
ಮೈಸೂರು(ಆ.07): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಯಾಕೆ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ದಾಳಿ ಮಾಡಿಸಿರಬಾರದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಪ್ರಶ್ನಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಮೀರ್ ಪದೇ ಪದೆ ಸಿದ್ದರಾಮಯ್ಯ ಮುಂದಿನ ಸಿಎಂ ಎನ್ನುತ್ತಿದ್ದರು. ಇದು ಡಿ.ಕೆ. ಶಿವಕುಮಾರ್ಗೆ ಅಜೀರ್ಣವಾಗಿರಬೇಕು. ಡಿ.ಕೆ. ಶಿವಕುಮಾರ್ಗೆ ಇ.ಡಿ, ಐಟಿಯ ಲಿಂಕ್ ಜಾಸ್ತಿ ಬೆಳೆದಿದೆ. ಹೀಗಾಗಿ, ಅವರೇ ಯಾಕೆ ಜಮೀರ್ ಮನೆ ಮೇಲೆ ದಾಳಿ ಮಾಡಿಸಿರಬಾರದು ಎಂದು ಅನುಮಾನ ವ್ಯಕ್ತಪಡಿಸಿದರು. ಶಾಸಕ ಜಮೀರ್, ಮಾಜಿ ಸಚಿವ ರೋಷನ್ ಬೇಗ್ ಮೇಲೆ ಇ.ಡಿ. ದಾಳಿ ರಾಜಕೀಯ ಪ್ರೇರಿತ ಅಲ್ಲ. ಈ ದಾಳಿಯನ್ನು ಬಿಜೆಪಿ ಮಾಡಿಸಿದೆ ಎಂಬ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ ಎಂದರು.
ಕರಪ್ಟ್ ಶಾಸಕನ ಪರ ಭ್ರಷ್ಟ ಕಾಂಗ್ರೆಸ್ ಅಧ್ಯಕ್ಷನ ವಕಾಲತ್ತು: ಬಿಜೆಪಿ
ಸಿಎಂ ನಿನಗೆ ಯಾವ ಖಾತೆ ಬೇಕು ಎಂದು ನನಗೆ ಕೇಳಿದರೆ ನಾನು ಬೆಂಗಳೂರು ಅಭಿವೃದ್ಧಿ ಮತ್ತು ಬಿಡಿಎ ಖಾತೆ ಬೇಕು ಎನ್ನುತ್ತೇನೆ. ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನನಗೆ ಅಗತ್ಯ ಇದೆ ಎಂದರು.
ಅವರು ಕೇಳುವುದಿಲ್ಲ, ನಾನು ಹೇಳುವುದಿಲ್ಲ ಎಂದು ಗೊತ್ತಿದೆ. ನೀವು ಕೇಳುತ್ತಿದ್ದಿರಿ, ನಾನು ಹೇಳುತ್ತಿದ್ದೇನೆ ಅಷ್ಟೇ. ಇಂಥದ್ದೇ ಖಾತೆ ಕೊಡಿ ಎಂದು ನಾನು ಕೇಳುವುದಿಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ