ಪ್ರಯಾಣಿಕರೇ ಗಮನಿಸಿ: ಜುಲೈ 26ರಿಂದ ಬೆಂಗಳೂರು - ಮಂಗಳೂರು ನಡುವೆ ವಿಶೇಷ ರೈಲು ಸೇವೆ ಆರಂಭ

Published : Jul 24, 2022, 11:47 AM ISTUpdated : Jul 24, 2022, 12:12 PM IST
ಪ್ರಯಾಣಿಕರೇ ಗಮನಿಸಿ: ಜುಲೈ 26ರಿಂದ ಬೆಂಗಳೂರು - ಮಂಗಳೂರು ನಡುವೆ ವಿಶೇಷ ರೈಲು ಸೇವೆ ಆರಂಭ

ಸಾರಾಂಶ

ಬೆಂಗಳೂರು - ಮಂಗಳೂರು ನಡುವೆ ಜುಲೈ 26 ರಿಂದ ಅಂದರೆ ಮಂಗಳವಾರದಿಂದ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಲಿದೆ. ಘಾಟ್‌ ಪ್ರದೇಶಗಳಲ್ಲಿ ಭೂ ಕುಸಿತದಿಂದ ಬೆಂಗಳೂರು - ಮಂಗಳೂರು ನಡುವಿನ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಈ ಹಿನ್ನೆಲೆ ಮೈಸೂರು ಮಾರ್ಗದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು  - ಮಂಗಳೂರು ನಡುವೆ ವಿಶೇಷ ರೈಲು ಸೇವೆ ಆರಂಭವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ತೀವ್ರ ಮಳೆ ಸುರಿಯುತ್ತಿತ್ತು. ಈ ಹಿನ್ನೆಲೆ ಶಿರಾಡಿ ಘಾಟ್‌ ಸೇರಿ ಹಲವು ಘಾಟ್‌ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಬಸ್‌ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಮಂಗಳೂರು, ಉಡುಪಿ ಭಾಗದವರಿಗೆ ತಮ್ಮ ಊರುಗಳಿಗೆ ಹೋಗಲು ಪರದಾಡುತ್ತಿದ್ದರು. ಇನ್ಮುಂದೆ ಈ ಪರದಾಟ ಕಡಿಮೆಯಾಗಬಹುದು. 

ಹೌದು, ಬೆಂಗಳೂರು - ಮಂಗಳೂರು ನಡುವೆ ಜುಲೈ 26 ರಿಂದ ಅಂದರೆ ಮಂಗಳವಾರದಿಂದ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಲಿದೆ. ಘಾಟ್‌ ಪ್ರದೇಶಗಳಲ್ಲಿ ಭೂ ಕುಸಿತದಿಂದ ಬೆಂಗಳೂರು - ಮಂಗಳೂರು ನಡುವಿನ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಈ ಹಿನ್ನೆಲೆ ಮೈಸೂರು ಮಾರ್ಗದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು  - ಮಂಗಳೂರು ನಡುವೆ ವಿಶೇಷ ರೈಲು ಸೇವೆ ಆರಂಭವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ 26 ರಿಂದ ಆಗಸ್ಟ್‌ 31 ರವರೆಗೆ ವಾರದಲ್ಲಿ 3 ದಿನಗಳ ಕಾಲ ಬೆಂಗಳೂರು - ಮಂಗಳೂರು ನಡುವೆ ಈ ರೈಲು ಸಂಚರಿಸಲಿದೆ ಎಂದೂ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ‘ವಿಸ್ಟಾಡೋಮ್‌’ ಸಂಚಾರ ಶುರು: ಬೆಂಗ್ಳೂರು-ಮಂಗ್ಳೂರು ಮಧ್ಯೆ ಸಂಚಾರ

ಬೆಂಗಳೂರಿನಿಂದ ರಾತ್ರಿ 8.30 ಕ್ಕೆ ಹೊರಡಲಿರುವ ವಿಶೇಷ ರೈಲು ಸಂಖ್ಯೆ 06547 ಮಂಗಳೂರು ಸೆಂಟ್ರಲ್‌ ನಿಲ್ದಾಣವನ್ನು ಮರುದಿನ ಬೆಳಗ್ಗೆ 9.05 ಕ್ಕೆ ತಲುಪಲಿದೆ. ಈ ರೈಲು ಮಂಗಳವಾರ, ಗುರುವಾರ ಹಾಗೂ ಭಾನುವಾರ ಬೆಂಗಳೂರಿನಿಂದ ಹೊರಡಲಿದೆ ಎಂದು ತಿಳಿದುಬಂದಿದೆ.

ಇನ್ನು, ರೈಲು ಸಂಖ್ಯೆ 06548 ಮಂಗಳೂರಿನಿಂದ - ಬೆಂಗಳೂರು ನಡುವೆ ಸೋಮವಾರ - ಬುಧವಾರ ಹಾಗೂ ಶುಕ್ರವಾರ ಸಂಚರಿಸಲಿದೆ. ಮಂಗಳೂರು ಸೆಂಟ್ರಲ್‌ ನಿಲ್ದಾಣವನ್ನು ಸಂಜೆ 6.35ರಿಂದ ಹೊರಡಲಿರುವ ರೈಲು ಕೆಎಸ್‌ಆರ್‌ ಬೆಂಗಳೂರು ರೈಲು ನಿಲ್ದಾಣವನ್ನು ಮರುದಿನ ಬೆಳಗ್ಗೆ 6.15 ಕ್ಕೆ ತಲುಪಲಿದೆ ಎಂದೂ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. 

ಈ ರೈಲಿನಲ್ಲಿ 2 ಜನರಲ್‌ ಕ್ಲಾಸ್‌ ಬೋಗಿಗಳಿರಲಿದ್ದು, 9 ಸೆಕೆಂಡ್‌ ಕ್ಲಾಸ್‌ ಸ್ಲೀಪರ್‌, ಎರಡು 2 ಟಯರ್‌ ಎಸಿ ಹಾಗೂ ಎರಡು 3 ಟಯರ್‌ ಎಸಿ ಬೋಗಿಗಳನ್ನು ಹೊಂದಿರಲಿದೆ ಎಂದೂ ತಿಳಿದುಬಂದಿದೆ.

ರೈಲ್ವೆ ಸಚಿವರಿಗೆ ಮನವಿ ಮಾಡಿದ್ದ ನಳಿನ್‌ ಕುಮಾರ್‌ ಕಟೀಲ್‌
ಬೆಂಗಳೂರು - ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಒದಗಿಸುವಂತೆ  ರೈಲ್ವೆ ಸಚಿವ ಅಶ್ಚಿನಿ ವೈಷ್ಣವ್‌ ಅವರಿಗೆ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಜುಲೈ 18 ರಂದು ಕಟೀಲ್‌ ರೈಲ್ವೆ ಸಚಿವರನ್ನು ಭೇಟಿ ಮಾಡಿದ್ದರು. ಹಾಗೂ, ರೈಲ್ವೆ ಸಚಿವರು ಇದಕ್ಕೆ ಶೀಘ್ರದಲ್ಲೇ ಒಪ್ಪಿಗೆ ನೀಡಿದ್ದರು ಎಂದೂ ತಿಳಿದುಬಂದಿದೆ. 

ಬೆಂಗಳೂರು-ಮಂಗಳೂರು ಮಧ್ಯೆ ನೂತನ ವಿಸ್ಟಾಡೋಮ್‌ ರೈಲು

ಮುಂಬೈ - ಮಂಗಳೂರು ನಡುವೆಯೂ ವಿಶೇಷ ರೈಲು ಸೇವೆ
ಗಣಪತಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನೂಕುನುಗ್ಗಲು ನಿವಾರಿಸಲು ಮಂಗಳೂರಿನ  ಲೋಕಮಾನ್ಯ ತಿಲಕ್ ಮತ್ತು ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ಸೇವೆಯನ್ನು ರೈಲ್ವೆ ಇಲಾಖೆ ಆರಂಭಿಸಿದೆ. ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಈ ರೈಲು ವಾರಕ್ಕೊಮ್ಮೆ ಸಂಚಾರವಾಗಲಿದೆ ಎಂದು ತಿಳಿದುಬಂದಿದೆ.
         
 ಗಣಪತಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನೂಕುನುಗ್ಗಲು ನಿವಾರಿಸಲು, ಲೋಕಮಾನ್ಯ ತಿಲಕ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಈ ಕೆಳಗಿನ ಸಾಪ್ತಾಹಿಕ ವಿಶೇಷ ರೈಲುಗಳನ್ನು ನಿರ್ವಹಿಸಲಾಗುತ್ತದೆ:

1. ರೈಲು ಸಂಖ್ಯೆ.01165 ಲೋಕಮಾನ್ಯ ತಿಲಕ್ ಮತ್ತು ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ಸೇವೆಯು ಲೋಕಮಾನ್ಯ ತಿಲಕ ರೈಲು ನಿಲ್ದಾಣದಿಂದ 00.45 ಗಂಟೆಗೆ ಹೊರಡಲಿದೆ. 16, 23, 30 ಆಗಸ್ಟ್ 2022, ಮತ್ತು 06 ಸೆಪ್ಟೆಂಬರ್ 2022 (ಮಂಗಳವಾರ) ಮತ್ತು ಅದೇ ದಿನ 19.30 ಗಂಟೆಗೆ ಮಂಗಳೂರು ಜಂಕ್ಷನ್ ತಲುಪುತ್ತದೆ. (4 ಸೇವೆಗಳು)

2. ರೈಲು ಸಂಖ್ಯೆ.01166 ಮಂಗಳೂರು ಜಂಕ್ಷನ್-ಲೋಕಮಾನ್ಯ ತಿಲಕ್ ಸಾಪ್ತಾಹಿಕ ವಿಶೇಷ ಸೇವೆಯು ಮಂಗಳೂರು ಜಂಕ್ಷನ್‌ನಿಂದ 22.20 ಗಂಟೆಗೆ ಹೊರಡಲಿದೆ. 16, 23, 30ನೇ ಆಗಸ್ಟ್ 2022, ಮತ್ತು 06ನೇ ಸೆಪ್ಟೆಂಬರ್ 2022 (ಮಂಗಳವಾರ) ಮತ್ತು 18.30 ಗಂಟೆಗೆ ಲೋಕಮಾನ್ಯ ತಿಲಕ ರೈಲು ನಿಲ್ದಾಣವನ್ನು ಮರುದಿನ ತಲುಪುತ್ತದೆ (4 ಸೇವೆಗಳು)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ