ಶೀಘ್ರ ಬಾರ್‌, ಪಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅವ​ಕಾಶ?

Kannadaprabha News   | Asianet News
Published : Aug 22, 2020, 09:20 AM ISTUpdated : Aug 22, 2020, 09:45 AM IST
ಶೀಘ್ರ ಬಾರ್‌, ಪಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅವ​ಕಾಶ?

ಸಾರಾಂಶ

ಶೀಘ್ರ ಪಬ್ ಮತ್ತು ಬಾರ್‌ಗಳಲ್ಲಿಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಆದರೆಇದಕ್ಕೆ ಕಂಡಿಶನ್ಗಳನ್ನು ಹೇರಲಾಗಿದೆ.

ಬೆಂಗಳೂರು (ಆ.22): ಕೊರೋನಾ ಸೋಂಕು ಭೀತಿಯಿಂದ ಕಳೆದ ಐದು ತಿಂಗಳಿನಿಂದ ಬಾರ್‌ ಮತ್ತು ಕ್ಲಬ್‌ಗಳಲ್ಲಿ ಮದ್ಯ ಸರಬರಾಜಿಗೆ ವಿಧಿಸಿರುವ ನಿರ್ಬಂಧವನ್ನು ಸೆಪ್ಟೆಂಬರ್‌ 1ರಿಂದ ತೆರವುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಹಣಕಾಸು ಮತ್ತು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಶುಕ್ರವಾರ ಸಭೆ ನಡೆಸಿದ್ದು, ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಗಳು, ನೆರೆ ರಾಜ್ಯಗಳಲ್ಲಿ ಕೊರೋನಾ ನಡುವೆ ಮದ್ಯ ಸರಬರಾಜಿಗೆ ಅವಕಾಶ ಮಾಡಿಕೊಟ್ಟಿರುವ ಕುರಿತು ಪರಿಶೀಲಿಸಲಾಗಿದೆ. ಈ ಬಗ್ಗೆ ಅಂತಿಮವಾಗಿ ಪ್ರತ್ಯೇಕ ಎಸ್‌ಒಪಿ (ಕಾರ್ಯಾಚರಣೆ ವಿಧಾನ) ಸಿದ್ಧಪಡಿಸಿ ರಾಜ್ಯದಲ್ಲಿ ಬಾರ್‌ ಮತ್ತು ಕ್ಲಬ್‌ಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶ ಮಾಡಿಕೊಡುವ ಕುರಿತು ಚರ್ಚಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಕುರಿತು ತಜ್ಞರ ಸಲಹೆಗಳನ್ನು ಪಡೆಯಲಾಗುತ್ತಿದೆ ಎಂದು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮದ್ಯಪ್ರಿಯರಿಗಾಗಿ ಹಿಪ್ ಬಾರ್ ತೆರೆದ ಫ್ಲಿಪ್ ಕಾರ್ಟ್.. ಆನ್‌ಲೈನ್‌ನಲ್ಲೇ ಎಣ್ಣೆ!

 ಬಾರ್‌ ಮತ್ತು ಕ್ಲಬ್‌ಗಳಲ್ಲಿ ಜನ ಸೇರುವ ಸಾಮರ್ಥ್ಯದ ಆಧಾರದಲ್ಲಿ ಶೇ.50ರಷ್ಟುಜನರಿಗೆ ಮಾತ್ರ ಅವಕಾಶ ನೀಡುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸಿಬ್ಬಂದಿಗೆ ಮಾಸ್ಕ್‌ ಕಡ್ಡಾಯಗೊಳಿಸುವ ಸಂಬಂಧ ಚರ್ಚೆ ನಡೆದಿದೆ ಎಂದು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮದ್ಯ ಮಾರಾಟಕ್ಕೆ ಮುಖ್ಯಮಂತ್ರಿಗಳ ಅನುಮತಿ ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಕಡತವನ್ನು ಸೋಮವಾರ ಮುಖ್ಯಮಂತ್ರಿಗಳ ಕಚೇರಿಗೆ ಕಳುಹಿಸಲಾಗುವುದು. ಅನುಮತಿ ಲಭ್ಯವಾದ ಬಳಿಕ ರಾಜ್ಯಾದ್ಯಂತ ಬಾರ್‌ ಮತ್ತು ಕ್ಲಬ್‌ಗಳಲ್ಲಿ ಮದ್ಯ ಸರಬರಾಜು ಮಾಡಲು ಅವಕಾಶ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ