
ಬೆಳಗಾವಿ (ಸೆ.26): ಸರ್ಕಾರ ಕಚೇರಿಗಳಲ್ಲಿ ಬರ್ತಡೇ ಆಚರಣೆ ನಿಷೇಧವಿದ್ರೂ ಕೇಕ್ ಕತ್ತರಿಸಿ ಭರ್ಜರಿ ಕೇಕ್ ಕತ್ತರಿಸಿ ಪಾರ್ಟಿ ಮಾಡಿದ ಘಟನೆ ಬೆಳಗಾವಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆದಿದೆ.
ಸರ್ಕಾರಿ ಕಚೇರಿಗಳಲ್ಲಿ ಬರ್ತಡೇ, ಖಾಸಗಿ ಕಾರ್ಯಕ್ರಮ ಮಾಡದಂತೆ ಸರ್ಕಾರದ ಆದೇಶವಿದೆ. ಆದರೆ ಇಲಾಖೆ ಸಿಬ್ಬಂದಿ ಪ್ರವೀಣ ಮೇತ್ರಿ ಕೇಕ್ ತರಿಸಿ ಕಚೇರಿಯಲ್ಲೇ ಎಲ್ಲರ ಸಮ್ಮುಖದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಆ ಮೂಲಕ ಸರ್ಕಾರದ ಆದೇಶವನ್ನೇ ಧಿಕ್ಕರಿಸಿದ್ದಾರೆ.
ಊಟ-ತಿಂಡಿಗೆ ಮಗು ಕಿರಿಕಿರಿ, ಹೊಯ್ಸಳಗೆ ಕರೆಮಾಡಿದ ಅಪ್ಪ ಮಹಾಶಯ!
ಕಚೇರಿಯಲ್ಲಿ ಕೇಕ್ ಕತ್ತರಿಸುವ ವೇಳೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳಿ , ಸಿಬ್ಬಂದಿ, ದಲಿತ ಮುಖಂಡ ಮಲ್ಲೇಶ ಚೌಗಲೆ ಸೇರಿದಂತೆ ಹಲವರು ಬರ್ತಡೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಬರ್ತಡೇ ಕಾರ್ಯಕ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸರ್ಕಾರಿ ಕಚೇರಿಗಳಲ್ಲಿ ನಿಷೇಧವಿದ್ದರೂ ಬರ್ತಡೇ ಆಚರಿಸಿಕೊಂಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ