ಧಾರವಾಡ-ಬೆಂಗ್ಳೂರು ‘ವಂದೇ ಭಾರತ್‌’ ರೈಲಿಗೆ ಕಲ್ಲೆಸೆತ, ಗಾಜು ಪುಡಿಪುಡಿ

Published : Jul 02, 2023, 06:30 AM ISTUpdated : Jul 02, 2023, 09:48 AM IST
ಧಾರವಾಡ-ಬೆಂಗ್ಳೂರು ‘ವಂದೇ ಭಾರತ್‌’ ರೈಲಿಗೆ ಕಲ್ಲೆಸೆತ, ಗಾಜು ಪುಡಿಪುಡಿ

ಸಾರಾಂಶ

ಬೆಂಗಳೂರಿನಿಂದ ಬೆಳಗ್ಗೆ ಆಗಮಿಸಿದ್ದ ರೈಲು, ಮರಳಿ ಧಾರವಾಡದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಮಧ್ಯಾಹ್ನ 3.30ರ ಸುಮಾರಿಗೆ ದಾವಣಗೆರೆ ಬಳಿ ಯಾರೋ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ. ಇದರಿಂದ ಸಿ-4 ಕೋಚ್‌ನ ಕಿಟಕಿಗೆ ಕಲ್ಲು ಬಡಿದಿದ್ದು, ಗ್ಲಾಸ್‌ ಬಿರುಕು ಬಿಟ್ಟಿದೆ. 

ಹುಬ್ಬಳ್ಳಿ(ಜು.02):  ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಸಂಚಾರ ಆರಂಭಿಸಿರುವ ರಾಜ್ಯದ ಎರಡನೇ ಹೈಸ್ಪೀಡ್‌ ರೈಲು, ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್‌ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ದಾವಣಗೆರೆ ಬಳಿ ಶನಿವಾರ ಸಂಭವಿಸಿದೆ.

ಬೆಂಗಳೂರಿನಿಂದ ಬೆಳಗ್ಗೆ ಆಗಮಿಸಿದ್ದ ರೈಲು, ಮರಳಿ ಧಾರವಾಡದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಮಧ್ಯಾಹ್ನ 3.30ರ ಸುಮಾರಿಗೆ ದಾವಣಗೆರೆ ಬಳಿ ಯಾರೋ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ. ಇದರಿಂದ ಸಿ-4 ಕೋಚ್‌ನ ಕಿಟಕಿಗೆ ಕಲ್ಲು ಬಡಿದಿದ್ದು, ಗ್ಲಾಸ್‌ ಬಿರುಕು ಬಿಟ್ಟಿದೆ. 

ಧಾರವಾಡ- ಬೆಂಗಳೂರು ವಂದೇ ಭಾರತ್‌ ರೈಲು ಟಿಕೆಟ್ ದರದ ಸಂಪೂರ್ಣ ಮಾಹಿತಿ ಇಲ್ಲಿದೆ

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಆರ್‌ಪಿಎಫ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ