ಮಹಿಷ ದಸರಾಕ್ಕೆ 50ವರ್ಷ; ವಿವಾದ ಹುಟ್ಟುಹಾಕಿದ ಆಹ್ವಾನ ಪತ್ರಿಕೆ!

Published : Oct 07, 2023, 03:54 PM IST
ಮಹಿಷ ದಸರಾಕ್ಕೆ 50ವರ್ಷ; ವಿವಾದ ಹುಟ್ಟುಹಾಕಿದ ಆಹ್ವಾನ ಪತ್ರಿಕೆ!

ಸಾರಾಂಶ

ತೀವ್ರ ವಿರೋಧದ ನಡುವೆಯೂ ಮಹಿಷ ದಸರಾ ಆಚರಣೆಗೆ ಪ್ರಗತಿಪರರ ನೇತೃತ್ವದಲ್ಲಿ ವೇದಿಕೆ ಸಿದ್ಧವಾಗುತ್ತಿದೆ. ಆಚರಣೆ ಸಂಬಂಧ 50ನೇ ವರ್ಷದ ಮಹಿಷ ದಸರಾ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಮೈಸೂರು (ಅ.7): ತೀವ್ರ ವಿರೋಧದ ನಡುವೆಯೂ ಮಹಿಷ ದಸರಾ ಆಚರಣೆಗೆ ಪ್ರಗತಿಪರರ ನೇತೃತ್ವದಲ್ಲಿ ವೇದಿಕೆ ಸಿದ್ಧವಾಗುತ್ತಿದೆ. ಆಚರಣೆ ಸಂಬಂಧ 50ನೇ ವರ್ಷದ ಮಹಿಷ ದಸರಾ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಬಗ್ಗೆ ಮಾಹಿತಿ ನೀಡಲಾಗಿದೆ. ಅ. 13 ರಂದು ಮಹಿಷ ದಸರಾ ನಡೆಯಲಿದೆ. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ‌ ಉರಿಲಿಂಗ ಪೆದ್ದಿ‌ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಬೌದ್ದ ಬಿಕ್ಕು ಬೋಧಿದತ್ತ ಭಂತೇಜಿ ಸೇರಿ ಹಲವು ಪ್ರಗತಿಪರ ಸಾಹಿತಿಗಳು ಭಾಗಿಯಾಗಲಿದ್ದಾರೆ.

ಸಾಂಸ್ಕೃತಿಕ ನಗರಿಯಲ್ಲಿ ಮಹಿಷ ದಸರಾ ಸಂಘರ್ಷ: ಕರಾವಳಿಗೂ ಹಬ್ಬಿದ ಮಹಿಷ ದಸರಾ ನಂಟು..!

 

ಅ.13ರಂದು ಮಹಿಷ ದಸರಾ ಆಚರಣೆ ಸಮಿತಿ ಮತ್ತು ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದಿಂದ ಮಹಿಷಾ ದಸರಾ ಆಚರಣೆ ನಡೆಸಲಾಗುತ್ತಿದೆ. ಮಹಿಷ ದಸರಾವನ್ನು ದಸರಾ ಅಥವಾ ಚಾಮುಂಡೇಶ್ವರಿಗೆ ವಿರುದ್ಧವಾಗಿ ನಡೆಸುತ್ತಿಲ್ಲ. ಮೈಸೂರು ಅಸ್ಮಿತೆಗಾಗಿ ನಡೆಸಲಾಗುತ್ತಿದೆ ಎಂದಿರುವ ಪ್ರಗತಿಪರರು ನಮ್ಮ ಆಚರಣೆಯು ಈ ನೆಲದ ಮೂಲ ನಿವಾಸಿಯಾದ ಮಹಿಷ ಮಂಡಲವನ್ನು ಆಳಿದ ದೊರೆ ಮಹಿಷಾಸುರನಿಗೆ ಗೌರವ ಸಲ್ಲಿಸಲು ಪ್ರತಿ ವರ್ಷದಂತೆ ಈ ವರ್ಷವೂ ಆಚರಿಸಲಾಗುತ್ತಿದೆ ಮೈಸೂರು ದಸರಾದಂತೆ ಅಂದು ಯಾವುದೇ ಪೂಜೆ ವಿಧಿ-ವಿಧಾನಗಳಿರುವುದಿಲ್ಲ. ನಾಡಿನ ಗಣ್ಯಸಾಹಿತಿಗಳಿಂದ ಪುಷ್ಪಾರ್ಚನೆ ಮಾಡಲಾಗುತ್ತಿದೆ ಮಹಿಷ ದಸರಾ ಸಮಿತಿ ಹೇಳಿಕೊಂಡಿದೆ.

ಕರ್ನಾಟಕದಲ್ಲಿ ರಾಕ್ಷಸರ ರಾಜ್ಯಭಾರ ನಡೆಯುತ್ತಿದೆ: ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಕಳೆದ ವರ್ಷ ಬಿಜೆಪಿ ಸರ್ಕಾರದಲ್ಲಿ ಮಹಿಷ ದಸರಾಗೆ ಅವಕಾಶ ನೀಡರಲಿಲ್ಲ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಿಷ ದಸರಾ ಆಚರಣೆಗೆ ವೇದಿಕೆ ಸಿದ್ಧಗೊಂಡಿದೆ. ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಕೂಡ ಮಹಿಷ ದಸರಾ ಆಚರಣೆಗೆ ನಾವು ಅಡ್ಡಿ ಮಾಡಲ್ಲ ಎಂದಿದ್ದಾರೆ. ಇತ್ತ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರು ಮಹಿಷ ದಸರಾ ಆಚರಣೆ ನಡೆಯಲು ಬಿಡುವುದಿಲ್ಲ. ಘರ್ಷಣೆಯಾದರೂ ಸರಿಯೇ ಎಂದಿದ್ದಾರೆ. ವಿರೋಧದ ನಡುವೆಯೂ ಆಚರಣೆಗೆ ಮುಂದಾಗಿರುವ ಪ್ರಗತಿಪರರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!