ಬೆಂಗಳೂರಲ್ಲಿ ಬೀದಿ ನಾಯಿ ಮೇಲೆ ಕಾಮುಕರಿಂದ ಸಾಮೂಹಿಕ ರೇಪ್ ಆರೋಪ!

Kannadaprabha News, Ravi Janekal |   | Kannada Prabha
Published : Nov 03, 2025, 07:30 AM IST
Stray dog cruelty in Bengaluru

ಸಾರಾಂಶ

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಬೀದಿ ನಾಯಿಯೊಂದರ ಮೇಲೆ ಸಾಮೂಹಿಕ ಅತ್ಯಾ೧ಚಾರ ನಡೆದಿದೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ನಿವಾಸಿಯೊಬ್ಬರ ದೂರಿನ ಅನ್ವಯ ಪೊಲೀಸರು ಎಫ್‌ಐಆರ್‌ ದಾಖಲಿಸಿ, ನಾಯಿಯ ವೈದ್ಯಕೀಯ ಪರೀಕ್ಷೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರು (ನ.3): ಬೀದಿ ನಾಯಿಯೊಂದರ ಮೇಲೆ ವಿಕೃತ ಕಾಮಿಗಳು ಸಾಮೂಹಿಕ ಅತ್ಯಾ೧ಚಾರ ಎಸೆಗಿದ ಆರೋಪದಡಿ ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕನಾಯಕನಹಳ್ಳಿಯ ಅಪಾರ್ಟ್‌ಮೆಂಟ್‌ವೆಂದರ ನಿವಾಸಿ ದಿತಿಪ್ರಿಯಾ ಎಂಬುವವರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಪ್ರಾಣಿಗಳ ಮೇಲಿನ ಹಿಂಸೆ ನಿಯಂತ್ರಣ ಕಾಯ್ದೆ ಮತ್ತು ಬಿಎನ್‌ಎಸ್‌ ಸೆಕ್ಷನ್‌ 325 ಅಡಿ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ದೂರು?:

ಬೀದಿ ನಾಯಿಯೊಂದರ ಮೇಲೆ ಅಪರಿಚಿತರು ಸಾಮೂಹಿಕ ಅತ್ಯಾ೧ಚಾರ ನಡೆಸುತ್ತಿದ್ದರು ಎಂದು ದೂರುದಾರೆ ದಿತಿಪ್ರಿಯಾಗೆ ಆಕೆಯ ಸ್ನೇಹಿತಯೊಬ್ಬರು ಅ.13ರಂದು ತಿಳಿಸಿದ್ದರಂತೆ. ಮಿಲಿ ಎನ್ನುವ ನಾಯಿಗೆ ದಿತಿಪ್ರಿಯಾ ನಿತ್ಯ ಊಟ ಹಾಕುತ್ತಿದ್ದರು. ಅ.16ರಂದು ದಿತಿಪ್ರಿಯಾ ಅವರು ಮಿಲಿಯನ್ನು ನೋಡಿದಾಗ, ಅದರ ಖಾಸಗಿ ಅಂಗ ಊದಿಕೊಂಡಿರುವುದು ಕಂಡು ಬಂದಿದೆ. ಹೀಗಾಗಿ ಅಂದು ಸಾಮೂಹಿಕ ಅತ್ಯಾ೧ಚಾರಕ್ಕೆ ಒಳಗಾದ ಬೀದಿ ನಾಯಿ ಇದೇ ಇರಬಹುದು ಎಂದು ದೂರುದಾರೆ ಶಂಕಿಸಿದ್ದಾರೆ. ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ಳಂದೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಎಫ್‌ಎಸ್ಎಲ್‌ಗೆ ಮಾದರಿ ರವಾನೆ:

ಪ್ರಕರಣದ ತನಿಖೆಗಿಳಿದ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲ ಸುಮಾರು 25 ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ, ಮಿಲಿ ಎಂಬ ಬೀದಿ ನಾಯಿಯನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ನಾಯಿಯನ್ನು ಪಶು ಆಸ್ಪತ್ರೆಗೆ ಕೊಂಡೊಯ್ದು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ಈ ನಾಯಿ ಮೇಲೆ ಅತ್ಯಾ೧ಚಾರ ನಡೆದಿರುವ ಬಗ್ಗೆ ಖಚಿತತೆ ಇಲ್ಲ. ಆದರೂ ನಾಯಿಯ ವೆಜೈನಲ್ ಸ್ವಾಬ್‌ ಅನ್ನು ಸಂಗ್ರಹಿಸಿ, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್‌) ಕಳುಹಿಸಿದ್ದಾರೆ. ಈ ವರದಿ ಬಂದ ಬಳಿಕವೇ ಅತ್ಯಾ೧ಚಾರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!