ಅಮರನಾಥಕ್ಕೆ ತೆರಳಿದ್ದ ರಾಜ್ಯ ಯಾತ್ರಿಕರು ಸೇಫ್‌: ಯಾತ್ರೆಗೆ ತೆರಳಿದ್ದು 80 ಅಲ್ಲ, 300 ಕನ್ನಡಿಗರು

Published : Jul 10, 2023, 05:43 AM IST
ಅಮರನಾಥಕ್ಕೆ ತೆರಳಿದ್ದ ರಾಜ್ಯ ಯಾತ್ರಿಕರು ಸೇಫ್‌: ಯಾತ್ರೆಗೆ ತೆರಳಿದ್ದು 80 ಅಲ್ಲ, 300 ಕನ್ನಡಿಗರು

ಸಾರಾಂಶ

ರಾಜ್ಯದಿಂದ ಅಮರನಾಥ ಯಾತ್ರೆಗೆ ತೆರಳಿದ್ದು 80 ಅಲ್ಲ, 300ಕ್ಕೂ ಹೆಚ್ಚು ಯಾತ್ರಿಕರು. ಅವರೆಲ್ಲರೂ ಸುರಕ್ಷಿತವಾಗಿದ್ದು, ಭಾನುವಾರ ತಾವು ಉಳಿದಿದ್ದ ಬೇಸ್‌ಕ್ಯಾಂಪ್‌ನಿಂದ ಪ್ರಯಾಣ ಮುಂದುವರಿಸಿದ್ದಾರೆ.

ಬೆಂಗಳೂರು (ಜು.10): ರಾಜ್ಯದಿಂದ ಅಮರನಾಥ ಯಾತ್ರೆಗೆ ತೆರಳಿದ್ದು 80 ಅಲ್ಲ, 300ಕ್ಕೂ ಹೆಚ್ಚು ಯಾತ್ರಿಕರು. ಅವರೆಲ್ಲರೂ ಸುರಕ್ಷಿತವಾಗಿದ್ದು, ಭಾನುವಾರ ತಾವು ಉಳಿದಿದ್ದ ಬೇಸ್‌ಕ್ಯಾಂಪ್‌ನಿಂದ ಪ್ರಯಾಣ ಮುಂದುವರಿಸಿದ್ದಾರೆ. ಭಾನುವಾರ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಗದಗಿನ 23 ಯಾತ್ರಾರ್ಥಿಗಳು ಸಾಮಾನ್ಯ ಹೆಲಿಕಾಪ್ಟರ್‌ನಲ್ಲೇ ಬೇಸ್‌ಕ್ಯಾಂಪ್‌ನಿಂದ ನೀಲ್‌ಗ್ರಥ್‌ ಕ್ಯಾಂಪ್‌ಗೆ ಬಂದು, ಅಲ್ಲಿಂದ ಶ್ರೀನಗರದಲ್ಲಿ ಹಿಂದೆ ಉಳಿದುಕೊಂಡಿದ್ದ ಹೋಟೆಲ್‌ಗೆ ಆಗಮಿಸಿದ್ದಾರೆ. ಬುಧವಾರದ ವೇಳೆಗೆ ಗದಗಿಗೆ ಬರುವುದಾಗಿ ಅವರು ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಿಂದ ತೆರಳಿರುವ ಐವರು ಯಾತ್ರಿಕರು ಪಂಚತರಣಿ ತಲುಪಿದ್ದು, ಸೋಮವಾರ ಅಲ್ಲಿಂದ ಅಮರನಾಥ ದೇವಾಲಯಕ್ಕೆ ಪ್ರಯಾಣ ಬೆಳೆಸುವುದಾಗಿ ತಿಳಿಸಿದ್ದಾರೆ. ಬೆಂಗಳೂರು ಹಾಗೂ ಮಾಗಡಿಯಿಂದ ತೆರಳಿರುವ 52 ಯಾತ್ರಿ​ಕರು ಲಡಾಕ್‌ ಹಾಗೂ ಬೇಸ್‌ಕ್ಯಾಂಪ್‌ನಲ್ಲಿ ಸುರ​ಕ್ಷಿ​ತ​ವಾ​ಗಿದ್ದು, ಸೋಮವಾರ ಶ್ರೀನಗರಕ್ಕೆ ತೆರಳಿ ಮಂಗಳವಾರ ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದಾರೆ. ದ.ಕ. ಹಾಗೂ ಉಡುಪಿ ಜಿಲ್ಲೆಯ 20 ಯಾತ್ರಾರ್ಥಿಗಳು ಭಾನುವಾರ ಪಹಾಲ್ಗಮ್‌ ಬೇಸ್‌ಕ್ಯಾಂಪ್‌ ತಲುಪಿದ್ದು, ಸೋಮವಾರ ಅಮರನಾಥ ಯಾತ್ರೆ ಮುಂದುವರಿಸುವುದಾಗಿ ತಿಳಿಸಿದ್ದಾರೆ. 

ಇದೇ ವೇಳೆ, ಧಾರವಾಡ ಜಿಲ್ಲೆಯ ಕರಡಿಗುಡ್ಡದಿಂದ ಹಾಗೂ ಕಲಬುರಗಿಯಿಂದ ತೆರಳಿರುವ ತಲಾ ಐವರು ಯಾತ್ರಿಕರು ಕೂಡ ಸುರಕ್ಷಿತವಾಗಿರುವುದಾಗಿ ತಿಳಿದು ಬಂದಿದೆ. ಈ ಮಧ್ಯೆ, ಗದಗಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಎಚ್‌.ಕೆ.ಪಾಟೀಲ, ರಾಜ್ಯದಿಂದ ಅಮರನಾಥ ಯಾತ್ರೆಗೆ 300ಕ್ಕೂ ಹೆಚ್ಚು ಯಾತ್ರಿಕರು ತೆರಳಿದ್ದು, ಅವರೆಲ್ಲಾ ಸುರಕ್ಷಿತವಾಗಿರುವುದಾಗಿ ತಿಳಿದು ಬಂದಿದೆ. ಅವರನ್ನು ಸುರಕ್ಷಿತವಾಗಿ ಕರೆ ತರಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. 

ಅಮರನಾಥ ಭೂಕುಸಿತ: 80 ಕನ್ನಡಿಗರು ಅತಂತ್ರ, ರಕ್ಷಣೆಗೆ ರಾಜ್ಯ ಸರ್ಕಾರದಿಂದ ತಂಡ ರವಾನೆ

ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್‌ ಹಾಗೂ ಸುನೀಲ್‌ ಕುಮಾರ ನೇತೃತ್ವದ ರಾಜ್ಯದ ಅಧಿಕಾರಿಗಳ ತಂಡ ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಸರಕಾರದೊಂದಿಗೆ ಸಮನ್ವಯ ಸಾಧಿಸಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ. ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಮಾರ್ಗಮಧ್ಯೆ ಸಿಲುಕಿಕೊಂಡು ಯಾತ್ರಿಕರು ಸಂಕಷ್ಟದಲ್ಲಿದ್ದರು. ಭಾನುವಾರ ಅಲ್ಲಿ ಕಡಿಮೆಯಾಗಿದ್ದು, ಪರಿಸ್ಥಿತಿ ಸುಧಾರಿಸಿದೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌