Karnataka Govt Employment Schemes : ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್

Suvarna News   | Asianet News
Published : Jan 03, 2022, 04:00 PM IST
Karnataka Govt Employment Schemes :  ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್

ಸಾರಾಂಶ

*ಕಲಬುರಗಿಯಲ್ಲಿ  ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮ  * ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ * ಟೆಕ್ಸ್ ಟೈಲ್  ಪಾರ್ಕ್ ಪ್ರಾರಂಭಿಸುವವರಿಗೆ ಹಲವು ರಿಯಾಯ್ತಿ ಘೋಷಿಸಿದ ಸಚಿವರು * ಕಲ್ಯಾಣ ಕರ್ನಾಟಕ ಭಾಗದ ಸಾವಿರಾರು ರೈತರಿಗೆ ಇದರಿಂದ ಪ್ರಯೋಜನ   

ಕಲಬುರಗಿ (ಜ.3) : ಕಲ್ಯಾಣ ಕರ್ನಾಟಕದ (Karnataka)  ಪ್ರಮುಖ ಕೇಂದ್ರ ಕಲಬುರಗಿಯಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ಕಾರಣಕ್ಕಾಗಿ  ಈ ಭಾಗದಲ್ಲಿ ಜವಳಿ ಪಾಕ್೯ (ಟೆಕ್ಸ್ ಟೈಲ್) ಪ್ರಾರಂಭಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ (Murugesh Nirani)  ಘೋಷಿಸಿದರು.  ಇಂದು ಗುಲಬರ್ಗಾ ವಿಶ್ವವಿದ್ಯಾಲಯದ (University) ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ನಡೆದ ಉದ್ಯಮಿಯಾಗು ,ಉದ್ಯೋಗ ನೀಡು ಹಾಗೂ ಕೈಗಾರಿಕಾ ಆದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ಸಂಬಂಧ ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆಯನ್ನು ನಡೆಸಲಾಗಿದ್ದು, ಕೇಂದ್ರ ನಮಗೆ ಸಕಾರಾತ್ಮಕವಾಗಿ ಸ್ಪಂಧಿಸಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ (Kalyana karnataka)  ರಾಯಚೂರು, ಕೊಪ್ಪಳ, ಬೀದರ್ ಸೇರಿದಂತೆ ಈ ಸುತ್ತಮುತ್ತಲ  ಜಿಲ್ಲೆಗಳಲ್ಲಿ ಹತ್ತಿಯನ್ನು ಯಥೇಚ್ಚವಾಗಿ ಬೆಳೆಯುತ್ತಾರೆ. ಇಲ್ಲಿ ಜವಳಿ ಪಾರ್ಕ್ ಪ್ರಾರಂಭವಾದರೆ ರೈತರಿಗೆ (Farmers)  ಹೆಚ್ಚಿನ ಅನುಕೂಲವಾಗಲಿದೆ ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Nirani) ಹೇಳಿದರು. 

ಜವಳಿ ಪಾರ್ಕ್ ಪ್ರಾರಂಭಿಸಲು ಬರುವವರಿಗೆ  ಸರ್ಕಾರ (Govt) ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಿದೆ. ಅವರಿಗೆ ಪವನ ಹಾಗೂ , ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವವರಿಂದ  ರಿಯಾಯ್ತಿ ದರದಲ್ಲಿ ವಿದ್ಯುತ್ ನೀಡುವುದು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದಲೇ ತರಬೇತಿ ನೀಡಿ ನುರಿತ ಕೌಶಲ್ಯ ಕಾರ್ಮಿಕರನ್ನು ಒದಗಿಸಲಿದ್ದೇವೆ ಎಂದು ಆಶ್ವಾಸನೆ ನೀಡಿದರು.

ಜವಳಿ ಪಾರ್ಕ್  ಆರಂಭವಾದರೆ  ಹತ್ತಿ ನೂಲುವುದು, ಬೀಜ ತೆಗೆಯುವುದು ಹಾಗೂ ಸ್ಥಳೀಯರಿಗೆ ಉದ್ಯೋಗ (Employment) ನೀಡಲು ಸಹಾಯವಾಗುತ್ತದೆ. ಟೆಕ್ಸ್ ಟೈಲ್ ಪಾರ್ಕ್  ಆರಂಭಿಸಲು ಮುಂದೆ ಬರುವ ಉದ್ಯಮಿಗಳಿಗೆ ಸರ್ಕಾರ ಅನೇಕ ರೀತಿಯ ನೆರವುಗಳನ್ನು ನೀಡಲಿದೆ ಎಂದು ಭರವಸೆ ಕೊಟ್ಟರು. 

 ಈ ಭಾಗವನ್ನು ಟೆಕ್ಸ್ ಟೈಲ್ ಹಬ್ ಮಾಡುವುದು ನಮ್ಮ ಸರ್ಕಾರದ  (Govt) ಗುರಿಯಾಗಿದೆ. ಕೈಗಾರಿಕೆಗಳನ್ನು ಪ್ರಾರಂಭಿಸಲು ಬರುವ  ಉದ್ಯಮಿಗಳಿಗೆ ಅಗತ್ಯವಾದ ನೀರು, ರಸ್ತೆ, ವಿದ್ಯುತ್ (Electricity), ಭೂಮಿ ಎಲ್ಲವನ್ನು ಕಾಲಮಿತಿಯೊಳಗೆ ನೀಡಲಿದೆ. ಉದ್ಯಮಿಗಳು ಇದರ ಸದುಪಯೋಗ
ಪಡಿಸಿಕೊಳ್ಳಬೇಕೆಂದು  ಅವರು ಮನವಿ ಮಾಡಿದರು. 

ಕಲಬರುಗಿಯಲ್ಲಿ ಒಟ್ಟು 1600 ಎಕರೆ ಜಮೀನನ್ನು (Land) ಕೈಗಾರಿಕಾ ಉದ್ದೇಶಗಳಿಗೆ ಗುರುತಿಸಲಾಗಿದೆ. ಶೀಘ್ರದಲ್ಲೇ ಇದರ ಭೂ ಸ್ವಾಧೀನ ಪ್ರಕ್ರಿಯೆಯು ಆರಂಭವಾಗಲಿದೆ.  ಇದರಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೂಡಲು ಮುಂದೆ ಬರುವವರ ಸಂಖ್ಯೆ ಅಧಿಕವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 

ಕರ್ನಾಟಕದಲ್ಲಿ (Karnataka)  ಬಂಡವಾಳ ಹೂಡಲು ದೇಶ-ವಿದೇಶಗಳಿಂದ ದೊಡ್ಡ ಮಟ್ಟದಲ್ಲಿ ಉದ್ಯಮಿಗಳು ಆಗಮಿಸುತ್ತಾರೆ. ಆದರೆ ನಮ್ಮವರೇ ಬಂಡವಾಳ ಹೂಡಲು ಮುಂದೆ ಬರುವುದಿಲ್ಲ ಎಂದರೆ ತುಂಬ ಬೇಸರವಾಗುತ್ತದೆ. ಈ ಭಾಗದಲ್ಲಿ  ಅನೇಕರು ಆರ್ಥಿಕವಾಗಿ ಸಾಕಷ್ಟು ಪ್ರಬಲರಾಗಿದ್ದಾರೆ. ನೀವು ಉದ್ಯಮ ಆರಂಭಿಸಲು ಮುಂದೆ ಬಂದರೆ ಸರ್ಕಾರ ನಿಮಗೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಅಭಯ ನೀಡಿದರು. 

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೈಗಾರಿಕಾ ನೀತಿಯು ಇಡೀ ದೇಶಕ್ಕೆ ಮಾದರಿಯಾಗಿದೆ. ಇದು ಉದ್ಯಮಿಗಳಿಗೆ ಮತ್ತು ಹೊಸದಾಗಿ ಆರಂಭಿಸುವವರಿಗೆ ಎಲ್ಲ ರೀತಿಯ ಸಹಾಯ ಒದಗಿಸಲಿದೆ.  ಇದಕ್ಕೂ ಮುನ್ನ ಕೆಲವು ಯಶಸ್ವಿ ಉದ್ಯಮಿಗಳು, ಪರಿಣತರು, ಸೇರಿದಂತೆ ಮತ್ತಿತರರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ಯುವ ಸಮೂಹವನ್ನು ಉದ್ಯಮದತ್ತ (Business) ಆಕರ್ಷಿಸುವುದು, ಉದ್ಯಮ ಆರಂಭಿಸುವವರಿಗೆ ಇರುವ ವಲಯಗಳು,  ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು,  ಬಂಡವಾಳ ಹೂಡಿಕೆ , ಬ್ಯಾಂಕ್ ನಿಂದ ಸಾಲ ಸೌಲಭ್ಯ ಯಶಸ್ವಿ ಉದ್ಯಮಿಗಳ ಯಶೋಗಾಥೆ, ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಉದ್ಯಮಿದಾರರು ಪರಸ್ಪರ ವಿನಿಮಯ ಮಾಡಿಕೊಂಡರು.

ಇನ್ಫೋಸಿಸ್  ನ ಸುಧಾನಾರಾಯಣ ಮೂರ್ತಿ, ವಿಅರ್ ಎಲ್ ಸಮೂಹ ಸಂಸ್ಥೆಯ ವಿಜಯ ಸಂಕೇಶ್ವರ ಹಾಗೂ ಹಲವಾರು  ಯುವ ಉದ್ಯಮಿಗಳು ಯಶಸ್ವಿಯಾಗಿರುವುದನ್ನು ವಿವರಿಸಿದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ವೇದಿಕೆಯು ಹಲವಾರು ಯುವ ಉದ್ಯಮಿಗಳಿಗೆ ಒಂದು ಉಪಯುಕ್ತ ವೇದಿಕೆಯಾಗಿ ಪರಿಣಮಿಸಿದ್ದು ಸುಳ್ಳಲ್ಲ ಎಂದರು .

ಕಾರ್ಯಕ್ರಮದಲ್ಲಿ  ಕಲಬುರಗಿ ಲೋಕಸಭಾ ಸಂಸದ ಡಾ.ಉಮೇಶ್ ಜಾಧವ್, ಶಾಸಕರಾದ ಬಸವರಾಜ್ ಮತ್ತಿಮೊಡ,  ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್, ಅಪ್ಪುಗೌಡ ಪಾಟೀಲ್ ರೇವೂರ, ವಿಧಾನಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಜಿ.ಟಿ.ಪಾಟೀಲ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಆಯುಕ್ತೆ, ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಶಿವಶಂಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ