ಮಹಾರಾಷ್ಟ್ರದಲ್ಲಿ ಮೀಸಲು ಹೋರಾಟ; ಕರ್ನಾಟಕದ ಬಸ್‌ಗೆ ಬೆಂಕಿ!

Published : Oct 31, 2023, 05:51 AM IST
ಮಹಾರಾಷ್ಟ್ರದಲ್ಲಿ ಮೀಸಲು ಹೋರಾಟ; ಕರ್ನಾಟಕದ ಬಸ್‌ಗೆ ಬೆಂಕಿ!

ಸಾರಾಂಶ

ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಮರಾಠ ಮೀಸಲು ಹೋರಾಟ ಹಿಂಸಾರೂಪ ಪಡೆದಿದ್ದು, ಸೋಮವಾರ ತಡರಾತ್ರಿ ಮಹಾರಾಷ್ಟ್ರದ ಉಮರ್ಗಾ ಬಳಿಯ ತುರೂರಿನಲ್ಲಿ ಕರ್ನಾಟಕದ ಬಸ್ಸೊಂದಕ್ಕೆ ಬೆಂಕಿ ಹಚ್ಚಲಾಗಿದೆ.

ಬೀದರ್‌ (ಅ.31) :  ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಮರಾಠ ಮೀಸಲು ಹೋರಾಟ ಹಿಂಸಾರೂಪ ಪಡೆದಿದ್ದು, ಸೋಮವಾರ ತಡರಾತ್ರಿ ಮಹಾರಾಷ್ಟ್ರದ ಉಮರ್ಗಾ ಬಳಿಯ ತುರೂರಿನಲ್ಲಿ ಕರ್ನಾಟಕದ ಬಸ್ಸೊಂದಕ್ಕೆ ಬೆಂಕಿ ಹಚ್ಚಲಾಗಿದೆ.

ಸುಮಾರು 200ಕ್ಕೂ ಹೆಚ್ಚು ಮಂದಿಯಿದ್ದ ಪ್ರತಿಭಟನಾಕಾರರು, ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ಸನ್ನು ತಡೆದು, ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿ, ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ, ಸ್ಥಳೀಯ ಪೊಲೀಸರ ಸಹಕಾರದಿಂದ ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತವಾಗಿ ಅವರು ತಲುಪಬೇಕಾದ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್ಸುಗಳ ಸಂಚಾರವನ್ನು ಕೆಕೆಆರ್ ಟಿಸಿ ಸ್ಥಗಿತಗೊಳಿಸಿದೆ.

ಬೆಳಗಾವಿ ಗಡಿ ಪ್ರವೇಶಿಸದಂತೆ 3 ಮಹಾ ಸಚಿವರು, ಒಬ್ಬ ಸಂಸದರಿಗೆ ನಿರ್ಬಂಧ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್