SSLC: ಪಾಸ್‌ ವಿತೌಟ್‌ ಹಿಂದಿ ನಿಯಮ ಜಾರಿಗೆ ‘ಹಿಂದಿ ಹೇರಿಕೆ ವಿರೋಧಿ’ ಸಂಘಟನೆ ಒತ್ತಾಯ

Kannadaprabha News, Ravi Janekal |   | Kannada Prabha
Published : Mar 06, 2026, 08:04 AM IST
Pass Without Hindi Rule

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 'ಪಾಸ್‌ ವಿತೌಟ್‌ ಹಿಂದಿ' ನಿಯಮವನ್ನು ತಕ್ಷಣ ಜಾರಿಗೆ ತರಬೇಕೆಂದು 'ಹಿಂದಿ ಹೇರಿಕೆ ವಿರೋಧಿ ಕರ್ನಾಟಕ' ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ಈ ಶೈಕ್ಷಣಿಕ ವರ್ಷದ ಪರೀಕ್ಷೆಗೆ ನಿಯಮ ಘೋಷಿಸದಿದ್ದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ

‘ಹಿಂದಿ ಹೇರಿಕೆ ವಿರೋಧಿ’ ಸಂಘಟನೆ ಒತ್ತಾಯ

ಬೆಂಗಳೂರು (ಮಾ.6): ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ‘ಪಾಸ್‌ ವಿತೌಟ್‌ ಹಿಂದಿ’ ಎಂಬ ನಿಯಮವನ್ನು ರಾಜ್ಯ ಸರ್ಕಾರ ತಕ್ಷಣ ಪ್ರಕಟಿಸಬೇಕು. ಇಲ್ಲದಿದ್ದರೆ ಮಾ.10ರಂದು ಮಲ್ಲೇಶ್ವರದಲ್ಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಗೆ ಮುತ್ತಿಗೆ ಹಾಕುವುದಾಗಿ ‘ಹಿಂದಿ ಹೇರಿಕೆ ವಿರೋಧಿ ಕರ್ನಾಟಕ’ ಸಂಘಟನೆ ಎಚ್ಚರಿಸಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರರು ರಾಜ್ಯ ಶಿಕ್ಷಣ ಪರೀಕ್ಷಾ ಪದ್ಧತಿಯೊಳಗೆ ಹಿಂದಿ ಭಾಷೆ ಕಲಿಕೆಯನ್ನು ಹಂತಹಂತವಾಗಿ, ಬಲವಂತವಾಗಿ ಹೇರಲಾಗುತ್ತಿದೆ. ಇದು ಲಕ್ಷಾಂತರ ವಿದ್ಯಾರ್ಥಿಗಳ ಮುನ್ನಡೆಗೆ ತೊಡಕಾಗಿ ಪರಿಣಮಿಸಲಿದೆ. ಕಳೆದ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 1.42 ಲಕ್ಷ ಕನ್ನಡಿಗ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಘೋಷಿಸಿ ಅವರ ಬದುಕು ಅತಂತ್ರಗೊಳಿಸಲಾಗಿತ್ತು. ಈ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಮಾ.18ರಂದು ಶುರುವಾಗಲಿದ್ದು, ಅದರೊಳಗೆ ಸರ್ಕಾರ ಪಾಸ್‌ ವಿತೌಟ್‌ ಹಿಂದಿ ನಿಯಮ ಘೋಷಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಜಯ್‌ಕುಮಾರ್‌, ಕೋಡಿಹಳ್ಳಿ ಚಂದ್ರಶೇಖರ್‌, ಕರ್ನಾಟಕ ಕದಂಬ ಪಡೆಯ ಮಂಜು ಗಣಪತಿಪುರ ಸೇರಿದಂತೆ ಮತ್ತಿತರರು ಇದ್ದರು.

ದ್ರಾವಿಡ ಕನ್ನಡಿಗರ ಸಂಘಟನೆಯ ಅಬಿಗೌಡ ಮಾತನಾಡಿ, ಥೋರಟ್‌ ಆಯೋಗದ ವರದಿಯನ್ನು ಶಾಸನಸಭೆಯಲ್ಲಿ ಹಾಗೂ ಸಾರ್ವಜನಿಕ ಚರ್ಚೆಗೆ ಒದಗಿಸಬೇಕು. ದ್ವಿಭಾಷಾ ನೀತಿ ಜಾರಿಯಾಗುವವರೆಗೆ ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಹಿಂದಿ ಪರೀಕ್ಷೆ ಕಡ್ಡಾಯಗೊಳಿಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು. ಹಿಂದಿ ಭಾಷಾ ಶಿಕ್ಷಕರ ನೇಮಕಾತಿ ರದ್ದುಪಡಿಸಬೇಕು. ಈಗಾಗಲೇ ನೇಮಕಗೊಂಡಿರುವ ಶಿಕ್ಷಕರನ್ನು ಕನ್ನಡ ಭಾಷಾ ಶಿಕ್ಷಕರಾಗಿ ನಿಯೋಜಿಸಲು ಕ್ರಮವಹಿಸಬೇಕು. ರಾಜ್ಯದ ಯಾವುದೇ ಹಂತದ ಶಿಕ್ಷಣ ಪಠ್ಯಕ್ರಮದೊಳಗೆ ಹಿಂದಿ ಭಾಷೆ ರಾಷ್ಟ್ರಭಾಷೆ ಎಂಬ ಬಿಂಬಿಸುವ ಕಲ್ಪಿತ ವಿಷಯವನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಣ್ಮಕ್ಕಳ ಉಚಿತ ಬಸ್ ಸೇವೆ ಶಕ್ತಿ ಯೋಜನೆಯ 5313 ಕೋಟಿ ಬಿಡುಗಡೆಗೆ KSRTC ಎಂಡಿಯಿಂದ ಸರ್ಕಾರಕ್ಕೆ ಪತ್ರ
Karnataka Budget 2026 Live: ಇಂದು ಕರ್ನಾಟಕ ಬಜೆಟ್‌, ದಾಖಲೆಯ 17ನೇ ಬಾರಿಗೆ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ