
ವಿಧಾನಸಭೆ(ಡಿ.27): ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪದ ಬಗ್ಗೆ ಸದನದಲ್ಲಿ 69ನೆಯ ನಿಯಮದಡಿ ಚರ್ಚೆ ನಡೆಸಲು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ಕಲ್ಪಿಸಿದ್ದಾರೆ. ಇದರಿಂದಾಗಿ ಇನ್ನೆರಡು ದಿನಗಳಲ್ಲಿ ಶೇ.40ರಷ್ಟು ಕಮಿಷನ್ ಆರೋಪದ ಕುರಿತು ಸದನದಲ್ಲಿ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನಿಯಮ 60ರಡಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರದ ಕುರಿತು ಚರ್ಚೆಗೆ ಅವಕಾಶ ನೀಡಬೇಕು’ ಎಂದು ನಿಲುವಳಿ ಸೂಚಿಸಲು ಮುಂದಾದರು.
ಆದರೆ ಸಭಾಧ್ಯಕ್ಷ ಕಾಗೇರಿ ಅವರು, ‘ವಿವಿಧ ಇಲಾಖೆಯೆಂದು ಹೇಳಿದ್ದೀರಿ. ನಿಖರವಾದ ವಿಷಯದ ಬಗ್ಗೆಯಾದರೆ ನಿಲುವಳಿ ಸೂಚಿಸಲು ಅನುಮತಿ ನೀಡಬಹುದು. ಇಲ್ಲದಿದ್ದಲ್ಲಿ ಈ ನಿಯಮದಡಿ ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮ: ಮಧ್ಯವಾರ್ಷಿಕ ವರದಿ
ಈ ವೇಳೆ ಸಚಿವ ಮಾಧುಸ್ವಾಮಿ ಮಾತನಾಡಿ, ‘ನಿಯಮದ ಪ್ರಕಾರ ನೋಟಿಸ್ ನೀಡಿ. ನಾವು ಚರ್ಚೆಗೆ ಸಿದ್ಧವಿದ್ದೇವೆ. ಯಾರಾರಯರ ಕಾಲದಲ್ಲಿ ಎಷ್ಟೆಷ್ಟುಭ್ರಷ್ಟಾಚಾರವಿತ್ತು. ಎಷ್ಟೆಷ್ಟುಕಮಿಷನ್ ಇತ್ತು ಎಂಬ ಬಗ್ಗೆ ಚರ್ಚೆ ನಡೆಸಬಹುದು’ ಎಂದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಹಿಂದಿನ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಆಗ ಏಕೆ ಸುಮ್ಮನಿದ್ದೀರಿ?’ ಎಂದು ಮರುಪ್ರಶ್ನೆ ಮಾಡಿದರು. ಕೊನೆಗೆ ಸಭಾಧ್ಯಕ್ಷ ಕಾಗೇರಿ ಮಾತನಾಡಿ, ಈ ನೋಟಿಸ್ನ್ನು ನಿಯಮ 69ರಡಿ ಪರಿವರ್ತಿಸಿ ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ತಿಳಿಸುವ ಮೂಲಕ ಚರ್ಚೆಗೆ ತೆರೆ ಎಳೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ