ಶಬರಿಮಲೆಗೆ ಕರ್ನಾಟಕದಿಂದ ವಿಶೇಷ ರೈಲು..!

Published : Nov 16, 2022, 12:00 AM IST
ಶಬರಿಮಲೆಗೆ ಕರ್ನಾಟಕದಿಂದ ವಿಶೇಷ ರೈಲು..!

ಸಾರಾಂಶ

ಬೆಳಗಾವಿ, ಹುಬ್ಬಳ್ಳಿಯಿಂದ 2 ರೈಲುಗಳು, ಬೆಂಗಳೂರು ಮೂಲಕ ಸಂಚಾರ, ರಾಜ್ಯದ ಅನೇಕ ನಿಲ್ದಾಣಗಳಲ್ಲಿ ನಿಲುಗಡೆ

ಬೆಂಗಳೂರು(ನ.16):  ಶಬರಿಮಲೆ ಅಯ್ಯಪ್ಪ ಕ್ಷೇತ್ರಕ್ಕೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ರಾಜ್ಯದಿಂದ ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ಸೇವೆಯನ್ನು ನೈಋುತ್ಯ ರೈಲ್ವೆ ಆರಂಭಿಸಿದೆ. ಬೆಳಗಾವಿ-ಕೊಲ್ಲಂ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 07357/07358) ನ.20 ರಂದು ಬೆಳಿಗ್ಗೆ 11.30 ಗಂಟೆಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ಮಾರ್ಗವಾಗಿ ಮರುದಿನ ಮಧ್ಯಾಹ್ನ 03.15 ಕ್ಕೆ ಕೊಲ್ಲಂ ತಲುಪಲಿದೆ. ನ.21 ರಂದು ಕೊಲ್ಲಂನಿಂದ ಸಂಜೆ 5.10 ಕ್ಕೆ ಹೊರಟು ಮರುದಿನ ರಾತ್ರಿ 11 ಗಂಟೆಗೆ ಬೆಳಗಾವಿ ತಲುಪಲಿದೆ. ನಂತರ ಡಿಸೆಂಬರ್‌ 4 ರಿಂದ ಜನವರಿ 15 ರವರೆಗೆ ಮೇಲ್ಕಂಡ ಸಮಯದಂತೆಯೇ ಪ್ರತಿ ಭಾನುವಾರ ಬೆಳಗಾವಿಯಿಂದ ಕೊಲ್ಲಂಗೆ, ಹಾಗೂ ಪ್ರತಿ ಸೋಮವಾರ ಕೊಲ್ಲಂನಿಂದ ಬೆಳಗಾವಿಗೆ ರೈಲು ಸಂಚರಿಸಲಿದೆ.

ಹುಬ್ಬಳ್ಳಿ-ಕೊಲ್ಲಂ-ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 07359/07360) ನ.27 ರಂದು ಮಧ್ಯಾಹ್ನ 2.40ಕ್ಕೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಮಧ್ಯಾಹ್ನ 3.15 ಕ್ಕೆ ಕೊಲ್ಲಂ ತಲುಪಲಿದೆ. ನ.28 ರಂದು ಕೊಲ್ಲಂನಿಂದ ಸಾಯಂಕಾಲ 5.10 ಕ್ಕೆ ಹೊರಟು ಮರುದಿನ ರಾತ್ರಿ 8 ಗಂಟೆಗೆ ಎಸ್‌.ಎಸ್‌.ಎಸ್‌ ಹುಬ್ಬಳ್ಳಿ ತಲುಪಲಿದೆ. ಈ ರೈಲು ಒಂದು ಟ್ರಿಪ್‌ ಮಾತ್ರ ಸಂಚಾರ ನಡೆಸಲಿದೆ.

ಮೊಟ್ಟೆ, ಮಾಂಸವಿಲ್ಲದ ಆಹಾರ, ಇದು ದೇಶದ ಮೊದಲ ಸಸ್ಯಾಹಾರಿ ರೈಲು!

ಈ ವಿಶೇಷ ರೈಲುಗಳು ಎರಡೂ ಮಾರ್ಗದಲ್ಲಿ ಖಾನಾಪುರ, ಲೋಂಡಾ, ಧಾರವಾಡ, ಎಸ್‌.ಎಸ್‌.ಎಸ್‌ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್‌, ತಿರುಪ್ಪೂರು, ಪೊದನೂರು, ಪಾಲಕ್ಕಾಡ್‌, ತ್ರಿಶೂರ್‌, ಆಲುವಾ, ಎರ್ನಾಕುಲಂ ಟೌನ್‌, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ್‌, ಮಾವೇಲಿಕರ, ಕಾಯಂಕುಲಂ, ಸಸ್ತಾನ್‌ಕೊಟ್ಟ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಐಆರ್‌ಸಿಟಿಸಿಯಲ್ಲಿ ಬುಕ್ಕಿಂಗ್‌ ಲಭ್ಯವಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್