ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ

Kannadaprabha News   | Kannada Prabha
Published : Nov 05, 2025, 07:51 AM IST
Gurudev ravishankar guruji

ಸಾರಾಂಶ

ಬೋಸ್ಟನ್ ಗ್ಲೋಬಲ್ ಫೋರಂನಿಂದ ಆರ್ಟ್ ಆಫ್ ಲಿವಿಂಗ್ ಫೌಂಡೇಷನ್‌ ಸಂಸ್ಥಾಪಕ ಗುರುದೇವ್ ಶ್ರೀ ಶ್ರೀ ರವಿಶಂಕರ ಅವರಿಗೆ 2025ನೇ ಸಾಲಿನ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರು : ಬೋಸ್ಟನ್ ಗ್ಲೋಬಲ್ ಫೋರಂನಿಂದ ಆರ್ಟ್ ಆಫ್ ಲಿವಿಂಗ್ ಫೌಂಡೇಷನ್‌ ಸಂಸ್ಥಾಪಕ ಗುರುದೇವ್ ಶ್ರೀ ಶ್ರೀ ರವಿಶಂಕರ ಅವರಿಗೆ 2025ನೇ ಸಾಲಿನ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಮೆರಿಕದ ಮೆಸಾಚ್ಯುಸೆಟ್ಸ್‌ ರಾಜ್ಯದ ಬೋಸ್ಟನ್ ನಗರದಲ್ಲಿ ಪ್ರಶಸ್ತಿ ನೀಡಲಾಗಿದೆ

ಸೋಮವಾರ ಅಮೆರಿಕದ ಮೆಸಾಚ್ಯುಸೆಟ್ಸ್‌ ರಾಜ್ಯದ ಬೋಸ್ಟನ್ ನಗರದಲ್ಲಿ ಬೋಸ್ಟನ್ ಗ್ಲೋಬಲ್ ಫೋರಂ ಮತ್ತು ಎಐ ವರ್ಲ್ಡ್ ಸೊಸೈಟಿಯಿಂದ ಪ್ರಶಸ್ತಿ ನೀಡಲಾಗಿದೆ. ಜಾಗತಿಕ ಶಾಂತಿ ಸ್ಥಾಪನೆಗಾಗಿ, ಸಮನ್ವಯತೆಗಾಗಿ ಮತ್ತು ಮಾನವತ್ವದ ನಾಯಕತ್ವಕ್ಕಾಗಿ ರವಿಶಂಕರ್ ಅವರು ನೀಡಿರುವ ಅಸಾಧಾರಣ ಕೊಡುಗೆಗಾಗಿ ಈ ಪ್ರಶಸ್ತಿ ಲಭಿಸಿದೆ.

‘ಶಾಂತಿ ಬರೀ ಮಾತುಗಳಿಂದ ಬರಲು ಸಾಧ್ಯವಿಲ್ಲ

‘ಶಾಂತಿ ಬರೀ ಮಾತುಗಳಿಂದ ಬರಲು ಸಾಧ್ಯವಿಲ್ಲ. ಅದನ್ನು ಕಾರ್ಯರೂಪಕ್ಕೆ ತರಬೇಕು. ಇಂದು ನಮ್ಮ ಸಮಾಜ ಎದುರಿಸುತ್ತಿರುವ ಅಪನಂಬಿಕೆ ಮತ್ತು ದುಃಖ ಶಮನಗೊಳಿಸಲು ಒಂದು ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಯ ಅವಶ್ಯಕತೆ ಇದೆ’ ಎಂದು ರವಿಶಂಕರ್ ಗುರೂಜಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!