ಮುಡಾ ಹಗರಣದಲ್ಲಿ ಸಿಎಂಗೆ ಮತ್ತೆ ಶಾಕ್‌, ಲೋಕಾಯುಕ್ತ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ಕೋರ್ಟ್!

Published : Sep 25, 2024, 01:51 PM ISTUpdated : Sep 25, 2024, 02:16 PM IST
ಮುಡಾ ಹಗರಣದಲ್ಲಿ ಸಿಎಂಗೆ ಮತ್ತೆ ಶಾಕ್‌, ಲೋಕಾಯುಕ್ತ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ಕೋರ್ಟ್!

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಪಾತ್ರವೇನೆಂದು ಪರಿಶೀಲಿಸಿ, ಪಿಸಿ ಆಕ್ಟ್ 7ಸಿ ಅಡಿ ತನಿಖೆ ಅಗತ್ಯವಿದೆ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ.

ಬೆಂಗಳೂರು (ಸೆ.25): ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋಟಿ ರು. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈ ಕೋರ್ಟ್  ಎತ್ತಿಹಿಡಿಯಿತು. ಹೀಗಾಗಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಇದ್ದ ತಡೆ ವಜಾಗೊಂಡಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿ, ಮುಂದಿನ ತನಿಖೆಯನ್ನು ಡಿಸೆಂಬರ್ 24ಕ್ಕೆ ಮುಂದೂಡಿದೆ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ನಾಳೆ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.

ಕೇಸ್‌ ಗೆ ಸಂಬಂಧಿಸಿದಂತೆ  ಆರ್.ಟಿ.ಐ ಕಾರ್ಯಕರ್ತ  ಸ್ನೇಹಮಯಿ ಕೃಷ್ಣ ಅವರು ನೀಡಿರುವ ಖಾಸಗಿ ದೂರು ವಿಚಾರಣೆ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆಯಿತು. ಈ ಇಡೀ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನು? ಹೀಗಾಗಿ ಈ ಕೇಸ್‌ ವಿರುದ್ಧ  ಸಂಪೂರ್ಣ ತನಿಖೆ ಅಗತ್ಯವಿದೆ ಎಂದು ನ್ಯಾಯಾಲಯ ಆದೇಶಿಸಿದೆ. ಪಿಸಿ ಆಕ್ಟ್ 7ಸಿ ಅಡಿ ತನಿಖೆ ಅಗತ್ಯತೆ ಪ್ರಸ್ತುತ ಪ್ರಕರಣದಲ್ಲಿ ಕಾಣುತ್ತಿದೆ. ತನಿಖೆಗೆ ಮುಖ್ಯ ಮಂತ್ರಿಗಳು ಹಿಂಜರಿಯಬಾರದು ಎಂದು ವಿಸ್ತ್ರತವಾದ ಆದೇಶದಲ್ಲಿ ಉಲ್ಲೇಖಿಸಿದೆ.

2 ಸೈಟ್‌ ಬದಲು ಸಿಎಂ ಪತ್ನಿಗೆ 14 ಸೈಟ್‌, ಇಂಥಾ ಕೇಸ್‌ ಬಿಟ್ಟು ಇನ್ನಾವ ಕೇಸ್‌ ತನಿಖೆ ಸಾಧ್ಯ: ಜಡ್ಜ್‌

ಬಿಎನ್ಎಸ್ ಎಸ್ ಅಡಿ ಪ್ರಕರಣ ದಾಖಲು ಮಾಡಬಹುದು ಎಂಬ ಬಗ್ಗೆ ಕೆಲ ಹೈಕೋರ್ಟ್ ಗಳ ಆದೇಶಗಳನ್ನ ಸ್ನೇಹಮಯಿ ಕೃಷ್ಣ ಅವರ ಪರ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಜನಪ್ರತಿನಿಧಿಗಳ ಕೋರ್ಟ್ ಗೆ ಸಲ್ಲಿಸಿದರು. ಬಿಎನ್ಎಸ್ಎಸ್ 175(3) ಆದೇಶ ಮಾಡುವಂತೆ ವಕೀಲರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆದೇಶ ಮಾಡುವುದಾಗಿ ತಿಳಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಸೆ.24ರಂದು ಹೈಕೋರ್ಟ್ ನೀಡಿದ್ದ ಆದೇಶ ಪರಿಗಣಿಸಿ ಖಾಸಗಿ ದೂರಿನ ಹಿನ್ನೆಲೆ ಆದೇಶ ಈ ನೀಡಿದ್ದಾರೆ.

ಯಾವ ಯಾವ ಅಂಶಗಳ ಬಗ್ಗೆ ತನಿಖೆ ಅಗತ್ಯವಿದೆ. ಬಿಎನ್ಎಸ್ ಕಾಯ್ದೆ ಜಾರಿಗೂ ಮುನ್ನ ಅರೋಪಿತ ಕೃತ್ಯಗಳು ನಡೆದಿವೆ ಎಂದು ಉಲ್ಲೇಖಿಸಿ ಬಿಎನ್ಎಸ್ ಹಾಗೂ ಸಿಆರ್ಪಿಸಿ ಬಗ್ಗೆ ತಿಳಿಸಿ, ಯಾವ ಕಾನೂನಿನ ಪ್ರಕ್ರಿಯೆ ಪಾಲಿಸಬೇಕು ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಿಸ್ತೃತವಾದ ಆದೇಶ ಬರೆಸಿದ್ದಾರೆ.

ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ಉಲ್ಲೇಖಿಸಿರುವ ನ್ಯಾಯಮುರ್ತಿಗಳು ಮುಡಾ ನಿವೇಶನ ಹಂಚಿಕೆಯಾದ ಬಳಿಕವೂ ಖರೀದಿ ಮಾಡಲಾಗಿದೆ. ಸಿಎಂ ಭಾಮೈದ ಜಮೀನು ಖರೀದಿ ಬಗ್ಗೆ ಉಲ್ಲೇಖವಿದೆ. ಜಮೀನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲಾಗಿತ್ತು. ಪರಿಹಾರ ನಿಗದಿಯಾದ ಬಳಿಕವೂ ಡಿನೋಟಿಫಿಕೇಷನ್ ಆಗಿದೆ. ದೇವರಾಜು ಹೆಸರಿಗೆ ಜಮೀನಿನ ನಕಲಿ ಡಿನೋಟಿಫೀಕೇಷನ್ ಆಗಿದೆ. ಹೀಗಾಗಿ ತನಿಖೆಯ ಅಗತ್ಯ ಕಾಣುತ್ತಿದೆ. ಪಿಸಿ ಆಕ್ಟ್ 7ಸಿ ಅಡಿ ತನಿಖೆ ಅಗತ್ಯತೆ ಇದೆ. ದೇವರಾಜು ಮಾಲೀಕನಲ್ಲದಿದ್ದರೂ ಆತನಿಂದ ಜಮೀನು ಖರೀದಿ ಮಾಡಲಾಗಿದೆ. ರಾಜ್ಯಪಾಲರ ಅನುಮತಿ ಬಳಿಕವೂ ಅದನ್ನ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿತ್ತು. ಹೈಕೋರ್ಟ್ ಸಿಎಂ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದೆ ಈ ಎಲ್ಲಾ ಪ್ರತಿಯನ್ನು ಕೋರ್ಟ್ ಗೆ ದೂರುದಾರರು ಸಲ್ಲಿಸಿದ್ದಾರೆ  ಎಂದು ನ್ಯಾಯಮೂರ್ತಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪಿತೃಪಕ್ಷದಲ್ಲಿ ಮಾಡಿದ ಎಡವಟ್ಟಿನಿಂದ ಸಿಎಂಗೆ ಕಂಟಕ ಎದುರಾಯ್ತೇ?

ಯಾವ ಯಾವ ಅಂಶಗಳ ಬಗ್ಗೆ ತನಿಖೆ ಅಗತ್ಯವಿದೆ. ಬಿಎನ್ಎಸ್ ಕಾಯ್ದೆ ಜಾರಿಗೂ ಮುನ್ನ ಅರೋಪಿತ ಕೃತ್ಯಗಳು ನಡೆದಿವೆ ಎಂದು ಉಲ್ಲೇಖಿಸಿ ಬಿಎನ್ಎಸ್ ಹಾಗೂ ಸಿಆರ್ಪಿಸಿ ಬಗ್ಗೆ ತಿಳಿಸಿ, ಯಾವ ಕಾನೂನಿನ ಪ್ರಕ್ರಿಯೆ ಪಾಲಿಸಬೇಕು ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿದ್ದು, ಗೋವಾ, ಡಿಯು ಡಮಾ ಭಾರತಕ್ಕೆ ಸೇರಿದಾಗ ಅನುಸರಿಸಿದ ಪ್ರಕ್ರಿಯೆ, ಪೋರ್ಚುಗೀಸ್ ಪ್ರೊಸಿಜರ್ ಕೋಡ್ ಅನ್ನು ಆಗ ಅನ್ವಯಿಸಲಾಗಿತ್ತು. ಗೋವಾ, ಡಿಯು ಡಮನ್ ಭಾರತಕ್ಕೆ ಸೇರುವ ಮುಂಚಿನ ಕಾನೂನು. ಅಲ್ಲಿ‌ ನಡೆದ ಹಳೆ ಅಪರಾಧಗಳಿಗೆ ಅನ್ವಯಿಸಲಾಗಿತ್ತು. ಅದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು ಎಂಬ ಎಲ್ಲಾ ಅಂಶಗಳನ್ನು ಉಲ್ಲೇಖ ಮಾಡಿ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮೈಸೂರು ಲೋಕಾಯುಕ್ತ ಪೋಲೀಸರಿಗೆ ತನಿಖೆ ಮೂರು ತಿಂಗಳಲ್ಲಿ ನಡೆಸುವಂತೆ ಕೋರ್ಟ್ ಆದೇಶ ನೀಡಿದ್ದು, ಮುಂದಿನ ತನಿಖೆಯನ್ನು ಡಿಸೆಂಬರ್ 24ಕ್ಕೆ ಮುಂದೂಡಿ ನ್ಯಾಯಾಧೀಶ ಸಂತೋಷ್ ಗಜಾನನ ಭಟ್  ಆದೇಶ  ಹೊರಡಿಸಿದ್ದಾರೆ,

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ