ಕೊರೋನಾ 3ನೇ ಅಲೆ ಎದುರಿಸಲು ರಾಜ್ಯಾದ್ಯಂತ ತಯಾರಿ ಆರಂಭ

Kannadaprabha News   | Asianet News
Published : Jun 02, 2021, 07:39 AM IST
ಕೊರೋನಾ 3ನೇ ಅಲೆ ಎದುರಿಸಲು ರಾಜ್ಯಾದ್ಯಂತ ತಯಾರಿ ಆರಂಭ

ಸಾರಾಂಶ

* ಜಿಲ್ಲಾ ಆರೋಗ್ಯ ಇಲಾಖೆಗಳಿಂದ ಬೆಡ್‌, ಆಕ್ಸಿಜನ್‌ ಸಿದ್ಧತೆ * ಎಲ್ಲ ತಾಲೂಕುಗಳಲ್ಲಿ ಖಾಲಿ ಇದ್ದ ವೆಂಟಿಲೇಟರ್‌ ಅಳವಡಿಸಲು ಸೂಚನೆ * ಮಕ್ಕಳ ತಜ್ಞರು, ಎಂಬಿಬಿಎಸ್‌ ವೈದ್ಯರು, ತಜ್ಞ ವೈದ್ಯರ ನೇಮಕ

ಬೆಂಗಳೂರು(ಜೂ.02): ಜಿಲ್ಲೆಯಲ್ಲಿ ಮೂರನೇ ಅಲೆಗೆ ಜಿಲ್ಲಾ ಆರೋಗ್ಯ ಇಲಾಖೆ ಸಜ್ಜಾಗುತ್ತಿವೆ. ಅಗತ್ಯ ಇರುವ ಬೆಡ್‌, ಆಕ್ಸಿಜನ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಖಾಲಿ ಇರುವ ವೈದ್ಯರು ಹಾಗೂ ನರ್ಸ್‌ಗಳನ್ನು ತುಂಬಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳ ತಜ್ಞರು, ಎಂಬಿಬಿಎಸ್‌ ವೈದ್ಯರು, ತಜ್ಞ ವೈದ್ಯರನ್ನು ನೇಮಿಸಿಕೊಳ್ಳಲಾಗಿದೆ. ಇನ್ನು ತಾಲೂಕು ಕೇಂದ್ರಗಳಲ್ಲಿ ಬೆಡ್‌ ಹಾಗೂ ಆಕ್ಸಿಜನ್‌, ಮಕ್ಕಳ ಚಿಕಿತ್ಸೆಗೆ ಬೇಕಾದ ವ್ಯವಸ್ಥೆಗಳ ಸಿದ್ಧತೆಯಲ್ಲಿ ತೊಡಗಿವೆ.

ವಿಜಯಪುರ 60 ಬೆಡ್‌ ಮೀಸಲಿರಿಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಸಿದ್ಧತೆಗಳ ಬಗ್ಗೆ ಮಕ್ಕಳ ತಜ್ಞರು ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳ ಉನ್ನತ ಸಭೆ ನಡೆಸಿದೆ. ಇನ್ನು ಹಾವೇರಿಯಲ್ಲಿ 30 ಆಕ್ಸಿಜನ್‌ ಬೆಡ್‌ನ ಪ್ರತ್ಯೇಕ ವಾರ್ಡ್‌ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗಾಗಿ 15 ಬೆಡ್‌ ಸಾಮರ್ಥ್ಯದ ಪ್ರತ್ಯೇಕ ವಿಭಾಗವಿದೆ. ತಾಲೂಕುಗಳಲ್ಲಿ ಖಾಲಿ ಇದ್ದ ವೆಂಟಿಲೇಟರ್‌ ಅಳವಡಿಸಲು ಸೂಚಿಸಲಾಗಿದೆ.

ಕೊರೋನಾ ಮೂರನೇ ಅಲೆಗೆ ಮಕ್ಕಳೇ ಟಾರ್ಗೆಟ್?: ಖುಷಿ ಕೊಟ್ಟ ಭಾರತೀಯ ವಿಜ್ಞಾನಿಗಳ ಮಾತು!

ದಾವಣಗೆರೆ ಜಿಲ್ಲಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ. 47 ವೈದ್ಯರು, 19 ತಜ್ಞ ವೈದ್ಯರು, 34 ಶುಶ್ರೂಷಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ. ಈ ನಡುವೆ ಕಲಬುರಗಿಯಲ್ಲಿ ಇನ್ನೂ ಸಿದ್ಧತೆ ಮಾಡಿಕೊಂಡಿಲ್ಲ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ