದ ಆರ್.ಶಂಕರ್ ಅವರಿಗೆ ಕಾಂಗ್ರೆಸ್ಗೆ ಸೇರಲು ಆ ಪಕ್ಷದಿಂದ ಒತ್ತಡವಿತ್ತು. ಆದರೆ, ಮೈತ್ರಿ ಸರ್ಕಾರದ ಆಯಸ್ಸಿನ ಬಗ್ಗೆ ಅನುಮಾನ ಹೊಂದಿರುವ ಶಂಕರ್ ಕಾಂಗ್ರೆಸ್ ಸೇರಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿತ್ತು. ಇದೀಗ ಶಂಕರ್ ಒಳ್ಳೆಯ ದಿನ ನೋಡಿ ಕಾಂಗ್ರೆಸ್ ಸೇರುತ್ತೇನೆ ಎನ್ನುವ ಮೂಲಕ ಇರುವ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಬಿಜೆಪಿ ಸೇರಲ್ಲ: ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸಂಪುಟದಲ್ಲೇ ಇರುತ್ತೇನೆ. ಸಂಪುಟ ವಿಸ್ತರಣೆ ಹಾಗೂ ಖಾತೆ ಬದಲಾವಣೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆ ಬಗ್ಗೆ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ, ನಾನು ಸಚಿವನಾಗಿಯೇ ಮುಂದುವರಿಯಲಿದ್ದೇನೆ ಎಂದು ತಿಳಿಸಿದರು.
ನಾನು ಬಿಜೆಪಿ ಸೇರುತ್ತೇನೆ ಎಂಬುದು ಮಾಧ್ಯಮಗಳ ಸೃಷ್ಟಿ. ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಹೋಗಲ್ಲ. ಕಾಂಗ್ರೆಸ್, ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ಸಚಿವ ಸಂಪುಟದಲ್ಲಿಯೇ ಇರುತ್ತೇನೆ. ಮಾಧ್ಯಮಗಳಿಂದಾಗಿ ಕೆಲವು ಗೊಂದಲಗಳು ಉಂಟಾಗಿವೆ. ಆ ರೀತಿ ಗೊಂದಲ ಆಗಬಾರದೆಂದೇ ನಾನು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ