ವಿದೇಶಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್ ನೀಡಿದ ಡಿಸಿಎಂ ‌ಅಶ್ವತ್ಥನಾರಾಯಣ

Published : Jun 20, 2021, 04:49 PM IST
ವಿದೇಶಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್ ನೀಡಿದ ಡಿಸಿಎಂ ‌ಅಶ್ವತ್ಥನಾರಾಯಣ

ಸಾರಾಂಶ

*ವಿದೇಶಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್ ನೀಡಿದ ಡಿಸಿಎಂ ‌ಅಶ್ವತ್ಥನಾರಾಯಣ * ಒಲಿಂಪಿಕ್‌ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ಹೋಗುವವರೆಲ್ಲರಿಗೂ 22ರಿಂದ ಲಸಿಕೀಕರಣ: * 28 ದಿನದಲ್ಲೇ ಕೋವಿಶೀಲ್ಡ್  2ನೇ‌ ಡೋಸ್ 

ಬೆಂಗಳೂರು, (ಜೂನ್.20): ವ್ಯಾಸಂಗ ಅಥವಾ ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ಇದೇ 22ರಿಂದ ಕೋವಿಡ್ ಲಸಿಕೆ  ಹಾಕಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 

ಈ ಮೊದಲೇ ಸೆಂಟ್ರಲ್‌ ಕಾಲೇಜ್‌ನಲ್ಲಿ ವಿದೇಶಕ್ಕೆ ತೆರಳುವ 1,500ಕ್ಕೂ ಹೆಚ್ಚು ವಿದ್ಯಾರ್ಥಿ/ ಉದ್ಯೋಗಿಗಳಿಗೆ ಮೊದಲ ಡೋಸ್‌ ಕೊಡಲಾಗಿದೆ . ಟೊಕಿಯೋದಲ್ಲಿ ನಡೆಯುವ ಒಲಿಂಪಿಕ್‌ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ವ್ಯಾಸಂಗ- ಉದ್ಯೋಗಕ್ಕೆ ತೆರಳುವ ಎಲ್ಲರೂ ಇಲ್ಲಿ ಬಂದು ಲಸಿಕೆ ಪಡೆಯಬಹುದು. ಮಂಗಳವಾರ ಬೆಳಿಗ್ಗೆ 10.30ಗಂಟೆಯಿಂದ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಅವಧಿ ಕಡಿತ 

ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳು
* ಇದಕ್ಕಾಗಿ ಪಾಲಿಕೆಯ 8 ವಲಯಗಳ ಆಯುಕ್ತರನ್ನು 'ಸಮರ್ಥ ಅಧಿಕಾರಿ' (competent authority) ಗಳನ್ನಾಗಿ ನೇಮಿಸಲಾಗಿದ್ದು, ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು 'ಸಮರ್ಥ ಅಧಿಕಾರಿ' ಎಂದು ಗುರುತಿಸಲಾಗಿದೆ. 

* ಈ ವರ್ಗದ ಜನರಿಗೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 28 ದಿನಗಳಲ್ಲೇ ಎರಡನೇ ಡೋಸ್‌ ನೀಡಲಾಗುವುದು. 

* ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣೇ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿಸಬೇಕು. 

* ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!