ಯಾದಗಿರಿಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ದಲಿತ ಮಕ್ಕಳ ಊಟದ ತಟ್ಟೆ ತೊಳೆಯಲು ನಿರಾಕರಣೆ: ಬಿಸಿಯೂಟವೇ ಸ್ಥಗಿತ!

Published : Feb 24, 2025, 09:11 AM ISTUpdated : Feb 24, 2025, 09:53 AM IST
ಯಾದಗಿರಿಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ದಲಿತ ಮಕ್ಕಳ ಊಟದ ತಟ್ಟೆ ತೊಳೆಯಲು ನಿರಾಕರಣೆ: ಬಿಸಿಯೂಟವೇ ಸ್ಥಗಿತ!

ಸಾರಾಂಶ

ಯಾದಗಿರಿ ಜಿಲ್ಲೆಯ ಶಾಲೆಯೊಂದರಲ್ಲಿ ದಲಿತ ಮಕ್ಕಳು ಊಟ ಮಾಡಿದ ತಟ್ಟೆ ತೊಳೆಯಲು ಸಿಬ್ಬಂದಿ ನಿರಾಕರಿಸಿದ್ದರಿಂದ ಬಿಸಿಯೂಟ ಸ್ಥಗಿತಗೊಂಡಿದೆ. ಇದರಿಂದ ಮಕ್ಕಳಿಗೆ ಉಪ್ಪಿಟ್ಟು, ರಾಗಿ ಗಂಜಿ ನೀಡಲಾಗುತ್ತಿದೆ.

ಯಾದಗಿರಿ (ಫೆ.24) : ಸರ್ಕಾರಿ ಶಾಲೆಯ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕ ಸಿಬ್ಬಂದಿ ನಿರಾಕರಿಸಿದ ಕಾರಣ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪದ ಕರಕಳ್ಳಿ ಗ್ರಾಮದಲ್ಲಿ ನಡೆದಿದೆ.

ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಾನಿಯೊಬ್ಬರು 200 ಸ್ಟೀಲ್‌ ತಟ್ಟೆ ನೀಡಿದ್ದಾರೆ. ಆದರೆ ದಲಿತ ಮಕ್ಕಳು ಊಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕಿಯರು ನಿರಾಕರಿಸುತ್ತಿದ್ದಾರೆ. 

ಜೊತೆಗೆ ಕೆಲ ಸಿಬ್ಬಂದಿ ದಿಢೀರ್‌ ಕೆಲಸಕ್ಕೆ ರಜೆ ಹಾಕಿ ತೆರಳಿದ್ದಾರೆ. ಹೀಗಾಗಿ ನಾಲ್ಕೈದು ದಿನಗಳಿಂದ ಮಕ್ಕಳಿಗೆ ಬಿಸಿಯೂಟವೇ ಸ್ಥಗಿತಗೊಂಡಿದೆ. ಮಕ್ಕಳು ಹಸಿದ ಹೊಟ್ಟೆಯಲ್ಲಿ ಹೋಗಬಾರದೆಂದು ದಿನಗೂಲಿ ಆಧಾರದ ಮೇಲೆ ಬೇರೆ ಅಡುಗೆ ಸಿಬ್ಬಂದಿಯನ್ನು ಕರೆಸಿ ಮಕ್ಕಳಿಗೆ ಉಪ್ಪಿಟ್ಟು, ರಾಗಿ ಗಂಜಿ ನೀಡಲಾಗುತ್ತಿದೆ ಎಂದು ಗ್ರಾಮದ ಗುರುಲಿಂಗಪ್ಪ ದೊಡ್ಡಮನಿ ‘ಕನ್ನಡಪ್ರಭ’ದೆದುರು ನೋವು ವ್ಯಕ್ತಪಡಿಸಿದ್ದಾರೆ

ಇದನ್ನೂ ಓದಿ: ದಲಿತ ಯುವತಿ ಮನೆ ಸೊಸೆಯಾದಳೆಂದು, ಹಂದಿಗೂಡಿನಲ್ಲಿಟ್ಟು ವಿಷವಿಕ್ಕಿ ಕೊಂದರಾ ಪಾಪಿಗಳು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್