
ಯಾದಗಿರಿ (ಜ.21): ರಾಮಾಯಣದ ಅನೇಕ ಕುರುಹುಗಳು ನಮ್ಮ ರಾಜ್ಯದಲ್ಲಿ ಲಭ್ಯವಾಗಿವೆ. ಶ್ರೀರಾಮನ ಬಂಟ ಆಂಜನೇಯ ಜನ್ಮಸ್ಥಳ ಅಂಜನಾದ್ರಿ, ವಾಲಿ-ಸುಗ್ರೀವನ್ನು ಭೇಟಿಯಾದ ಸ್ಥಳ ಕಿಷ್ಕಿಂಧೆ, ಶಬರಿ ರಾಮನಿಗಾಗಿ ಕಾಯುತ್ತಿದ್ದ ಸ್ಥಳವೂ ಕರ್ನಾಟಕದಲ್ಲಿದೆ. ಈಗ ನಮ್ಮ ರಾಜ್ಯದಲ್ಲಿ ಶ್ರೀರಾಮ ಪ್ರಭು ತ್ರೇತಾಯುಗದಲ್ಲಿ ಬಳಸಿದ್ದರೆನ್ನಲಾದ ಬೃಹತ್ 7 ಅಡಿ ಉದ್ದದ ಬಾಣವೂ ಕೂಡ ಯಾದಗಿರಿಯಲ್ಲಿ ಲಭ್ಯವಾಗಿದೆ.
ಹೌದು, ತ್ರೇತಾಯುಗದಲ್ಲಿ ಪ್ರಭು ಶ್ರೀರಾಮ ಪ್ರಭು ಬಳಕೆ ಮಾಡಿದ್ದರೆನ್ನಲಾದ ಬಾಣವು ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಪತ್ತೆಯಾಗಿದೆ. ನಾಳೆ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದೆ. ಆದರೆ, ಇತ್ತ ಯಾದಗಿರಿ ಜಿಲ್ಲೆಯಲ್ಲಿ ಶ್ರೀರಾಮನ ಬಾಣ ಪ್ರತ್ಯಕ್ಷವಾಗಿದೆ. ರಾಮನ ಬಾಣ ಪ್ರತ್ಯಕ್ಷವಾದ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿ ಬಾಣಕ್ಕೆ ನಿತ್ಯ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ. ಈ ಬಾಣವು 7 ಅಡಿಗಿಂತಲೂ ಎತ್ತರವಾಗಿದ್ದು, ಘನಘಾತ್ರದ್ದಾಗಿದೆ. ಇದು ಉಕ್ಕಿನ ಅದಿರು ಹಾಗೂ ಕಬ್ಬಿಣ ಮಿಶ್ರಿತ ಲೇಪನ ಹೊಂದಿರುವ ರಾಮ ಬಾಣವಾಗಿದೆ.
ರಾಮ ಮಂದಿರ ನಿರ್ಮಾಣಕ್ಕೆ ಜೀವನಾಧಾರದ ಜಮೀನು ಬಿಟ್ಟುಕೊಟ್ಟ ದಲಿತ ರಾಮದಾಸ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಿಬರಬಂಡಿ ಗ್ರಾಮದಲ್ಲಿರುವ ದೇವಸ್ಥಾನದಲ್ಲಿ ರಾಮ ಬಾಣ ಪತ್ತೆಯಾಗಿದೆ. ಗ್ರಾಮಸ್ಥರು ಇಲ್ಲಿ ಲಭ್ಯವಾದ ರಾಮ ಬಾಣವನ್ನು ತಲೆತಲಾಂತರದಿಂದ ದೇವಸ್ಥಾನ ನಿರ್ಮಿಸಿ ಪೂಜಿಸುತ್ತಿದ್ದಾರೆ. ರಾಮನು ಬಾಗಲಕೋಟೆ ಜಿಲ್ಲೆಯ ಸೀತಾಮಾತೆ ನೆಲೆಸಿದ್ದ ಶೀತಿಮನಿಯಿಂದ ಲಂಕೆಗೆ ಬಿಟ್ಟಿದ್ದ ಎನ್ನಲಾದ ಬಾಣ ಇದಾಗಿದೆ. ಆದರೆ, ಈ ಬಾಣ ಲಂಕೆಗೆ ತಲುಪದೇ ಶಿಬರಬಂಡಿ ಗ್ರಾಮದಲ್ಲಿ ಬಿದ್ದಿತ್ತು ಎನ್ನಲಾಗಿದೆ. ಅಂದೇ ರಾಮನ ಕುಲ ಸಮಾಪ್ತಿಯಾಗಿದೆ ಎಂದು ಶಿಬಿರಬಂಡಿ ಗ್ರಾಮಸ್ಥರು ಹೇಳುತ್ತಿದ್ದಾರೆ.
ರಾಮನ ಪ್ರತೀಕವಾದ ಬಾಣ ಸಿಕ್ಕಿರೋ ಸ್ಥಳದಲ್ಲಿ ಗ್ರಾಮಸ್ಥರು ದೇವಸ್ಥಾನ ನಿರ್ಮಿಇಸಿದ್ದಾರೆ. ಅಂದಿನಿಂದ ಶಿಬರಬಂಡಿ ಶ್ರೀರಾಮನ ಬಾಣ ದೇವಸ್ಥಾನ ಐತಿಹಾಸಿಕ ಸ್ಥಳ ಎಂದೇ ಪ್ರಸಿದ್ಧಿ ಪಡೆದಿದೆ. ದೇವಸ್ಥಾನದಲ್ಲಿ ರಾಮನ ಬಾಣಕ್ಕೆ ಪೂಜೆ ಸಲ್ಲಿಸಿ ರಾಮನನ್ನ ಆರಾಧಿಸಲಾಗುತ್ತದೆ. ಈ ಬಾಣವನ್ನು ತೇತ್ರಾಯುಗದಲ್ಲಿ ರಾಮ ಬಳಸಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಜಮೀನು ಕೊಟ್ಟ ದಲಿತ ರಾಮದಾಸ್: ಮೈಸೂರು (ಜ.21): ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗುತ್ತಿರುವ ಬಾಲರಾಮ (ರಾಮಲಲ್ಲಾ) ವಿಗ್ರಹದ ಕೃಷ್ಣಶಿಲೆ ಸಿಕ್ಕಿರುವ ಮೈಸೂರಿನ ಹಾರೋಹಳ್ಳಿ ಜಮೀನಿನಲ್ಲಿ ರಾಮ ಮಂದಿರ ನಿರ್ಮಿಸಲು ನಿರ್ಧರಿಸಲಾಗಿದೆ. ಆದರೆ, ಈ ಜಮೀನು ದಲಿತ ವ್ಯಕ್ತಿ ರಾಮದಾಸ್.ಹೆಚ್ ಎನ್ನುವವರದ್ದಾಗಿದ್ದು, ರಾಮ ಮಂದಿರ ನಿರ್ಮಣಕ್ಕೆ 4 ಗುಂಟೆ ಜಮೀನು ನೀಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನವೇ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ.
ಶಿವಮೊಗ್ಗ ಯುವತಿಯರ ಸರಣಿ ಆತ್ಮಹತ್ಯೆ: ಮದುವೆಗೆ 13 ದಿನವಿರುವಾಗ ನೇಣಿಗೆ ಶರಣಾದ ಮದುಮಗಳು
ರಾಮದಾಸ್ ಅವರ ಜಮೀನಿನಲ್ಲಿ ದೊರೆತ 10 ಅಡಿ ಅಳತೆಯ ಮೂರು ಬೃಹತ್ ಕಲ್ಲುಗಳನ್ನು ನೋಡಿ ಅವುಗಳಲ್ಲಿ ಒಂದನ್ನು ತಜ್ಞರಿಂದ ಪರೀಕ್ಷೆಗಾಗಿ ಅಯೋಧ್ಯೆಗೆ ತೆಗೆದುಕೊಂಡು ಹೋಗಲಾಯಿತು. ಅಲ್ಲಿ ಟ್ರಸ್ಟ್ ಕಲ್ಲಿನ ಬ್ಲಾಕ್ ಅನ್ನು ಆಯ್ಕೆ ಮಾಡಿತು. ಈಗ ಇದೇ ಕಲ್ಲಿನಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಾಮಲಲ್ಲಾನ ಮೂರ್ತಿ ಕೆತ್ತನೆ ಮಾಡಿದ್ದಾರೆ. ದಲಿತ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕ ಶಿಲೆಯಿಂದ ಜಗತ್ತೇ ನಮಿಸುವಂತಹ ಶ್ರೀರಾಮಲಲ್ಲಾನ ವಿಗ್ರಹ ರಚನೆಯಾಗಿದ್ದು, ಅದನ್ನು ಜ.22ರ ಬೆಳಗ್ಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ