ಸಿದ್ಧಗಂಗಾ ಮಠಕ್ಕೆ ವಿಶೇಷ ರೈಲು ವ್ಯವಸ್ಥೆ

Published : Jan 22, 2019, 07:10 AM IST
ಸಿದ್ಧಗಂಗಾ ಮಠಕ್ಕೆ ವಿಶೇಷ ರೈಲು ವ್ಯವಸ್ಥೆ

ಸಾರಾಂಶ

ತುಮಕೂರಿನ ಸಿದ್ಧಗಂಗಾ ಮಠಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಮಂಗಳವಾರ ಯಶವಂತಪುರ- ತುಮಕೂರು ನಡುವೆ 4 ವಿಶೇಷ ರೈಲು ಸೇವೆ ಕಲ್ಪಿಸಿದೆ. 

ತುಮಕೂರು :  ಲಕ್ಷಾಂತರ ಭಕ್ತರ, ಶಿವಶರಣರ ಕಣ್ಣೀರ ಪ್ರಾರ್ಥನೆ ಕೊನೆಗೂ ಫಲಿಸಲೇ ಇಲ್ಲ. ವಯೋಸಹಜ ಅನಾರೋಗ್ಯ ದಿಂದ ಬಳಲುತ್ತಿದ್ದ ತ್ರಿವಿಧ ದಾಸೋಹಿ, ಶತಮಾನದ ಸಂತ, ದೇಶದ ಅತ್ಯಂತ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿ(111) ಭವದ ಬದುಕಿಗೆ ವಿದಾಯ ಹೇಳಿ ಶಿವನೆಡೆಗೆ ನಡೆದೇ ಬಿಟ್ಟರು. 

ಎಣ್ಣೆಬತ್ತಿಗೂ ಕಾಸಿಲ್ಲದ ಹೊತ್ತಲ್ಲಿ ಸಿದ್ಧಗಂಗಾ ಮಠದ ಪೀಠಾರೋಹಣ ಮಾಡಿ ಇಡೀ ದೇಶವೇ ತುಮಕೂರಿನತ್ತ ತಿರುಗುವಂತೆ ಮಾಡಿದ್ದ ‘ನಡೆದಾಡುವ ದೇವರು’ ಉತ್ತರಾಯಣ ಪುಣ್ಯ ಕಾಲ ವಾದ ಸೋಮವಾರ ಬೆಳಗ್ಗೆ 11.44ಕ್ಕೆ ಶಿವೈಕ್ಯರಾದರು. 

ರೈಲು: ತುಮಕೂರಿನ ಸಿದ್ಧಗಂಗಾ ಮಠಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಮಂಗಳವಾರ ಯಶವಂತಪುರ- ತುಮಕೂರು ನಡುವೆ 4 ವಿಶೇಷ ರೈಲು ಸೇವೆ ಕಲ್ಪಿಸಿದೆ. ವಿಶೇಷ ರೈಲುಗಳ ಪೈಕಿ ಮೊದಲ ರೈಲು ಯಶವಂತ ಪುರದಿಂದ ಬೆಳಗ್ಗೆ 7.30 ಮತ್ತು ಎರಡನೇ ರೈಲು ಮಧ್ಯಾಹ್ನ 12ಕ್ಕೆ ಹೊರಡಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಆಗಮನ, ರಾಜ್ಯದ 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್!
ಹೆದ್ದಾರಿ ಸುರಕ್ಷತೆಗೆ ಭಾರೀ ಕ್ರಮ: 100 ವಾಹನಗಳಲ್ಲಿ ಪೊಲೀಸ್ ಗಸ್ತು, ಏನಿದು ಹೊಸ ಯೋಜನೆ!