ವರ್ಷಾಂತ್ಯಕ್ಕೆ ಕೇರಳಕ್ಕೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರ

Published : Dec 25, 2019, 09:23 AM IST
ವರ್ಷಾಂತ್ಯಕ್ಕೆ ಕೇರಳಕ್ಕೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರ

ಸಾರಾಂಶ

ಕ್ರಿಸ್‌ಮಸ್‌ ಹಾಗೂ ಶಬರಿಮಲೆ ಪೂಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.28ರಂದು ನಗರದ ಮೆಜೆಸ್ಟಿಕ್‌ (ಕೆಎಸ್‌ಆರ್‌) ರೈಲು ನಿಲ್ದಾಣದಿಂದ ಕೇರಳದ ಎರ್ನಾಕುಲಂಗೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರ ಮಾಡಲಿದೆ.

ಬೆಂಗಳೂರು [ಡಿ.25]: ನೈಋುತ್ಯ ರೈಲ್ವೆಯು ಕ್ರಿಸ್‌ಮಸ್‌ ಹಾಗೂ ಶಬರಿಮಲೆ ಪೂಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.28ರಂದು ನಗರದ ಮೆಜೆಸ್ಟಿಕ್‌ (ಕೆಎಸ್‌ಆರ್‌) ರೈಲು ನಿಲ್ದಾಣದಿಂದ ಕೇರಳದ ಎರ್ನಾಕುಲಂಗೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರದ ವ್ಯವಸ್ಥೆ ಮಾಡಿದೆ.

ಬೆಂಗಳೂರು ಕೆಎಸ್‌ಆರ್‌-ಎರ್ನಾಕುಲಂ ವಿಶೇಷ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 06547) ಡಿ.8ರಂದು ಸಂಜೆ 6.45ಕ್ಕೆ ಹೊರಟು ಮರುದಿನ ಬೆಳಗ್ಗೆ 6 ಗಂಟೆಗೆ ಎರ್ನಾಕುಲಂ ತಲುಪಲಿದೆ. 

ಇನ್ಮುಂದೆ ಹುಬ್ಬಳ್ಳಿ-ಬೆಂಗಳೂರು ರೈಲು ಪ್ರಯಾಣಕ್ಕೆ ಐದೇ ತಾಸು?...

ಎರ್ನಾಕುಲಂನಿಂದ ಡಿ.9ರಂದು ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 6.50ಕ್ಕೆ ಕೆ.ಆರ್‌.ಪುರಂ ತಲುಪಲಿದೆ. ಈ ವಿಶೇಷ ರೈಲು ಹೋಗುವ ಮತ್ತು ಬರುವ ಮಾರ್ಗದಲ್ಲಿ ವೈಟ್‌ಫೀಲ್ಡ್‌, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್‌, ತಿರುಪ್ಪೂರ್‌, ಕೊಯಂಬತ್ತೂರು, ಪಾಲಕ್ಕಾಡ್‌, ತ್ರಿಶೂರು ಮತ್ತು ಅಲುವಾದಲ್ಲಿ ನಿಲುಗಡೆ ನೀಡಲಿದೆ. ಈ ರೈಲು ಪ್ರಯಾಣಕ್ಕೆ ವಿಶೇಷ ದರ ನಿಗದಿಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

₹314 ಕೋಟಿ ಮೊತ್ತದ 18 ಹೊಸ ಹೋಟೆಲ್‌ಗಳ ಯೋಜನೆಗಳಿಗೆ 47.23 ಕೋಟಿ ಸಹಾಯಧನ ಅನುಮೋದನೆ
Karnataka News Live: Mysuru - 140 ವರ್ಷಗಳ ಇತಿಹಾಸವುಳ್ಳ ಮೈಸೂರು ಚಿಕ್ಕಗಡಿಯಾರ ನವೀಕರಣ ಮಾಡಲಿದೆ ಎಚ್‌ಎಂಟಿ