
ವಿಜಯಪುರ ನ.29): ವಿಜಯಪುರ ಜಿಲ್ಲೆ, ನಿಡಗುಂದಿ: ವಿಜಯಪುರ ಜಿಲ್ಲೆಯಾದ್ಯಂತ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ನಿಡಗುಂದಿ ಪಟ್ಟಣದಲ್ಲಿ ಮತ್ತೊಂದು ದಾಳಿ ಸಂಭವಿಸಿದೆ. ನಿನ್ನೆ (ಶುಕ್ರವಾರ) ಸಂಜೆ ಪಟ್ಟಣದ ಬಿಲಾಲ್ ಕಾಲೋನಿಯಲ್ಲಿ ಟ್ಯೂಷನ್ನಿಂದ ಮನೆಗೆ ತೆರಳುತ್ತಿದ್ದ ಮಹಮ್ಮದ್ ಬಾಣಕರ (6) ಎಂಬ ಬಾಲಕನ ಮೇಲೆ ಬೀದಿ ನಾಯಿಗಳ ಗುಂಪು ಏಕಾಏಕಿ ಎರಗಿ ಕಚ್ಚಿದೆ.
ಟ್ಯೂಷನ್ ಮುಗಿಸಿ ತನ್ನ ಪಾಡಿಗೆ ತಾನು ಬರುತ್ತಿದ್ದ ಬಾಲಕನ ಮೇಲೆ ಎರಗಿದ ಬೀದಿ ನಾಯಿಗಳು ಬಾಲಕನ ತೊಡೆಯ ಭಾಗಕ್ಕೆ ಗಂಭೀರವಾಗಿ ಕಚ್ಚಿ ಗಾಯಗೊಳಿಸಿವೆ. ಈ ವೇಳೆ ತಕ್ಷಣ ಬಾಲಕನ ಸಹೋದರ, ಸ್ಥಳೀಯರು ಕೂಡಲೇ ದಾವಿಸಿ ಬಂದು ನಾಯಿಗಳನ್ನು ಓಡಿಸಿ ಬಾಲಕನನ್ನು ರಕ್ಷಿಸಿದ್ದಾರೆ. ಅಷ್ಟೊತ್ತಿಗಾಗಲೇ ತೊಡೆ ಭಾಗಕ್ಕೆ ಕಚ್ಚಿ ಗಾಯಗೊಳಿಸಿದ್ದ ಶ್ವಾನಗಳು. ತಕ್ಷಣವೇ ಬಾಲಕನನ್ನು ನಿಡಗುಂದಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಹಮ್ಮದ್ ಬಾಣಕರನನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಮಾಹಿತಿ ತಿಳಿದು ತಹಸೀಲ್ದಾರ್ ಎಡಿ ಅಮರಾವಡಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀದಿ ನಾಯಿಗಳ ನಿರಂತರ ದಾಳಿಯಿಂದಾಗಿ ಪಟ್ಟಣದ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಸ್ಥಳೀಯ ಆಡಳಿತವು ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ